Subscribe to Updates

    Get the latest creative news from FooBar about art, design and business.

    What's Hot

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ
    Literature

    ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ

    December 19, 2025Updated:December 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ 2025ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು, ಈ ಮಾಲೆಯ ಕೊನೆಯ ಕಾರ್ಯಕ್ರಮ ದ್ವಾದಶ ಸೋಪಾನ ‘ಮಂಗಲಂ ಕೋಸಲೇಂದ್ರಾಯ’ ಎಂಬ ವಿಷಯದ ಕುರಿತು ದಿನಾಂಕ 13 ಡಿಸೆಂಬರ್ 2025ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪ್ರಸಿದ್ಧ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿ “ಪರಸ್ತ್ರೀ ಅಪಹರಣ ಭೂಷಣವಲ್ಲ. ಅಂಥವರಿಂದ ವಿನಾಶ ಕಂಡ ಅನೇಕ ಉದಾಹರಣೆಗಳಿವೆ. ಯುದ್ಧಕ್ಕೆ ಭುಜಬಲ ಒಂದೇ ಸಾಲದು ಧರ್ಮದ ಬಲವೂ ಬೇಕು. ಶ್ರೀರಾಮನು ಸಾಮಾನ್ಯ ಮನುಷ್ಯನಲ್ಲ ಆತನಲ್ಲಿ ದೈವಬಲದ ಶಕ್ತಿ ಇರುವುದರಿಂದ ನೀನು ವಿವೇಚನೆಯನ್ನು ಕಳೆದುಕೊಳ್ಳದೆ ಸೀತೆಯನ್ನು ರಾಮನಿಗೆ ಒಪ್ಪಿಸು ಎಂಬ ತಮ್ಮ ವಿಭೀಷಣದ ಮಾತಿಗೆ ಕುಪಿತನಾದ ರಾವಣ ವಿಭೀಷಣನನ್ನೂ ಹೊರಗೆ ಹಾಕಿದ. ಹಾಗೆ ಅಲ್ಲಿಂದ ಹೊರಬಿದ್ದ ವಿಭೀಷಣ ಶ್ರೀರಾಮನ ರಕ್ಷಣೆಯನ್ನು ಪಡೆಯುತ್ತಾನೆ. ಯುದ್ಧದಿಂದಾಗುವ ಹಾನಿಗಳನ್ನು ತಪ್ಪಿಸುವುದಕ್ಕಾಗಿ ರಾವಣನ ಜೊತೆ ಸಂಧಾನಕ್ಕಾಗಿ ಅಂಗಧನನ್ನು ಕಳಿಸಿದರೂ ಆತನ ವಿವೇಕದ ಮಾತುಗಳನ್ನು ರಾವಣ ಕೇಳಲೇ ಇಲ್ಲ. ಯುದ್ಧ ಅನಿವಾರ್ಯವಾಗಿ ರಾವಣನ ವಧೆಯಾಗಿ ವಿಭೀಷಣನಿಗೆ ಪಟ್ಟವನ್ನು ಕಟ್ಟಿ ಶ್ರೀರಾಮ ಸೀತೆಯೊಂದಿಗೆ ಮತ್ತೆ ಅಯೋಧ್ಯೆಗೆ ಮರಳಿದ” ಎಂದು ಉಪನ್ಯಾಸಕ್ಕೆ ಮಂಗಲವನ್ನು ಹಾಡಿದರು.

    2025ರ ಇಡೀ ವರ್ಷ ರಾಮಾಯಣ ಉಪನ್ಯಾಸ ಮಾಲೆಯನ್ನು ನಡೆಸಿಕೊಟ್ಟ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಹಾಗೂ ಪ್ರತೀ ತಿಂಗಳು ಪ್ರಾರ್ಥನೆಯನ್ನು ನೆರವೇರಿಸಿದ ಕುಮಾರಿ ಶಾರ್ವರಿ ಶ್ಯಾನುಭೋಗ್ ಇವರನ್ನು ಗೌರವಿಸಲಾಯಿತು. ಡಾ. ನಾ. ಮೊಗಸಾಲೆ, ಶ್ರೀಮತಿ ಮಿತ್ರಪ್ರಭಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ಶಾರ್ವರಿ ಪ್ರಾರ್ಥಿಸಿ, ಶ್ರೀಮತಿ ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರೂಪಿಸಿ, ಸದಾನಂದ ನಾರಾವಿ ಸ್ವಾಗತಿಸಿ, ಶ್ರೀ ನಿತ್ಯಾನಂದ ಪೈ ವಂದಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗದಲ್ಲಿ 244ನೇ ‘ಸಾಹಿತ್ಯ ಹುಣ್ಣಿಮೆ’ಯಲ್ಲಿ ಸಾಹಿತ್ಯ ಸಂಭ್ರಮ | ಡಿಸೆಂಬರ್ 20  
    Next Article ಎಸ್.ವಿ. ನಾರಾಯಣಸ್ವಾಮಿ ರಾವ್ ಇವರ ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ | ಡಿಸೆಂಬರ್ 21
    roovari

    Add Comment Cancel Reply


    Related Posts

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.