Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಂಬಳೆ ಶ್ರೀಧರ ರಾವ್‌ ಇವರಿಗೆ ನುಡಿನಮನ
    Yakshagana

    ಕುಂಬಳೆ ಶ್ರೀಧರ ರಾವ್‌ ಇವರಿಗೆ ನುಡಿನಮನ

    August 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕುಂಬಳೆ: ಕಣಿಪುರ ಮಿತ್ರ ಬಳಗ ಮತ್ತು ಕುಂಬಳೆ ಶ್ರೀಧರ ರಾವ್ ಅಭಿಮಾನಿ ಬಳಗದ ವತಿಯಿಂದ ಇತ್ತೀಚೆಗೆ ನಿಧನರಾದ ಕುಂಬಳೆ ಶ್ರೀಧರ ರಾವ್‌ ಇವರಿಗೆ ನುಡಿನಮನ ಹಾಗೂ ತಾಳಮದ್ದಳೆ ಕಾರ್ಯಕ್ರಮವು  28 ಜುಲೈ 2024ರಂದು ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ, ಅಂಕಣಕಾರ, ಕಲಾವಿದ ನಾ. ಕಾರಂತ ಪೆರಾಜೆ “ತೆಂಕುತಿಟ್ಟಿನ ಹಿರಿ ಪರಂಪರೆಯ ಮೇರು ಕಲಾವಿದರ ಸಾಲಿನಲ್ಲಿ ದಿ. ಕುಂಬಳೆ ಶ್ರೀಧರ ರಾವ್ ಇವರು ಗರತಿ ಪಾತ್ರಗಳಲ್ಲಿ ಅಚ್ಚೊತ್ತಿ, ಮಾದರಿ ಪಾತ್ರಗಳನ್ನು ಸೃಜಿಸಿದ ಸೃಷ್ಟಿಶೀಲ ಕಲಾವಿದ. ಶೇಣಿ, ಸಾಮಗ ಸಹಿತ ಗತ ಪರಂಪರೆಯ ಮೇರು ಕಲಾವಿದರ ಜೊತೆ ರಂಗದಲ್ಲಿ ಅಷ್ಟೇ ಸಮರ್ಥವಾಗಿ ಮೆರೆದು ಎಲ್ಲರ ಪ್ರೀತಿಗೆ ಪಾತ್ರರಾದವರು. ಅವರ ಕಲಾ ಬದುಕಿನ ಆಳ ಅಗಲ ಅತ್ಯಂತ ವಿಸ್ತಾರವಾದುದು.” ಎಂದು ಹೇಳಿದರು.
    ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳ ಪ್ರಬಂಧಕ ಜಯದೇವ ಖಂಡಿಗೆ ಮಾತನಾಡಿ “ನಮ್ಮ ನೆಲಕ್ಕೆ ಕೀರ್ತಿ ತಂದ ಕಲಾವಿದರನ್ನು ಸ್ಮರಿಸುವುದು ನಮ್ಮ ಬದುಕಿನ ಭಾಗವಾಗಬೇಕು.” ಎಂದು ನುಡಿದರು. ಕನ್ನಡ ಸಾಹಿತ್ಯ ಪರಿಷತ್‌ನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಶ್ರೀಧರ ರಾವ್ ಕುರಿತು ಮಾತನಾಡಿದರು.
    ಅಭಿನಂದನಾ ಸಮಿತಿಯ ಅಧ್ಯಕ್ಷ ಭಗವಾನ್ ದಾಸ್ ಬೆಂಗಳೂರು ಮಾತನಾಡಿ “ಕುಂಬಳೆ ಶ್ರೀಧರ ರಾವ್ ಅವರ ಹುಟ್ಟೂರು ಕುಂಬಳೆಯಲ್ಲಿ ಅವರಿಗೆ ಸಾರ್ವಜನಿಕ ಅಭಿನಂದನೆಯೊಂದಿಗೆ ಗ್ರಂಥ ಸಮರ್ಪಣೆಗೆ ಸಿದ್ಧತೆ ನಡೆಯುತ್ತಿತ್ತು. ದಿಢೀರನೆ ಅವರು ಅಗಲಿದ ಹಿನ್ನೆಲೆಯಲ್ಲಿ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕುಂಬಳೆಯಲ್ಲೇ ಸಂಸ್ಮರಣಾ ಗ್ರಂಥವಾಗಿ ಅದು ಬಿಡುಗಡೆಯಾಗಿ ಅವರ ದಿವ್ಯಾತ್ಮಕ್ಕೆ ಅರ್ಪಣೆ ಆಗಲಿದೆ. ಹುಟ್ಟೂರಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸುವುದು ಅವರ ಕನಸಾಗಿತ್ತು. ಅದನ್ನು ಮರಣೋತ್ತರ ಈಡೇರಿಸಬೇಕಾದುದು ಅವರ ಹುಟ್ಟೂರ ಅಭಿಮಾನಿಗಳ ಧರ್ಮ.” ಎಂದವರು ನೆನಪಿಸಿದರು.
    ಶ್ರೀ ಕುಮಾರಸ್ವಾಮಿ ಭಜನಾ ಮಂದಿರ ಸಭಾಗೃಹದ ಅಧ್ಯಕ್ಷ ನಾರಾಯಣ ರೈ, ಬಿ. ಕೆ. ಕೃಷ್ಣ ಟೈಲ‌ರ್ ನೀರ್ಚಾಲು ಉಪಸ್ಥಿತರಿದ್ದರು. ಡಾ. ಕೆ. ಕಮಲಾಕ್ಷ ಕಾಸರಗೋಡು, ಡಾ. ಬೇ. ಸಿ. ಗೋಪಾಲಕೃಷ್ಣ ಭಟ್, ವಿಶಾಲಾಕ್ಷ ಪುತ್ರಕಳ, ಪ್ರಸಂಗಕರ್ತ ಶೇಡಿಗುಮ್ಮೆ ವಾಸುದೇವ ಭಟ್, ಕಲಾವಿದ ಶಿವಶಂಕರ ದಿವಾಣ,  ಕಥಾಕೀರ್ತನಗಾರ ಶಂನಾಡಿಗ ಕುಂಬಳೆ, ಡಿ. ಮಂಜುನಾಥ ಮಾನ್ಯ, ವಕೀಲ ಉದನೇಶ್ವರ, ಲಕ್ಷ್ಮಣ ಪ್ರಭು ಬದಿಯಡ್ಕ ಸಹಿತ ನೂರಾರು ಗಣ್ಯ ಕಲಾಭಿಮಾನಿಗಳು ಪಾಲ್ಗೊಂಡು ಶ್ರೀಧರ ಸ್ಮೃತಿಯೊಂದಿಗೆ ಅಗಲಿದ , ಮೇರು ಕಲಾವಿದನಿಗೆ ಶ್ರದ್ಧಾಂಜಲಿ ಅರ್ಪಿಸಿದರು.
    ಕಣಿಪುರ ಮಾಸ ಪತ್ರಿಕೆಯ ಸಂಪಾದಕ ಹಾಗೂ ಲೇಖಕರಾದ ಎಂ. ನಾ. ಚಂಬಲ್ತಿಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ಹಳ್ಳಾಡಿ ಜಯರಾಮ ಶೆಟ್ಟಿ ಆಯ್ಕೆ | ಆಗಸ್ಟ್ 10
    Next Article ಸಾಹಿತ್ಯ ಗೋಷ್ಠಿಗೆ ಮಕ್ಕಳ ಕಾರ್ಡ್ ಕಥೆ ಮತ್ತು ಕವನ ಬರಹಗಳ ಆಹ್ವಾನ
    roovari

    Comments are closed.

    Related Posts

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರದಲ್ಲಿ ತಿಂಗಳ ಸರಣಿ

    January 6, 2026

    ಬೆಂಗಳೂರಿನ ಸ್ವಾಮಿ ವಿವೇಕಾನಂದ ಶತಾಬ್ಧಿ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನ | ಜನವರಿ 07

    January 5, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.