Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ  
    Awards

    ಮಂಗಳೂರಿನ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ  

    August 25, 2024Updated:August 26, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಕೇದಿಗೆ ಪ್ರತಿಷ್ಠಾನ ಮಂಗಳೂರು ಹಾಗೂ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಮಂಗಳೂರು ಲೀಜನ್ ಸಹಯೋಗದೊಂದಿಗೆ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭವು ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ದಿನಾಂಕ 17 ಆಗಸ್ಟ್ 2024ರಂದು ನಡೆಯಿತು.
    ಕೇದಿಗೆ ಪ್ರತಿಷ್ಠಾನ ಮಂಗಳೂರು ವತಿಯಿಂದ ನಿವೃತ್ತ ಸೇನಾನಿ ವಿಕ್ರಂ ದತ್ತಾ ಅವರಿಗೆ ರಾಷ್ಟ್ರ ಸೇವಾ ನಿಷ್ಠ, ಸಂಘಟಕ ಸುಧಾಕರ ರಾವ್ ಪೇಜಾವರ ಅವರಿಗೆ ಸಮಾಜ ಸೇವಾ ನಿಷ್ಠ, ಕಲಾವಿದ ಸೂರ್ಯ ಆಚಾರ್ ವಿಟ್ಲ ಅವರಿಗೆ ಚಿತ್ರಕಲಾ ನಿಷ್ಠ, ಕೃಷಿಕ ದಯಾಪ್ರಸಾದ್ ಚೀಮುಳ್ಳು ಅವರಿಗೆ ಕೃಷಿ ಕ್ಷೇತ್ರ ನಿಷ್ಠ, ಕಲಾವಿದ ಎಲ್ಲೂರು ರಾಮಚಂದ್ರ ಭಟ್ ಅವರಿಗೆ ಯಕ್ಷಗಾನ ಕಲಾನಿಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ಹಿರಿಯ ಸೇನಾನಿ ರಾಮ ಶೇಷ ಶೆಟ್ಟಿ, ಚಂದ್ರಹಾಸ ಕೊಂಚಾಡಿ, ದೇವಿಪ್ರಸಾದ್ ಕೊಂಚಾಡಿ, ಸುನಿಲ್ ಕೊಂಚಾಡಿಗೆ ಇವರೆಲ್ಲಾರಿಗೂ ವಿಶೇಷ ಸನ್ಮಾನ ನೀಡಲಾಯಿತು. ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಸಾಧಕರನ್ನು ಸನ್ಮಾನಿಸಿ ಮಾತನಾಡಿ, “ಡಾ. ಕೇದಿಗೆ ಅರವಿಂದ ರಾವ್ ಅವರು ತಮ್ಮ ಕುಟುಂಬದ ಹಿರಿಯರ ಆದರ್ಶ ಮತ್ತು ಸವಿನೆನಪಿಗಾಗಿ ಸಮಾಜದ ವಿವಿಧ ಕ್ಷೇತ್ರಗಳ ಸಾಧನೆಗೈದ ನೈಜ ಸಾಧಕರನ್ನು ಗುರುತಿಸಿ ಲಕ್ಷ್ಮೀ ಭಾಸ್ಕರ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ” ಎಂದರು.
    ಮಂಗಳೂರಿನ ಕೇದಿಗೆ ಪ್ರತಿಷ್ಠಾನ ಅಧ್ಯಕ್ಷರಾದ ಡಾ. ಕೇದಿಗೆ ಅರವಿಂದ ರಾವ್ ಇವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿದ್ದ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಇದರ ಅಧ್ಯಕ್ಷರಾದ ಚಿತ್ರಕುಮಾ‌ರ್, ಮಹಿಳೆಯೊಬ್ಬರಿಗೆ ಹೊಲಿಗ ಯಂತ್ರ ವಿತರಿಸಿದರು. ಸಂಘದ ವತಿಯಿಂದ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು. ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಮಂಗಳೂರು ಲೀಜನ್‌ನ ತ್ರೈಮಾಸಿಕ ಸಂಚಿಕೆ ಬಿಡುಗಡೆಗೊಳಿಸಿದರು.
    ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್‌ ಅಧ್ಯಕ್ಷ ದತ್ತಾತ್ರೇಯ ಬಾಳ, ರಾಷ್ಟ್ರೀಯ ಉಪಾಧ್ಯಕ್ಷ ಕಿಶೋ‌ರ್ ಫೆರ್ನಾಂಡಿಸ್‌ ಶುಭ ಹಾರೈಸಿದರು. ಅಶೋಕ್‌ ಎಂ.ಕೆ., ಗಾಯತ್ರಿ ಅರವಿಂದ ರಾವ್, ಸುಜಾತಾ ಸುವರ್ಣ, ಡಾ.ನಾಗೇಶ್ವರಿ, ರವಿ ಎಚ್‌.ಎನ್., ಹರೀಶ್.ಆರ್., ಸುನಂದಾ ಶಿವರಾಂ ಸನ್ಮಾನಪತ್ರ ವಾಚಿಸಿದರು.
    ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಉಪಸ್ಥಿತರಿದ್ದರು. ಹರೀಶ ಎ. ವಂದಿಸಿ, ಅರೆಹೊಳೆ ಸದಾಶಿವ ರಾವ್ ಕಾರ್ಯಕ್ರಮ ನಿರೂಪಿಸಿದರು. ಈ ವೇಳೆ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಲೀಜನ್ ಸದಸ್ಯರು ಆಟಿ ಸಂಭ್ರಮ ಮತ್ತು ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಏರ್ಪಡಿಸಿದ್ದರು. ‘ಆಟಿ’ ಅಂದು ಇಂದು ಮುಂದೆ ? ಎಂಬ ಬಗ್ಗೆ ಹರೀಶ ಎ. ಅವರು ಉಪನ್ಯಾಸ ನೀಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಯಕ್ಷಗಾನ ಭಾಗವತ ಮಡ್ವ ಶಂಕರನಾರಾಯಣ ಭಟ್ ನಿಧನ
    Next Article ಬಪ್ಪಳಿಗೆ ಅಂಬಿಕಾ ಕಾಲೇಜಿನಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮ
    roovari

    Comments are closed.

    Related Posts

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಪುತ್ತೂರಿನ ವಿವೇಕಾನಂದ ಶಾಲೆಯಲ್ಲಿ ‘ನೃತ್ಯೋತ್ಕ್ರಮಣ’ ರಂಗಪ್ರವೇಶ ಸ್ಮೃತಿ ಸಂಧ್ಯಾ | ಜನವರಿ 11

    January 10, 2026

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.