Subscribe to Updates

    Get the latest creative news from FooBar about art, design and business.

    What's Hot

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಲೋಕಾರ್ಪಣೆ
    Book Release

    ‘ಕೃಷ್ಣ ಸಿಗಲಿಲ್ಲ’ ಕವನ ಸಂಕಲನ ಲೋಕಾರ್ಪಣೆ

    April 18, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18 ಎಪ್ರಿಲ್ 2023, ಮೂಡುಬಿದಿರೆ: ಶಿಕ್ಷಕಿ ಶ್ರೀಮತಿ ನಾಗಶ್ರೀ ನಾಗರಕಟ್ಟೆ ಅವರ ಚೊಚ್ಚಲ ಕವನ ಸಂಕಲನ ‘ಕೃಷ್ಣ ಸಿಗಲಿಲ್ಲ’ ಕೃತಿಯು ಮೂಡುಬಿದಿರೆ ಎಂ.ಸಿ.ಎಸ್.ಬ್ಯಾಂಕಿನ ಕಲ್ಪವೃಕ್ಷ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು. ಎಂಸಿ.ಎಸ್ ಬ್ಯಾಂಕಿನ ಅಧ್ಯಕ್ಷರಾಗಿರುವ ಎಂ. ಬಾಹುಬಲಿ ಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರೆ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಕವನ ಸಂಕಲನ ಬಿಡುಗಡೆಗೊಳಿಸಿ ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಸಾಹಿತಿಗಳ ಪಾತ್ರವೂ ಪ್ರಮುಖವಾಗಿದ್ದು ಅವರನ್ನು ಬೆಂಬಲಿಸುವುದು ಕೂಡಾ ಸಾಹಿತ್ಯದ ಆರಾಧನೆಯೇ ಆಗುತ್ತದೆ ಎಂಬುದಾಗಿ ತಿಳಿಸಿದರು. ಪತ್ರಕರ್ತ, ಸಂಘಟಕ ಶೇಖರ್ ಅಜೆಕಾರು ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದು ಮುನಿರಾಜ ರೆಂಜಾಳ, ಉಗ್ಗಪ್ಪ ಪೂಜಾರಿ, ಕೆ.ಎನ್.ಪ್ರಕಾಶ್ ಭಂಢಾರಿ, ಸತೀಶ್ ಭಂಡಾರಿ, ಕಿಶೋರ್ ಬೆಳ್ತಂಗಡಿ, ಸದಾನಂದ ನಾರಾವಿ ಮತ್ತು ಪದ್ಮಶ್ರೀ ಭಟ್ ನಿಡ್ಡೋಡಿ ಇವರು ಮುಖ್ಯ ಅತಿಥಿಗಳಾಗಿದ್ದರು ಹಿರಿಯ ಪತ್ರಕರ್ತರಾದ ಧನಂಜಯ ಮೂಡುಬಿದಿರೆಯವರು ಕೃತಿಯನ್ನು ಪರಿಚಯಿಸಿದರು. ಶ್ರೀ ಮುನಿರಾಜ ರೆಂಜಾಳ ಹಾಗೂ ಶೇಖರ್ ಅಜೆಕಾರು ಅವರಿಗೆ ವಿಶೇಷ ಗುರುವಂದನೆ ಗೌರವ ಸನ್ಮಾನವನ್ನು ನೀಡಲಾಯಿತು. ಜೊತೆಗೆ 27 ಮಂದಿ ಗುರುಗಳಿಗೆ ವಿಶೇಷ ಗೌರವ ಸಮರ್ಪಿಸಲಾಯಿತು. ನಂತರ ಪ್ರಿಯಾ ಸುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಒಂಬತ್ತು ಜನ ಕವಿಗಳು ಭಾಗವಹಿಸಿದ್ದರು. ಕವಿಗೋಷ್ಠಿಯ ನಂತರ ನಾಗಶ್ರೀ ಮತ್ತು ಸಂತೋಷ ಭಂಡಾರಿ ದಂಪತಿಯ ಪುತ್ರಿ ಕು| ಚಾರ್ವಿಯ ಹುಟ್ಟುಹಬ್ಬವನ್ನು ಇದೇ ಸಂದರ್ಭದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಗೆ ಮುನ್ನ ಭರತನಾಟ್ಯ ಕಲಾವಿದೆ ಆದ್ಯ ಮೂಡುಬಿದಿರೆ ಅವರಿಂದ ಸ್ವಾಗತ ನೃತ್ಯ ಕಾರ್ಯಕ್ರಮ ನೆರವೇರಿತು.

    ಚೈತ್ರಾ ಉಜಿರೆ ಅವರು ಕಾರ್ಯಕ್ರಮ ನಿರ್ವಹಿಸಿದರು ನಾಗಶ್ರೀ ನಾಗರಕಟ್ಟೆಯವರು ಸ್ವಾಗತಿಸಿ ರಿಶಾಂತ್ ತೋಡಾರು ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ: ‘ಹಕ್ಕಿ ಮತ್ತು ಅವಳು’ ಒಂದು ವಿಶಿಷ್ಟ ರಂಗ ಪ್ರಯೋಗ – ವಿಮರ್ಶಕ ರವಿ ಕಟ್ಕೆರೆ, ಕುಂದಾಪುರ
    Next Article ಮಂಗಳೂರು ನದಿ ಕಿನಾರೆಯಲ್ಲಿ ವಿಶ್ವಕಲಾ ದಿನಾಚರಣೆಯ ಅಂಗವಾಗಿ ‘ಆಶು ಚಿತ್ರಕಲಾ ಶಿಬಿರ’
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    ಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.