Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುರಿಯ ವಿಠಲ ಶಾಸ್ತ್ರಿ ಟ್ರಸ್ಟ್ ವತಿಯಿಂದ ‘ಸಂಸ್ಮರಣೆ, ಸನ್ಮಾನ, ಯಕ್ಷಗಾನ’
    Yakshagana

    ಕುರಿಯ ವಿಠಲ ಶಾಸ್ತ್ರಿ ಟ್ರಸ್ಟ್ ವತಿಯಿಂದ ‘ಸಂಸ್ಮರಣೆ, ಸನ್ಮಾನ, ಯಕ್ಷಗಾನ’

    May 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುರುಡಪದವು : ಕುರಿಯ ವಿಠಲ ಶಾಸ್ತ್ರಿ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ಕುರುಡಪದವು ಇದರ ವತಿಯಿಂದ ಪ್ರತಿ ವರ್ಷವೂ ಜರಗುವಂತೆ ದಿ. ಕುರಿಯ ವಿಠಲ ಶಾಸ್ತ್ರಿ, ದಿ. ನೆಡ್ಲೆ ನರಸಿಂಹ ಭಟ್ ಮತ್ತು ದಿ. ಕರುವೋಳು ದೇರಣ್ಣ ಶೆಟ್ಟಿ ಸಂಸ್ಮರಣ ಕಾರ್ಯಕ್ರಮವು ಗಾನಲಹರಿ, ಸನ್ಮಾನ, ಯಕ್ಷಗಾನ ಕಾರ್ಯಕ್ರಮಗಳೊಂದಿಗೆ ಮೇ 13ರಂದು ಕುರುಡಪದವು ಪ್ರೌಢಶಾಲೆಯಲ್ಲಿ ಜರಗಿತು.

    ಸಂಜೆ ಮೂರು ಗಂಟೆಯಿಂದ ಬೊಟ್ಟಿಕೆರೆ ಪರೀಕ್ಷಿತ್ ಪೂಂಜ ಮತ್ತು ಬಳಗದವರಿಂದ ಗಾನ ಲಹರಿ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.

    ಬಳಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಂಗಳೂರು ಹರಿಕಥಾ ಪರಿಷತ್ತಿನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಯಕ್ಷಗಾನ ಕಲಾವಿದರಾದ ಶ್ರೀಧರ ಐತಾಳ ಪಣಂಬೂರು ಇವರಿಗೆ ಕುರಿಯ ಪ್ರಶಸ್ತಿಯನ್ನೂ, ಬಡಗಿನ ಖ್ಯಾತ ಭಾಗವತರಾದ ರಾಘವೇಂದ್ರ ಮಯ್ಯರಿಗೆ ನೆಡ್ಲೆ ಪ್ರಶಸ್ತಿಯನ್ನೂ, ಸೂರಿಕುಮೇರಿ ಗೋವಿಂದ ಭಟ್ಟರಿಗೆ ಕರುವೋಳು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಶ್ರೀದೇವಿ ಪ್ರೌಢಶಾಲೆ ಪುಣಚ ಇದರ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಂಗಮ್ಮ ಹರಿಕೃಷ್ಣ ಶಾಸ್ತ್ರಿ ಸಂಸ್ಮರಣ ಭಾಷಣ ಮಾಡಿದರು. ಬಳಿಕ ಸನ್ಮಾನಿತರನ್ನು ಸೇರಾಜೆ ಗೋಪಾಲಕೃಷ್ಣ ಭಟ್ ಅಭಿನಂದಿಸಿದರು. ಖ್ಯಾತ ತಾಳಮದ್ದಳೆ ಅರ್ಥದಾರಿ ಬೆಳ್ಳಾರೆ ರಾಮ ಜೋಯಿಸ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕುರಿಯ ವೆಂಕಟರಮಣ ಶಾಸ್ತ್ರಿ, ಕುರಿಯ ಗಣಪತಿ ಶಾಸ್ತ್ರಿ, ಕರುವೋಳು ದಿನೇಶ ಶೆಟ್ಟಿ, ನೆಡ್ಲೆ ರಾಮ ಭಟ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸೇರಾಜೆ ಶ್ರೀನಿವಾಸ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಕುರಿಯ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ಸೇರಾಜೆ ಸೀತಾರಾಮ ಭಟ್ ವಂದಿಸಿದರು.

    ಸಭಾ ಕಾರ್ಯಕ್ರಮದ ಬಳಿಕ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ‘ಸುದರ್ಶನ ವಿಜಯ’, ‘ಹನುಮೋದ್ಭವ’, ‘ಮಹಿರಾವಣ ಕಾಳಗ’ ಯಕ್ಷಗಾನ ಬಯಲಾಟ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಜಂಗಮ ಕಲೆಕ್ಟಿವ್ ನಲ್ಲಿ ‘ಟ್ರಂಕು ತಟ್ಟೆ’ ಪುಸ್ತಕ ಬಿಡುಗಡೆ
    Next Article ʻಶ್ರೀಮತಿ ನಿಂಗಮ್ಮ ಹುಚ್ಚೇಗೌಡ ಕೋಡಿಹೊಸಹಳ್ಳಿ ದತ್ತಿʼ ಪ್ರಶಸ್ತಿ ಪ್ರಕಟ
    roovari

    Add Comment Cancel Reply


    Related Posts

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಸುಬ್ರಾಯ ಹೊಳ್ಳರಿಗೆ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.