Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದ್ಯಾಗಿರಿಯಲ್ಲಿ ಲೋಕಾರ್ಪಣೆಗೊಂಡ ‘ಆಳ್ವಾಸ್ ಹೊಂಗಿರಣ’
    Literature

    ವಿದ್ಯಾಗಿರಿಯಲ್ಲಿ ಲೋಕಾರ್ಪಣೆಗೊಂಡ ‘ಆಳ್ವಾಸ್ ಹೊಂಗಿರಣ’

    September 21, 2024Updated:September 20, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜು ಹಾಗೂ ಶಾಲೆಗಳ ತ್ರೈಮಾಸಿಕ ಸಂಚಿಕೆ ‘ಆಳ್ವಾಸ್ ಹೊಂಗಿರಣ’ ಇದರ ಲೋಕಾರ್ಪಣಾ ಸಮಾರಂಭವು 19 ಸೆಪ್ಟೆಂಬರ್ 2024ರ ಗುರುವಾರದಂದು ಮೂಡಬಿದಿರೆ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿದ ಉಜಿರೆಯ ಎಸ್‌. ಡಿ. ಎಂ. ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ “ಪುಟವಿಟ್ಟ ಚಿನ್ನದಂತಿರುವ ಆಳ್ವಾಸ್ ಸಂಸ್ಥೆಯ ಮಾಹಿತಿಯನ್ನು ಹೊತ್ತು ತರುವ ‘ಆಳ್ವಾಸ್ ಹೊಂಗಿರಣ’ವು ಪ್ರಕಾಶಮಾನವಾಗಲಿ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂರು ದಶಕಗಳಿಗೂ ಅಧಿಕ ಯಶೋಗಾಥೆ ಹೊಂದಿದ್ದು, ಇಲ್ಲಿನ ಮಾಹಿತಿಯನ್ನು ನೀಡುವ ಪತ್ರಿಕೆಯನ್ನು ನಾನು ಅತ್ಯಂತ ಸಂತಸದಿಂದ ಬಿಡುಗಡೆ ಮಾಡುತ್ತಿದ್ದೇನೆ.ಹಾಲನ್ನು ‘ಕ್ಷೀರ’ ಎನ್ನುವುದು ಉತ್ಪ್ರೇಕ್ಷೆಯಲ್ಲ. ಅಂತೆಯೇ ಆಳ್ವಾಸ್ ಅನ್ನು ನೀವು ಎಷ್ಟು ಬಣ್ಣಿಸಿದರೂ ಅದು ವಿಶೇಷವಲ್ಲ. ಆಳ್ವಾಸ್ ‘ಕ್ಷೀರ ಸಾಗರ’. ಆಳ್ವಾಸ್ ಆವರಣವು ನಮ್ಮೆಲ್ಲರಿಗೂ ಎರಡನೇ ಮನೆ. ಈ ಭಾವನೆ ಮೂಡಿಸಿದ ಡಾ. ಎಂ. ಮೋಹನ ಆಳ್ವ ಇವರು ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದಂತೆ ‘ಮಹಾನ್ ಆಳ್ವರು’. ಶಿಕ್ಷಣ, ಸಂಸ್ಕೃತಿ, ಕಲೆ, ಕ್ರೀಡೆ ಸೇರಿದಂತೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಸರ್ವಾಂಗೀಣ ಚಟುವಟಿಕೆಗಳನ್ನು ಅರ್ಥಪೂರ್ಣವಾಗಿ ಆಳ್ವಾಸ್ ಸಂಘಟಿಸುತ್ತಾ ಬಂದಿದೆ. ಆಳ್ವಾಸ್ ಸಂಸ್ಥೆಯು ‘ಮಿನಿ ಭಾರತ’. ಇಲ್ಲಿನ ವಿರಾಸತ್, ನುಡಿಸಿರಿ, ಸಮ್ಮೇಳನ, ಕನ್ನಡ ಶಾಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲವೂ ಅನನ್ಯ. ಡಾ. ಎಂ. ಮೋಹನ ಆಳ್ವ ಇವರ ಈ ಅಭೂತಪೂರ್ವ ಕಾರ್ಯವೈಖರಿಯು ಅವರ ದೂರದೃಷ್ಟಿಗೆ ಹಿಡಿದ ಕನ್ನಡಿ. ಇವರ ನಿಷ್ಕಲ್ಮಶ ಪ್ರೀತಿ, ನಗು, ಮಗು ಮನಸ್ಸು, ಮಾನವೀಯತೆ ಹಾಗೂ ಸಾಮಾಜಿಕ ಕಳಕಳಿಯ ಫಲಶ್ರುತಿಯೇ ‘ಆಳ್ವಾಸ್’. ಇದನ್ನು ಮೂರು ದಶಕಗಳಿಂದ ನಾನು ಹತ್ತಿರದಿಂದ ಕಂಡಿದ್ದೇನೆ. ಡಿ. ವಿ. ಜಿ. ಮಾತಿನಂತೆ ಎಲ್ಲರೊಳು ಒಂದಾಗುವ ಆಳ್ವರು