Subscribe to Updates

    Get the latest creative news from FooBar about art, design and business.

    What's Hot

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಸುಗಮ ಸಂಗೀತ’ ಕಾರ್ಯಕ್ರಮ | ಮೇ 25        

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರಂಗ ಶಂಕರದಲ್ಲಿ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ಏಪ್ರಿಲ್ 29
    Drama

    ಬೆಂಗಳೂರಿನ ರಂಗ ಶಂಕರದಲ್ಲಿ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ಏಪ್ರಿಲ್ 29

    April 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಲಾವಿಲಾಸಿ ತಂಡದ ಕಲಾವಿದರು ಪ್ರಸ್ತುತ ಪಡಿಸುವ ಪಿ. ಲಂಕೇಶ್ ಅವರ ‘ಕ್ರಾಂತಿ ಬಂತು # ಕ್ರಾಂತಿ’ ಎಂಬ ನಾಟಕ ಪ್ರದರ್ಶನವನ್ನು ದಿನಾಂಕ 29 ಏಪ್ರಿಲ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ರಂಗ ಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಯುವ ನಿರ್ದೇಶಕ ಅಭಿಷೇಕ ಚಕ್ರಣ್ಣವರ ನಿರ್ದೇಶಿಸುತ್ತಿರುವ ನಾಟಕವನ್ನು ಹಿರಿಯ ರಂಗಕರ್ಮಿ ಮಹಾದೇವ ಹಡಪದ ಇವರು ವಿನ್ಯಾಸ ಮಾಡಿದ್ದಾರೆ. ನಾಟಕದ ಅವಧಿ 100 ನಿಮಿಷಗಳು. ಹೆಚ್ಚಿನ ಮಾಹಿತಿಗೆ 9739398819 ಸಂಖ್ಯೆಗೆ ಕರೆ ಅಥವಾ ವಾಟ್ಸಪ್‌ ಮಾಡಬಹುದು.

    ‘ಕ್ರಾಂತಿ ಬಂತು # ಕ್ರಾಂತಿ’ ನಾಟಕವನ್ನು ಸಾಹಿತಿ ಪಿ. ಲಂಕೇಶ್‌ ಅವರ ‘ಕ್ರಾಂತಿ ಬಂತು ಕ್ರಾಂತಿ’ ನಾಟಕದ ಪಠ್ಯವನ್ನು ಪ್ರಸ್ತುತಕ್ಕೆ ಅಳವಡಿಸಿಕೊಂಡು ಕಟ್ಟಲಾಗಿದೆ. ಈ ನಾಟಕವು ಮೊದಲ ಬಾರಿಗೆ ಪ್ರಕಟವಾಗಿದ್ದು 1971ರಲ್ಲಿ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳಲ್ಲಿ ಅಂದಿಗೂ – ಇಂದಿಗೂ ಸಾಕಷ್ಟು ಬದಲಾವಣೆಗಳು ಕಂಡುಬಂದರೂ, ಆ ಬದಲಾದ ಪರಿಸ್ಥಿತಿಗಳು ತಮ್ಮ ಮೂಲ ಸ್ವರೂಪವನ್ನು ಹಾಗೆಯೇ ಉಳಿಸಿಕೊಂಡಿರುವುದು ನೋವಿನ ಸಂಗತಿ. ಸಮಾಜವಾದ, ಸಮತಾವಾದ, ಕ್ರಾಂತಿಯಂತಹ ವಿಚಾರಗಳ ಘರ್ಷಣೆ ಉತ್ತುಂಗದಲ್ಲಿದ್ದಾಗ ಬರೆಯಲ್ಪಟ್ಟಿರುವ ನಾಟಕ ಇಂದಿನ ಸಾಮಾಜಿಕ ಮತ್ತು ರಾಜಕೀಯ ಸನ್ನಿವೇಶಗಳನ್ನು ಕೂಡ ಸಮರ್ಥವಾಗಿ ಪ್ರತಿಧ್ವನಿಸುತ್ತದೆ. ಮೂಲ ಪಠ್ಯದ ವಿಸ್ತರಣೆಯನ್ನು ಕಲಾವಿಲಾಸಿ ತಂಡದ ಕಲಾವಿದರು ಈಗಿನ ಕಾಲದ ಸಂಕೀರ್ಣ ಮತ್ತು ಸೂಕ್ಷ್ಮ ಘಟನೆಗಳನ್ನು ಇಟ್ಟುಕೊಂಡು ಇಂದಿನ ತಲೆಮಾರಿಗೆ ಹತ್ತಿರವಾಗುವ ಹಾಗೆ ವಿಸ್ತರಿಸಿದ್ದಾರೆ.

