Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಂಕುತಿಟ್ಟಿನ ಮೇರು ಕಲಾವಿದ ಕೆ.ಗೋವಿಂದ ಭಟ್ ಅವರಿಗೆ ‘ಕುಂಬ್ಳೆ ಸುಂದರರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ
    Cultural

    ತೆಂಕುತಿಟ್ಟಿನ ಮೇರು ಕಲಾವಿದ ಕೆ.ಗೋವಿಂದ ಭಟ್ ಅವರಿಗೆ ‘ಕುಂಬ್ಳೆ ಸುಂದರರಾವ್ ಸಂಸ್ಮರಣಾ ಪ್ರಶಸ್ತಿ’ ಪ್ರದಾನ

    February 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉರ್ವಸ್ಟೋರ್ : ಕೀರ್ತಿಶೇಷ ಕುಂಬ್ಳೆ ಸುಂದರರಾವ್ ಸಂಸ್ಕರಣಾ ವೇದಿಕೆ ವತಿಯಿಂದ ಉರ್ವಸ್ಟೋರಿನ ದೇವಾಂಗ ಸಭಾಭವನದಲ್ಲಿ ದಿನಾಂಕ 10-12-2023ರಂದು ‘ಕುಂಬ್ಳೆ ಸುಂದರರಾವ್‌ ಸಂಸ್ಮರಣಾ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸಂಸ್ಮರಣಾ ಹಾಗೂ ಅಭಿನಂದನಾ ಭಾಷಣ ಮಾಡಿದ ಉಡುಪಿಯ ಯಕ್ಷಗಾನ ಕಲಾ ರಂಗದ ಕಾರ್ಯದರ್ಶಿ ಮುರಳಿ ಕಡೇಕಾರ್ “ಯಕ್ಷಗಾನದ ಮಾತುಗಾರಿಕೆಗೆ ಹೊಸಭಾಷ್ಯ ನೀಡಿದವರ ಪೈಕಿ ಕುಂಬ್ಳೆ ಸುಂದರ ರಾವ್ ಅವರ ಹೆಸರು ಅಜರಾಮರ. ಸಂವಾದ ಸೌಂದರ್ಯ, ಭಾಷಾ ಸೌಂದರ್ಯ, ಭಾವನಾತ್ಮಕ ಮಾತುಗಾರಿಕೆಯ ಅವರು ಶ್ರೇಷ್ಠಸಾಧಕ. ನಿರರ್ಗಳ ಮಾತು ಕುಂಬ್ಳೆ ಸುಂದರರಾವ್‌ ಅವರ ಶಕ್ತಿ. ಈ ಕಾರಣಕ್ಕಾಗಿಯೇ ಅವರು ಹಿಂದೂ ಸಂಘಟನೆಗಳ ಪರಿಣಾಮಕಾರಿ ಸಂವಹನಕಾರರಾಗಿಯೂ ಕಾರ್ಯ ನಿರ್ವಹಿಸಿದ್ದರು. ಯಕ್ಷಗಾನ ಆಟ-ಕೂಟ ಮತ್ತು ಸಾಮಾಜಿಕ ಕೈಂಕರ್ಯಗಳಲ್ಲಿ ಪೌರಾಣಿಕ ಸಂದೇಶಗಳನ್ನು ಜನತೆಗೆ ತಲುಪಿಸಿದ ಕುಂಬ್ಳೆ ಸುಂದರರಾಯರ ಕೊಡುಗೆ ಅದ್ವಿತೀಯ. ಪಾರ್ತಿಸುಬ್ಬನ ಬಳಿಕ ಕುಂಬಳೆಯ ಮಣ್ಣಿಗೆ ಮಾನ್ಯತೆಯ ಕೀರ್ತಿ ತಂದಿತ್ತ ಅವರು ಇಡೀ ಸೀಮೆಯ ಅಭಿಮಾನದ ಸಂಕೇತ” ಎಂದು ಹೇಳಿದರು.

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಿ.ಎಸ್.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ತೆಂಕುತಿಟ್ಟಿನ ಮೇರು ಕಲಾವಿದ ಕೆ. ಗೋವಿಂದ ಭಟ್ ಅವರಿಗೆ ‘ಕುಂಬ್ಳೆ ಸುಂದರರಾವ್ ಸಂಸ್ಮರಣಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಉದ್ಯಮಿ ಎಂ. ಮುರಳೀದರ್‌ ಶೆಟ್ಟಿ, ಸಾಹಿತಿ ನಾ.ದಾ. ಶೆಟ್ಟಿ, ಕುಂಬ್ಳೆ ಸುಂದರ ರಾವ್ ಅವರ ಪುತ್ರ ಪ್ರಸನ್ನ ಕುಮಾರ್ ಕುಂಬ್ಳೆ, ಅಳಿಯ ಸತ್ಯನಾರಾಯಣ ಕೆ., ಸಂಘಟನಾ ಸಮಿತಿಯ ಚಂದ್ರಶೇಖರ ಕೆ.ಶೆಟ್ಟಿ, ಶರತ್‌ ಕುಮಾರ್ ಕದ್ರಿ, ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು.

    ಜಿಲ್ಲೆಯ ಸುಪ್ರಸಿದ್ಧ ಅರ್ಥಧಾರಿಗಳಿಂದ ‘ಭರತಾಗಮನ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಹವ್ಯಾಸಿ ಬಳಗ ಕದ್ರಿ ಇವರಿಂದ ‘ಸಾಯುಜ್ಯ ಸಂಗ್ರಾಮ’ ಎಂಬ ಯಕ್ಷಗಾನ ಕಥಾನಕ ಪ್ರದರ್ಶನಗೊಂಡಿತು. ಸನಾತನ ನಾಟ್ಯಾಲಯದ ಚಂದ್ರಶೇಖರ್ ಶೆಟ್ಟಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಖಿಲ್ರಿಯಾ ಜುಮ್ಮಾ ಮಸೀದಿಯ ಸುವರ್ಣ ಮಹೋತ್ಸವದ ಅಂಗವಾಗಿ ‘ಕವಿಗೋಷ್ಠಿ’ ಮತ್ತು ಪ್ರತಿಭಾ ಸ್ಪರ್ಧೆ
    Next Article ತೆಕ್ಕಟ್ಟೆ ಹಯಗ್ರೀವದಲ್ಲಿ ‘ರಂಗಾರ್ಪಣ’ ಹಾಗೂ ಮೇಳಕ್ಕೆ ತೆರಳುವ ಉದಯೋನ್ಮುಖ ಕಲಾವಿದರಿಗೆ ಅಭಿನಂದನೆ
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಮಣಿಪಾಲದಲ್ಲಿ ‘ಕಲಾಮಯಂ’ ಸಾಂಸ್ಕೃತಿಕ ಸಂಘಟನೆ ಉದ್ಘಾಟನೆ

    May 6, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.