Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದಲ್ಲಿ ‘ವಿದುಷಿ ಕೃಷ್ಣಾ ಹಾನಗಲ್ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ
    Awards

    ಧಾರವಾಡದಲ್ಲಿ ‘ವಿದುಷಿ ಕೃಷ್ಣಾ ಹಾನಗಲ್ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

    June 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಭಾರತೀಯ ಸಂಗೀತ ವಿದ್ಯಾಲಯ, ದಾಸಾ ಟ್ರಸ್ಟ್ ಹಾಗೂ ಗಂಗೂಬಾಯಿ ಹಾನಗಲ್ ಸಂಗೀತ ವಿದ್ಯಾಲಯದ ಸಹಯೋಗದಲ್ಲಿ ದಿನಾಂಕ 02-06-2024ರಂದು ಸೃಜನಾ ರಂಗಮಂದಿರದಲ್ಲಿ ನಡೆದ ‘ಮ್ಯೂಜಿಕ್ ಫೆಸ್ಟಿವಲ್’ ಕಾರ್ಯಕ್ರಮದಲ್ಲಿ ಖ್ಯಾತ ಸಾರಂಗಿ ವಾದಕ ಉಸ್ತಾದ್ ಫಯಾಜ್ ಖಾನ್ ಅವರಿಗೆ ‘ವಿದುಷಿ ಕೃಷ್ಣಾ ಹಾನಗಲ್ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

    ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ “ಮಾಧ್ಯಮಿಕ ಶಾಲೆಗಳಲ್ಲಿ ಮಕ್ಕಳಿಗೆ ಸಂಗೀತ ಕಲಿಸಲು ಸರಕಾರ ಕ್ರಮ ಕೈಗೊಳ್ಳುವುದು ಅಗತ್ಯ. ಮಕ್ಕಳಿಗೆ ಸಂಗೀತ ಕಲಿಸುವುದರಿಂದ ಮಕ್ಕಳ ಏಕಾಗ್ರತೆ ಹೆಚ್ಚುತ್ತದೆ. ವಿಜ್ಞಾನ, ಗಣಿತದೊಂದಿಗೆ ಮಕ್ಕಳು ಸಂಗೀತವನ್ನೂ ಕಲಿಯುವುದು ಅವಶ್ಯಕ ಎಂಬುದನ್ನು ಶಿಕ್ಷಕರು ಹಾಗೂ ಪಾಲಕರು ಅರಿಯುವುದು ಅವಶ್ಯ. ಮಾನಸಿಕ ನೆಮ್ಮದಿ ಪಡೆಯಲು ಸಂಗೀತ ಸಹಾಯಕಾರಿದೆ. ‘ವಿದುಷಿ ಕೃಷ್ಣಾ ಹಾನಗಲ್ ರಾಷ್ಟ್ರೀಯ ಪ್ರಶಸ್ತಿ’ ಶ್ರೇಷ್ಠ ಗಾಯಕ ಹಾಗೂ ಸಾರಂಗಿ ವಾದಕ ಫಯಾಜ್ ಖಾನ್ ಅವರಿಗೆ ಲಭಿಸಿರುವುದು ಖುಷಿ ನೀಡಿದೆ” ಎಂದು ಹೇಳಿದರು.

    ವೇದಿಕೆ ಮೇಲೆ ವಿನಯ ನಾಯಕ್, ಡಾ. ಸೌಭಾಗ್ಯ ಕುಲಕರ್ಣಿ ಉಪಸ್ಥಿತರಿದ್ದರು. ಮಾಯಾ ರಾಮನ್ ನಿರೂಪಿಸಿದರು. ‘ಕೃಷ್ಣಾ ಹಾನಗಲ್ ರಾಷ್ಟ್ರೀಯ ಪ್ರಶಸ್ತಿ’ಯು ರೂ.25,000/- ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಧ್ರುವ ಅಜಯ್ ಹಾನಗಲ್ ಇವರಿಂದ ಕೊಳಲು ವಾದನ ಮತ್ತು ಉಸ್ತಾದ್ ಫೈಯಾಜ್ ಖಾನ್ ಇವರಿಂದ ಹಾಡುಗಾರಿಕೆ ಪ್ರಸ್ತುತಗೊಂಡಿತು. ಪಂಡಿತ್ ಭರತ್ ಕಾಮತ್ ಮತ್ತು ಡಾ. ಉದಯ್ ಕುಲಕರ್ಣಿ ಇವರು ತಬ್ಲಾದಲ್ಲಿ ಮತ್ತು ಶ್ರೀ ಸರ್ಫರಾಜ್ ಖಾನ್ ಇವರು ಸಾರಂಗಿಯಲ್ಲಿ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಇಪ್ಪತ್ತೈದು ನಾಟಕಗಳ ಬೃಹತ್ ಕೃತಿ ‘ರಂಗ ಸಂಗಮ’ ಲೋಕಾರ್ಪಣೆ
    Next Article ‘ವೀರ ಶತಕಂಠ’ ಪ್ರಸಂಗ ಬಿಡುಗಡೆ
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.