Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 24

    November 19, 2025

    ಹೊಸಳ್ಳಿಯಲ್ಲಿ ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ನವೆಂಬರ್ 21

    November 19, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ‘ವಿಶ್ವ ಪರಂಪರೆ ಸಪ್ತಾಹ’ | ನವೆಂಬರ್ 19ರಿಂದ 25

    November 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನೃತ್ಯನಿಕೇತನ ಕೊಡವೂರಿನ ‘ಕೃಷ್ಣಪ್ರೇಮ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ | ನವೆಂಬರ್ 19ರಂದು
    Awards

    ನೃತ್ಯನಿಕೇತನ ಕೊಡವೂರಿನ ‘ಕೃಷ್ಣಪ್ರೇಮ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ | ನವೆಂಬರ್ 19ರಂದು

    November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ನೃತ್ಯನಿಕೇತನ ಕೊಡವೂರು ಸಂಸ್ಥೆಯ ವತಿಯಿಂದ ಕೊಡಲ್ಪಡುವ ಐದನೇ ವರುಷದ ‘ಕೃಷ್ಣಪ್ರೇಮ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 19-11-2023 ಆದಿತ್ಯವಾರದಂದು ಸಂಜೆ 5-30ರಿಂದ ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತಮಂಟಪದಲ್ಲಿ ನಡೆಯಲಿದೆ.

    ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತ್ಯ ವಿಮರ್ಶಕರಾದ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ವಹಿಸಿಕೊಳ್ಳಲಿದ್ದಾರೆ. ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸಾಧು ಸಾಲ್ಯಾನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮತ್ತು ಉಡುಪಿಯ ಹಿರಿಯ ಉದ್ಯಮಿಗಳಾದ ಶ್ರೀ ವಿಶ್ವನಾಥ್ ಶೆಣೈಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಈ ಬಾರಿಯ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದ ನೃತ್ಯ ಸಾಹಿತ್ಯ ಕ್ಷೇತ್ರದ ಸಾಧಕಿ ವಿದುಷಿ ಬಿ.ಸುಮಂಗಲಾ ರತ್ನಾಕರ್ ಮಂಗಳೂರು, ನೃತ್ಯವಾದ್ಯ ಸಂಗೀತ ಕ್ಷೇತ್ರದ ಸಾಧಕರಾದ ಶ್ರೀ ಬಾಲಚಂದ್ರ ಭಾಗವತ್ ಉಡುಪಿ, ನೃತ್ಯವರ್ಣಾಲಂಕಾರ ಕ್ಷೇತ್ರದ ಸಾಧಕ ಶ್ರೀ ರಮೇಶ್ ಕೆ. ಪಣಿಯಾಡಿ, ನಾಟಕ, ಸಂಗೀತ ಮತ್ತು ನಿರ್ದೇಶನದ ಸಾಧಕ ಶ್ರೀ ಗುರುರಾಜ್ ಮಾರ್ಪಳ್ಳಿ, ನಾಟಕದ ನಟನಾ ಕ್ಷೇತ್ರದ ಶ್ರೀ ಗೋವಿಂದ ಐತಾಳ್ ಕೊಡವೂರು ಮತ್ತು ಶ್ರೀ ಕಾಳು ಶೇರಿಗಾರ್ ಕೊಡವೂರು ಇವರಿಗೆ ಪ್ರದಾನ ಮಾಡಲಾಗುವುದು.

    ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಡಾ. ಶ್ರೀ ಪಾದ ಭಟ್ ಇವರ ವಿನ್ಯಾಸ ಮತ್ತು ನಿರ್ದೇಶನದ ಹಾಗೂ ಮೇಘಸಮೀರ ಮತ್ತು ದಿಶಾ ರಮೇಶ್ ಅಭಿನಯದ ‘ಕಣಿವೆಯ ಹಾಡು’ ನಾಟಕ ಪ್ರದೇಶನಗೊಳ್ಳಲಿದೆ. ನೃತ್ಯನಿಕೇತನ ಕೊಡವೂರು ಇದರ ನಿರ್ದೇಶಕರುಗಳಾದ ವಿದ್ವಾನ್ ಸುಧೀರ್ ರಾವ್ ಮತ್ತು ವಿದುಷಿ ಮಾನಸಿ ಸುಧೀರ್ ತಮಗೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತ ಪರಿಷತ್ ಮಂಗಳೂರು (ರಿ.) – ‘ಮಂಗಳೂರು ಸಂಗೀತೋತ್ಸವ 2023’ | ನವೆಂಬರ್ 22ರಿಂದ 26ರವರೆಗೆ
    Next Article ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’ – ‘ಭೀಷ್ಮ ಪರ್ವ’ | ನವೆಂಬರ್ 18ರಂದು
    roovari

    Add Comment Cancel Reply


    Related Posts

    ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 24

    November 19, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 137’ | ನವೆಂಬರ್ 21

    November 19, 2025

    ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ | ನವೆಂಬರ್ 21

    November 18, 2025

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

    November 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.