Subscribe to Updates

    Get the latest creative news from FooBar about art, design and business.

    What's Hot

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷ ಮಿತ್ರರು ಕುಡುಪು’ ತಂಡದ ವಾರ್ಷಿಕೋತ್ಸವ
    Kannada

    ಯಕ್ಷ ಮಿತ್ರರು ಕುಡುಪು’ ತಂಡದ ವಾರ್ಷಿಕೋತ್ಸವ

    December 28, 2023Updated:December 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ‘ಯಕ್ಷ ಮಿತ್ರರು ಕುಡುಪು’ ತಂಡದ 18ನೇ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 18-12-2023ರಂದು ಮಂಗಳೂರಿನ ಕುಡುಪು ಅನಂತ ಪದ್ಮನಾಭ ಕ್ಷೇತ್ರದಲ್ಲಿ ನಡೆಯಿತು.

    ಇದೇ ಸಂದರ್ಭದಲ್ಲಿ ‘ಯಕ್ಷ ಮಿತ್ರರು ಕುಡುಪು’ ಪರವಾಗಿ ಕುಡುಪು ಶ್ರೀಕ್ಷೇತ್ರದ ಆನುವಂಶಿಕ ಮೊಕ್ತೇಸರ ಮತ್ತು ಕ್ಷೇತ್ರದ ತಂತ್ರಿಗಳೂ ಆದ ವೇದಮೂರ್ತಿ ಕೆ. ನರಸಿಂಹ ತಂತ್ರಿಗಳು ಯಕ್ಷಗಾನ ಹಿಮ್ಮೇಳ ಕಲಾವಿದ ಮಣಿಮುಂಡ ಶ್ರೀ ಸುಬ್ರಹ್ಮಣ್ಯ ಶಾಸ್ತ್ರಿ ಹಾಗೂ ಕುಡುಪು ವಿವಿದ್ದೋದ್ದೇಶ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜನಾರ್ದನ ಕುಡುಪು ಇವರನ್ನು ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು “ಯಕ್ಷಗಾನ ಕಲೆಯನ್ನು ನಂಬಿದವ ಎಂದೂ ಸೋತ ಇತಿಹಾಸವಿಲ್ಲ. ಯಾವುದೇ ಕಲೆಯನ್ನು ಗೌರವಿಸಿದರೂ ಅದುವೇ ಕಲಾವಿದನಿಗೆ ಗೌರವವನ್ನು ತಂದು ಕೊಡುತ್ತದೆ. ಸುಬ್ರಹ್ಮಣ್ಯ ಶಾಸ್ತಿಗಳೂ ಹಾಗೆಯೇ ಶ್ರೀಕ್ಷೇತ್ರದ ಪರಮ ಭಕ್ತರಾಗಿದ್ದು, ಕಟೀಲಮ್ಮನ ಸೇವೆ ಮಾಡುತ್ತಾ ಒಬ್ಬ ಅಪ್ರತಿಮ ಕಲಾರಾಧಾಕರಾಗಿದ್ದಾರೆ. ಆ ಕಾರಣಕ್ಕಾಗಿಯೇ ಇಂದು ಶ್ರೀಕ್ಷೇತ್ರದಲ್ಲಿ ವಿಶೇಷ ಸನ್ಮಾನಕ್ಕೆ ಭಾಜನರಾಗಿದ್ದಾರೆ. ಅವರಿಗೆ ಇನ್ನು ಮುಂದೆಯೂ ಯಕ್ಷ ಸೇವೆ ಮಾಡಲು ಶ್ರೀ ಅನಂತ ಪದ್ಮನಾಭ ಸ್ವಾಮಿ ಅನುಗ್ರಹಿಸಲಿ.” ಎಂದು ಆಶೀರ್ವಚನವಿತ್ತರು.

    ಖ್ಯಾತ ವಾಸ್ತು ತಜ್ಞ ಮತ್ತು ಯಕ್ಷ ಮಿತ್ರರು ಕುಡುಪು ಸಂಸ್ಥೆಯ ಅಧ್ಯಕ್ಷರಾದ ವೇದಮೂರ್ತಿ ಕೆ. ಕೃಷ್ಣರಾಜ ತಂತ್ರಿಗಳು ಸಂಸ್ಥೆಯ ಧ್ಯೇಯೋದ್ದೇಶಗಳ ಬಗ್ಗೆ ಪ್ರಸ್ತಾವನೆ ಮಾಡಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಯಕ್ಷಗುರು ಕಲಾವಿದ ವರ್ಕಾಡಿ ಶ್ರೀ ರವಿ ಅಲೆವೂರಾಯ ಅಭಿನಂದನಾ ಮಾತುಗಳನ್ನಾಡಿದರು. ಶ್ರೀ ರಾಘವೇಂದ್ರ ಕುಡುಪು ಸನ್ಮಾನ ಪತ್ರ ವಾಚಿಸಿ, ಕ್ಷೇತ್ರದ ಮೊಕ್ತೇಸರರುಗಳಾದ ಶ್ರೀ ಮನೋಹರ ಭಟ್, ಮಾಜಿ ಮೇಯರ್ ಭಾಸ್ಕರ ಕೆ, ಶುಭಾಶಂಸನೆಗೈದರು. ಕುಡುಪು ಶ್ರೀ ವಾಸುದೇವ ರಾವ್ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು. ಸನ್ಮಾನ ಕಾರ್ಯಕ್ರಮದ ಬಳಿಕ ಹಿರಿಯಡ್ಕ ಮೇಳದಿಂದ ‘ಕಾರ್ತವೀರ್ಯಾರ್ಜನ ಭಾರ್ಗವ ವಿಜಯ’ ಎಂಬ ತೆಂಕುತಿಟ್ಟಿನ ಬಯಲಾಟ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ
    Next Article ಕಲಾ ವಿಮರ್ಶೆ : ರೇಖೆಗಳ ಓಟ ಕಲಾತ್ಮಕ ನೋಟ
    roovari

    Add Comment Cancel Reply


    Related Posts

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ತಾಲೂಕು 12ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 01

    December 31, 2025

    ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಪ್ರಸ್ತುತಗೊಂಡ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

    December 31, 2025

    ‘ಯಕ್ಷ ತ್ರಿವೇಣಿ’ಯ ಸಮಾರೋಪ ಸಮಾರಂಭ

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.