Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 23
    Awards

    ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 23

    November 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ವೇದಿಕೆ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಜಂಟಿಯಾಗಿ ಆಯೋಜಿಸುವ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 23 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ‘ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಪ್ರಶಸ್ತಿ 2025’ಕ್ಕೆ ಯಕ್ಷಗಾನ ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಆಯ್ಕೆಯಾಗಿದ್ದು, ಪ್ರಶಸ್ತಿಯು ಸನ್ಮಾನ ಪತ್ರ ಮತ್ತು ರೂ.25,000/- ನಗದು ಒಳಗೊಂಡಿದೆ.

    ಹಿರಿಯ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿದ್ವಾಂಸ ಡಾ. ಪ್ರಭಾಕರ ಜೋಶಿ ಸಂಸ್ಮರಣೆ ಮಾಡುವರು, ಮುಖ್ಯ ಅತಿಥಿಗಳಾಗಿ ಮಂಗಳೂರು ಬಸ್ ಮಾಲಿಕರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಶೀಲ ಅಡ್ಯಂತಾಯ, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಭಾಗವಹಿಸಲಿದ್ದಾರೆ.

    ಸಭಾ ಕಾರ್ಯಕ್ರಮದ ನಂತರ ಸಂಜೆ 6-00 ಗಂಟೆಗೆ ‘ಅಂಗದ ಸಂಧಾನ’ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಹಿಮ್ಮೇಳದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ, ಚೆಂಡೆ ಮದ್ದಳೆಯಲ್ಲಿ ಸತ್ಯಜಿತ್ ರಾಯಿ, ಸಮರ್ಥ್ ಉಡುಪ ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಹಿರಿಯ ಅರ್ಥದಾರಿಗಳಾದ ಸರ್ಪಂಗಳ ಈಶ್ವರ ಭಟ್ ಮತ್ತು ಸದಾಶಿವ ಆಳ್ವ ತಲಪಾಡಿ ಭಾಗವಹಿಸುವರು.

    award baikady commemoration felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರಂಗಶಂಕರದಲ್ಲಿ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ | ನವೆಂಬರ್ 22
    Next Article ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನ
    roovari

    Add Comment Cancel Reply


    Related Posts

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಭರವಸೆಯ ಕಲಾವಿದೆ ಕೀರ್ತನಾ ಶಶಾಂಕ್ ರಂಗಪ್ರವೇಶ | ಜನವರಿ 10

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜನವರಿ 07

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.