    ಬಂಡವಾಳ ಶಾಹಿಗಳ ಧೋರಣೆ, ವ್ಯವಸ್ಥೆಯ ಹಸ್ತಕ್ಷೇಪ, ತಮ್ಮ ಲಾಭಕ್ಕಾಗಿ ಅಮಾಯಕರ ದಿಕ್ಕು ತಪ್ಪಿಸುವ ಪ್ರಭಾವಿಗಳ ಅವಕಾಶವಾದಿ ಧೋರಣೆ, ಕ್ಷಮತೆ ಕಳೆದುಕೊಳ್ಳುವ ಯುವಕರ ಆಕ್ರೋಶ, ಸಾಮಾಜಿಕ ಜಾಲತಾಣಗಳ ಸಾಮೂಹಿಕ ಅಭಿಪ್ರಾಯಗಳು ಮತ್ತು ಇವೆಲ್ಲವನ್ನು ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ಬಳಸಿಕೊಳ್ಳುವ ವೇಗದ ಮಾಧ್ಯಮಗಳು… ಹೀಗೆ ನಾಟಕವು ಹಲವು ಜ್ವಲಂತ ಸಮಸ್ಯೆಗಳಿಗೆ ಪ್ರೇಕ್ಷಕರನ್ನು ಮುಖಾಮುಖಿಗೊಳಿಸುತ್ತಾ ಹೋಗುತ್ತದೆ. ಸರಿ ತಪ್ಪುಗಳು ಅವರವರ ವಿವೇಚನೆಗೆ ಬಿಟ್ಟಿದ್ದು. ನಾಟಕದುದ್ದಕ್ಕೂ ತಮಗೆ ಸರಿ ಎನಿಸುವ ನಿರ್ಧಾರಗಳನ್ನು ತಗೆದುಕೊಂಡು ತಮ್ಮ ದಾರಿಗಳನ್ನು ಆರಿಸಿಕೊಳ್ಳುವ ಪಾತ್ರಗಳು ಈ ಸಂಕೀರ್ಣ ವ್ಯವಸ್ಥೆಯ ಸುಳಿಯಲ್ಲಿ ಸಿಕ್ಕಿಕೊಂಡು ಕುತೂಹಲವನ್ನು ಕೆರಳಿಸುತ್ತವೆ. ಹಾಸ್ಯ ಮಿಶ್ರಿತ ವಿಡಂಭನೆಯೊಂದಿಗೆ ಕಟ್ಟಿರುವ ನಾಟಕ ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆಯನ್ನೂ ಒದಗಿಸುತ್ತದೆ.

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Articleಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ‘ದೊಡ್ಡಮರದ ನೆರಲಿನಲಿ’ ಕಲೆ ಮತ್ತು ಸಾಂಸ್ಕೃತಿಕ ಶಿಬಿರ | ಏಪ್ರಿಲ್ 29ರಿಂದ ಮೇ 18
    Next Article ಕ.ಸಾ.ಪ.ದಿಂದ ಪೆರ್ಲದಲ್ಲಿ ‘ಕವಿ ಕಾವ್ಯ ಸಂವಾದ’
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಸುಗಮ ಸಂಗೀತ’ ಕಾರ್ಯಕ್ರಮ | ಮೇ 25        

    May 21, 2025

    ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.