Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುತ್ತಾರ್ ಪದವು ಶ್ರೀ ರಾಜ ರಾಜೇಶ್ವರಿ ದೇವಸ್ಥಾನದಲ್ಲಿ ‘ಶ್ರೀಕೃಷ್ಣ ಕಾರುಣ್ಯ’ ಯಕ್ಷಗಾನ ಬಯಲಾಟ
    Yakshagana

    ಕುತ್ತಾರ್ ಪದವು ಶ್ರೀ ರಾಜ ರಾಜೇಶ್ವರಿ ದೇವಸ್ಥಾನದಲ್ಲಿ ‘ಶ್ರೀಕೃಷ್ಣ ಕಾರುಣ್ಯ’ ಯಕ್ಷಗಾನ ಬಯಲಾಟ

    August 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನ ಕಲಾವಿದ ಕೌಶಿಕ್ ಕರ್ಕೆರ ಇವರ ತಂಡದ ಯಕ್ಷಗಾನ ಪ್ರದರ್ಶನವು 14 ಆಗಸ್ಟ್ 2024ರಂದು ಕುತ್ತರ್ ಪದವು ಶ್ರೀ ರಾಜ ರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ರಾಜೇಶ್ ಅತ್ತಾವರ್ ಮಾತನಾಡಿ “ಯಕ್ಷಗಾನವು ಆರ್ಥಿಕ ಬೆಂಬಲದಿಂದ ಬೆಳಗುವ ರಾಜಕಲೆ. ಅದಕ್ಕೆ ಬೆಂಬಲ ಹಾಗೂ ಪ್ರೋತ್ಸಾಹ ಸದಾ ದೊರೆತ ಕಾರಣದಿಂದ ಅದು ಇಂದು ವಿಶ್ವಮಾನ್ಯ ಕಲೆಯಾಗಿ ಮೆರೆಯುತ್ತಿದೆ. ಎಲ್ಲಾ ದೇವಾಲಯಗಳೂ ಇದಕ್ಕೆ ಸಹಕರಿಸಬೇಕು. ಅಂತೆಯೇ ಸರಕಾರವೂ ತಕ್ಕ ಪ್ರೋತ್ಸಾಹ ನೀಡುತ್ತಾ ಬರುತ್ತಿರುವುದು ಶ್ಲಾಘನೀಯ. ನಮ್ಮ ರಾಜರಾಜೇಶ್ವರಿ ಅಮ್ಮನವರ ಸನ್ನಿಧಿಯಲ್ಲೂ ಅದು ಬೆಳಗುತ್ತಿದೆ. ಧಾರ್ಮಿಕ ಕಲೆಗಳಿಗೆ ಧಾರ್ಮಿಕ ನೆಲೆಗಟ್ಟು ದೊರೆಯಲಿ.” ಎಂದು ಶುಭಹಾರೈಸಿದರು.
    ವೇ. ಮೂ. ರಾಘವೇಂದ್ರ ಹೊಳ್ಳರು ಮಾತನಾಡಿ “ಲಲಿತ ಕಲೆಗಳ ಸಂವರ್ಧನೆಗಾಗಿ ಕಲೆ ಬೆಳೆಯಬೇಕು. ಅದರಲ್ಲೂ ನಮ್ಮ ಮಣ್ಣಿನ ಕಲೆ ಯಕ್ಷಗಾನಕ್ಕೆ ಸಂಘಟನೆಗಳು ಒತ್ತಾಸೆಯಾಗಿ ನಿಂತರೆ ಅವು ಚಿರಕಾಲ ಉಳಿಯಲು ಸಾಧ್ಯ.” ಎಂದು ಹೇಳಿದರು.
    ಕ್ಷೇತ್ರದ ಪದಾಧಿಕಾರಿಗಳಾದ ಜಗನ್ನಾಥ ಸಾಲಿಯಾನ್, ಪವಿತ್ರಾಗಟ್ಟಿ,, ಸುನಿಲ್ ಗಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು. ಸ್ಕಂದ ಮಯ್ಯ ಮತ್ತು ಬಳಗದವರು ಪ್ರಾರ್ಥನೆ ನಡೆಸಿಕೊಟ್ಟರು. ಮಾಧವ ನಾವಡ ನಿರ್ವಹಿಸಿ, ವಿಜಯಲಕ್ಷ್ಮೀ ಧನ್ಯವಾದವಿತ್ತರು.
    ಸಭಾಕಾರ್ಯಕ್ರಮದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ವಾಸುದೇವ ಮಯ್ಯರ ಹಾಡುಗಾರಿಕೆಯಲ್ಲಿ ‘ಶ್ರೀಕೃಷ್ಣ ಕಾರುಣ್ಯ’ ಯಕ್ಷಗಾನ ಬಯಲಾಟ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಗಾಂವ್ಕರ್ ಯಕ್ಷ ಶ್ರಾವಣ ಸಂಜೆ’ ಯಕ್ಷಗಾನ ಪ್ರದರ್ಶನ | ಆಗಸ್ಟ್ 20
    Next Article ಉದಯೋನ್ಮುಖ ಗ್ರಾಮೀಣ ನೃತ್ಯಪ್ರತಿಭೆ ಖುಷಿ ದೇವರಾಜ್ ರಂಗಪ್ರವೇಶ
    roovari

    Comments are closed.

    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.