Subscribe to Updates

    Get the latest creative news from FooBar about art, design and business.

    What's Hot

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗಂಗೊಳ್ಳಿಯಲ್ಲಿ ಕುಮಾರವ್ಯಾಸ ಸ್ಮೃತಿ ಹಾಗೂ ಗಮಕ ಪ್ರಾತ್ಯಕ್ಷಿಕೆ
    Gamaka

    ಗಂಗೊಳ್ಳಿಯಲ್ಲಿ ಕುಮಾರವ್ಯಾಸ ಸ್ಮೃತಿ ಹಾಗೂ ಗಮಕ ಪ್ರಾತ್ಯಕ್ಷಿಕೆ

    January 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕ ಆಯೋಜಿಸಿದ ಕುಮಾರವ್ಯಾಸ ಸ್ಮೃತಿ ಮತ್ತು ಗಮಕ ಕಲಾ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ದಿನಾಂಕ 11 ಜನವರಿ 2025ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕದ ಅಧ್ಯಕ್ಷ ಎಚ್. ಸುಜಯೀಂದ್ರ ಹಂದೆ ಮಾತನಾಡಿ “ಕನ್ನಡ ನಾಡು ಕಂಡ ಅತ್ಯದ್ಭುತ ಕವಿ ಕುಮಾರವ್ಯಾಸ. ಕನ್ನಡ ನೆಲದ ಮನೆ ಮನಗಳಲ್ಲಿ ಭಾರತ ಕತೆಯನ್ನು ನೆಲೆಯಾಗುವಂತೆ, ಆಪ್ತವಾಗುವಂತೆ ಮಾಡಿದ ಧೀಮಂತ ಕವಿ. ಮಹಾ ಭಾರತದ ಕಥಾ ವಸ್ತುವನ್ನು ಭಾಮಿನಿ ಷಟ್ಪದಿಯಲ್ಲಿ ರಚಿಸಿ, ಅದನ್ನು ಕೃಷ್ಣ ಕತೆಯೆಂದು ಸಾರಿದವನು. ಕುವೆಂಪು ಅವರು ಹೇಳುವಂತೆ ಕಲಿಯುಗದಲ್ಲೂ ದ್ವಾಪರವನ್ನು ಕಟ್ಟಿಕೊಟ್ಟವನು. ವ್ಯಾಸ ರಚಿತ ಭಾರತದ ಮುಂದೆ ತಾನು ಕುಮಾರವ್ಯಾಸನೆಂದು ಹೇಳಿಕೊಳ್ಳುವಲ್ಲಿ ನಾರಣಪ್ಪನ ವಿನಯ ಸಂಪನ್ನತೆ ಎದ್ದು ಕಾಣುತ್ತದೆ. ನಾಡಿನ ಮೂಲೆ ಮೂಲೆಗಳ ವಿದ್ವಾಂಸರನ್ನೂ, ಜನ ಸಾಮಾನ್ಯರನ್ನೂ ತನ್ನ ಕಾವ್ಯ ಸೊಬಗಿನಿಂದ ಬೆರಗುಗೊಳಿಸುತ್ತಾ ಒಂದರ್ಥದಲ್ಲಿ ಕನ್ನಡದ ಭಾಷಾ ಏಕೀಕರಣವನ್ನು ಸಾಧಿಸಿದ ಕವಿ ಕುಮಾರವ್ಯಾಸ” ಎಂದರು.
    ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಗಂಗೊಳ್ಳಿ ಜಿ. ಎಸ್. ವಿ. ಎಸ್. ಅಸೋಸಿಯೇಷನ್ ಇದರ ಅಧ್ಯಕ್ಷರಾದ ಡಾ. ಕಾಶೀನಾಥ ಪೈ ಭಾಗವಹಿಸಿ ಶುಭ ಹಾರೈಸಿದರು.
    ವಿದ್ಯಾರ್ಥಿಗಳಿಗಾಗಿ ಗಮಕಿ ಕುಮಾರಿ ಕಾವ್ಯ ಹಂದೆ ಕುಮಾರವ್ಯಾಸನ ‘ಕರ್ಣ ಭೇದನ’ ಪ್ರಸಂಗದ ಕಾವ್ಯ ಭಾಗವನ್ನು ವಿವಿಧ ರಾಗಗಳಲ್ಲಿ ಪ್ರಾತ್ಯಕ್ಷಿಕೆ ನಡೆಸಿದರು. ಸುಜಯೀಂದ್ರ ಹಂದೆ ವ್ಯಾಖ್ಯಾನ ನೀಡಿದರು. ಕಛೇರಿಯ ಪ್ರಬಂಧಕರಾದ ಶ್ರೀಧರ ಗಾಣಿಗ ಸ್ವಾಗತಿಸಿ, ಅಧ್ಯಾಪಕ ಆದಿನಾಥ ಕಿಣಿ ಕಾರ್ಯಕ್ರಮ ನಿರೂಪಿಸಿದರು.

    gamaka
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಕನ್ನಡ ಗ್ರಾಮದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ, ಬೆಂಗಳೂರು ಕನ್ನಡ ನಾಟಕೋತ್ಸವ ಮತ್ತು ಗಡಿನಾಡ ಉತ್ಸವ
    Next Article ಮಂಗಳೂರಿನ ಸಾಹಿತ್ಯ ಉತ್ಸವದಲ್ಲಿ ಲೋಕಾರ್ಪಣೆಗೊಂಡ ‘ಮಾಗಧ‘ ಕೃತಿ
    roovari

    Add Comment Cancel Reply


    Related Posts

    ಗಮಕಕಲಾ ಪ್ರತಿಷ್ಠಾನದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 07

    June 4, 2025

    ಬೆಂಗಳೂರಿನ ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯದಲ್ಲಿ ‘ಸಂಗೀತ ನೃತ್ಯ ಸಂಭ್ರಮ’ | ಏಪ್ರಿಲ್ 13 ಮತ್ತು 14

    April 11, 2025

    ವಿಜಯಪುರದಲ್ಲಿ ‘ಭರತನ ಸೋದರ ಪ್ರೀತಿ’ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ

    March 11, 2025

    ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳ ಘೋಷಣೆ

    February 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.