ಅಯಸ್ಕಾಂತೀಯ ವ್ಯಕ್ತಿತ್ವದವರು. ತನ್ನೆಡೆಗೆ ಎಲ್ಲರನ್ನೂ ಸೆಳೆಯುತ್ತಿದ್ದಾರೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪತ್ರಿಕೆಯ ಸಮೂಹ ಸಂಪಾದಕ ಡಾ. ಎಂ. ಮೋಹನ ಆಳ್ವ ಮಾತನಾಡಿ “ನನ್ನ ಬದುಕು ಜನಪದರ ದಾಖಲೆಗಳಿಲ್ಲದ ಮೌಖಿಕ ಚರಿತ್ರೆಯ ಹಾಗೆ ನಡೆದು ಬಂದಿದೆ. ಆದರೆ ಬದುಕಿನಲ್ಲಿ ಕೆಲಸದಷ್ಟೇ ದಾಖಲೆಗಳೂ ಮುಖ್ಯ. ಈ ನಿಟ್ಟಿನಲ್ಲಿ ಮೊದಲ ಬಾರಿಗೆ ‘ಆಳ್ವಾಸ್ ಹೊಂಗಿರಣ’ದ ಮೂಲಕ ನಮ್ಮ ಶಾಲೆಗಳ ಹಾಗೂ ಪದವಿಪೂರ್ವ ಕಾಲೇಜುಗಳ ಮಾಹಿತಿಯನ್ನು ದಾಖಲಿಸುವ ಕಾರ್ಯಕ್ಕೆ ಹೆಜ್ಜೆ ಇಟ್ಟಿದ್ದೇವೆ. ಇದರ ಯಶಸ್ಸು ಪ್ರತಿಷ್ಠಾನದ ಕಾರ್ಯಗಳ ದಾಖಲೀಕರಣದವರೆಗೆ ಪಸರಿಸಲಿ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಸಂಸ್ಥೆಗಳ ಪ್ರತಿ ಕಾರ್ಯವನ್ನು ದಾಖಲೀಕರಣ ಮಾಡುತ್ತಾರೆ. ಅದನ್ನು ಕಂಡು ನಾನು ಪ್ರೇರೇಪಿತನಾಗಿದ್ದೇನೆ. ಸಂಸ್ಥೆಯ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ದಾಖಲೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ಎಲ್ಲ ವಿದ್ಯಾರ್ಥಿಗಳು ತಮ್ಮ ಸಾಧನೆಗಳ ವಿವರಗಳನ್ನು ಸಾಧ್ಯವಾದಷ್ಟು ದಾಖಲೆ ಮಾಡಿಟ್ಟುಕೊಳ್ಳುವುದು ಬಹಳ ಉತ್ತಮ. ದಾಖಲೆಯು ಭೌತಿಕ ಹಾಗೂ ಬೌದ್ಧಿಕವಾಗಿ ಇರಬೇಕು. ಈ ದಿಶೆಯಲ್ಲಿ ‘ಆಳ್ವಾಸ್ ಹೊಂಗಿರಣ’ವು ಎಲ್ಲರಿಗೂ ದಾರಿದೀಪ ಆಗಲಿ.” ಎಂದು ಹಾರೈಸಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಆಳ್ವಾಸ್ ಕಾಲೇಜು (ಸ್ವಾಯತ್ತ) ಇದರ ಪ್ರಾಂಶುಪಾಲರಾದ ಡಾ. ಕುರಿಯನ್, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮೊಹಮ್ಮದ್ ಸದಾಕತ್ , ಉಪಪ್ರಾಂಶುಪಾಲೆ ಪ್ರೊ. ಝಾನ್ಸಿ ಪಿ. ಎನ್. ಉಪಸ್ಥಿತರಿದ್ದರು. ಆಳ್ವಾಸ್ ಸಾಂಸ್ಕೃತಿಕ ತಂಡದ ಸದಸ್ಯರು ಪ್ರಾರ್ಥನೆ ಹಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಆಳ್ವಾಸ್ ಪ. ಪೂ. ಕಾಲೇಜಿನ ಕಲಾ ವಿಭಾಗದ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಜಿರೆಯ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ‘ದೃಷ್ಟಿ – ಸೃಷ್ಟಿ’ ಕಾರ್ಯಕ್ರಮ
    Next Article ಶ್ರೀ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣ ಪ್ರಶಸ್ತಿ
    roovari

    Comments are closed.

    Related Posts

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.