Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಿರಿಯ ಲೇಖಕಿ ಕ್ಯಾಥರಿನ್ ರೋಡ್ರಿಗಸ್ ಮತ್ತು ಹಿರಿಯ ಸಮಾಜ ಸೇವಕಿ ಸುವಾಸಿನಿ ದಾಮೋದರ್ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಆಯ್ಕೆ
    Awards

    ಹಿರಿಯ ಲೇಖಕಿ ಕ್ಯಾಥರಿನ್ ರೋಡ್ರಿಗಸ್ ಮತ್ತು ಹಿರಿಯ ಸಮಾಜ ಸೇವಕಿ ಸುವಾಸಿನಿ ದಾಮೋದರ್ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಆಯ್ಕೆ

    February 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡುವ 2024-25ನೇ ಸಾಲಿನ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಲೇಖಕಿ ಕ್ಯಾಥರಿನ್ ರೋಡ್ರಿಗಸ್, ಸಮಾಜ ಸೇವೆ ಕ್ಷೇತ್ರದಲ್ಲಿ ಹಿರಿಯ ಸಮಾಜ ಸೇವಕಿ ಸುವಾಸಿನಿ ದಾಮೋದರ್ ಆಯ್ಕೆಯಾಗಿದ್ದಾರೆ.

    ನಾ. ದಾಮೋದರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬಿ.ಎಂ. ರೋಹಿಣಿ, ಗಣೇಶ ಅಮೀನ್ ಸಂಕಮಾರ್ ಇವರನ್ನೊಳಗೊಂಡ ಆಯ್ಕೆ ಸಮಿತಿಯು ಇಬ್ಬರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಅಬ್ಬಕ್ಕ ಉತ್ಸವ ನಡೆಸಲಾಗುತ್ತಿದ್ದು, ಅಬ್ಬಕ್ಕನ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ರೂ.25,000/- ನಗದು, ಸ್ಮರಣಿಕೆ ಒಳಗೊಂಡಿದೆ. ದಿನಾಂಕ 22 ಫೆಬ್ರವರಿ 2025ರಂದು ಉಳ್ಳಾಲ ನಗರಸಭೆ ಆವರಣದ ಮಹಾತ್ಮಾ ಗಾಂಧಿ ರಂಗಮಂದಿರದಲ್ಲಿ ನಡೆಯುವ ಅಬ್ಬಕ್ಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

    ಉಡುಪಿ ಜಿಲ್ಲೆ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಕ್ಯಾಥರಿನ್ ರೋಡ್ರಿಗಸ್ ಇವರು ಎಂ.ಎ. ಪದವೀಧರರಾಗಿದ್ದು, ಸಾಹಿತ್ಯ ಕ್ಷೇತ್ರದ ಬಹುಮುಖ ಮತ್ತು ಬಹುಭಾಷಾ ಪ್ರತಿಭೆ. ಕನ್ನಡ, ತುಳು, ಕೊಂಕಣಿಯಲ್ಲಿ ಕಥೆ, ಕವನ, ಕಾದಂಬರಿ, ಪ್ರಬಂಧ, ನಾಟಕಗಳನ್ನು ರಚಿಸುವ ಮೂಲಕ ಕರಾವಳಿಯ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. 56 ತುಳು ನಾಟಕ, 11 ಕೊಂಕಣಿ ನಾಟಕ, 8 ಕನ್ನಡ ನಾಟಕಗಳನ್ನು ರಚಿಸಿದ್ದಾರೆ. ತುಳುವಿನಿಂದ ಕನ್ನಡ, ಕೊಂಕಣಿಗೆ ಅನೇಕ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಆಕಾಶವಾಣಿಯಲ್ಲಿ 160ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

    ಉಳ್ಳಾಲ ಪೆರ್ಮನ್ನೂರು ಗ್ರಾಮದ ಬಬ್ಬುಕಟ್ಟೆ ನಿವಾಸಿಯಾದ ಸುವಾಸಿನಿ ಅವರು 80ರ ಇಳಿವಯಸ್ಸಿನಲ್ಲೂ ಇತರರ ಸೇವೆಯ ಕಾಳಜಿ ಹೊಂದಿದ್ದಾರೆ. ಮಕ್ಕಳು, ಮಹಿಳೆಯರು, ಅಶಕ್ತರು, ಬಡವರು, ರೋಗಿಗಳು, ವಿಶೇಷ ಚೇತನರು, ಅಸಹಾಯಕರು, ವಿದ್ಯಾರ್ಥಿಗಳು, ದುರ್ಬಲರ ಕಣ್ಣೀರು ಒರೆಸುವ ಕಾಯಕದಲ್ಲಿ ಬದುಕಿನ ಬಹುತೇಕ ಸಮಯ ಕಳೆದಿದ್ದಾರೆ. ಸಮಾಜಸೇವೆಗಾಗಿ 30ಕ್ಕೂ ಹೆಚ್ಚು ಸಂಘ ಸಂಸ್ಥೆಗಳ ಸದಸ್ಯತ್ವ ಹೊಂದಿದ್ದಾರೆ. ಹತ್ತು ಗ್ರಾಮಗಳಲ್ಲಿ ಮಹಿಳಾ ಮಂಡಲ, ಬಾಲವಾಡಿ ಪ್ರಾರಂಭಿಸುವಲ್ಲಿ ಇವರ ಕೊಡುಗೆ ಅಪಾರ. ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ನೂರಾರು ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ, ಶಸ್ತ್ರಚಿಕಿತ್ಸಾ ಶಿಬಿರ ಏರ್ಪಡಿಸಿದ್ದಾರೆ.

    ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಕಾರ್ಯದರ್ಶಿ ರತ್ನಾವತಿ ಜೆ. ಬೈಕಾಡಿ, ಆಲಿಯಬ್ಬ, ಶಶಿಕಾಂತಿ ಬಂಗೇರ ಉಪಸ್ಥಿತರಿದ್ದರು.

    award Literature
    Share. Facebook Twitter Pinterest LinkedIn Tumblr WhatsApp Email
    Previous Articleವಿಜಯನಗರ ಬಿಂಬದಿಂದ ‘ಚಿಣ್ಣರ‌ ಚಿತ್ತಾರ’ ಮತ್ತು ‘ಚಿಣ್ಣರ ಚಾವಡಿ’ ಮಕ್ಕಳ ಬೇಸಿಗೆ ಶಿಬಿರ | ದಾಖಲಾತಿ ಫೆಬ್ರವರಿ 09ರಿಂದ  
    Next Article ಬೆಳ್ತಂಗಡಿಯಲ್ಲಿ ಭರತನಾಟ್ಯಂ ರಂಗಪ್ರವೇಶ ಕಾರ್ಯಕ್ರಮ | ಫೆಬ್ರವರಿ 15
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.