Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲಾವಣ್ಯದ ಮಕ್ಕಳ ರಂಗತರಬೇತಿ ಶಿಬಿರದ ನಾಟಕೋತ್ಸವ
    Camp

    ಲಾವಣ್ಯದ ಮಕ್ಕಳ ರಂಗತರಬೇತಿ ಶಿಬಿರದ ನಾಟಕೋತ್ಸವ

    May 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ಬೈಂದೂರಿನಲ್ಲಿ ನಡೆದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಹಭಾಗಿತ್ವದಲ್ಲಿ ದಿ. ಕೂರಾಡಿ ಸೀತಾರಾಮ ಶೆಟ್ಟಿ ಸ್ಮರಣಾರ್ಥ ಆಯೋಜಿಸಿದ ಲಾವಣ್ಯದ ಮಕ್ಕಳ ‘ರಂಗತರಬೇತಿ ಶಿಬಿರದ ನಾಟಕೋತ್ಸವ’ವನ್ನು ದಿನಾಂಕ 03-05-2023ರಂದು ಭಗವದ್ಗೀತಾ ಅಭಿಯಾನದ ಜಿಲ್ಲಾ ಸಂಚಾಲಕ ಬಿಜೂರು ರಾಮಕೃಷ್ಣ ಶೇರುಗಾರ್ ಉದ್ಘಾಟಿಸಿದರು. “ನಮ್ಮ ಶ್ರೀಮಂತ ಪರಂಪರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಹಾಗೂ ಜನಮಾನಸದಲ್ಲಿ ಕಾಪಿಡುವಲ್ಲಿ ರಂಗಕಲೆಗಳು ಮಹತ್ವದ ಪಾತ್ರವಹಿಸುತ್ತವೆ. ರಂಗಭೂಮಿಗಳು ಸಮಾಜಕ್ಕೆ ಹೊಸ ಸಂದೇಶ ನೀಡಿ, ಮನುಷ್ಯನ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುವುದಲ್ಲದೇ, ಜೀವನದಲ್ಲಿನ ಲೋಪದೋಷಗಳನ್ನು ತಿದ್ದಿಕೊಳ್ಳಲು ಸಹಕಾರಿಯಾಗುತ್ತದೆ” ಎಂದು ಹೇಳಿದರು.

    ನಿನಾಸಂ ಪದವೀಧರ, ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸತ್ಯನಾ ಕೊಡೇರಿ ಮಾತನಾಡಿ, “ಲಾವಣ್ಯವು ಮಕ್ಕಳಿಗೆ ನಾಟಕ ಪೂರ್ವಾಭ್ಯಾಸ ಮಾಡಿ ನಾಟಕ ಮಾಡಿಸುತ್ತಿಲ್ಲ. ಬದಲಾಗಿ ಮಕ್ಕಳಿಗೆ ರಂಗತರಬೇತಿ ಮೂಲಕ ಹೊರಹೊಮ್ಮಿದ ಒಂದು ಕೃತಿಯನ್ನು ಈ ವೇದಿಕೆಯಲ್ಲಿ ಪ್ರದರ್ಶನ ನೀಡಲಾಗುತ್ತಿದೆ. ಬೇಸಿಗೆ ರಜಾದಿನಗಳಲ್ಲಿ ಎಲ್ಲೆಲ್ಲೋ ಆಟವಾಡಿಕೊಂಡಿರುವ ದಿನಕಳೆಯುವ ಮಕ್ಕಳನ್ನು ಕರೆತಂದು ಒಟ್ಟಾಗಿ ಕೂಡಿ ಕಲಿಯುವಿಕೆ ವಾತಾವಣ ಸೃಷ್ಟಿಸಿ ಒಂದು ಉತ್ತಮ ವಿಷಯಗಳನ್ನು ಪರಸ್ಪರ ಹಂಚಿಕೊಳ್ಳುವುದು ಒಳ್ಳೆಯ ಕೆಲಸ.” ಎಂದು ಹೇಳಿದರು.

    ಲಾವಣ್ಯ ಅಧ್ಯಕ್ಷ ನರಸಿಂಹ ಬಿ. ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣಪತ್ರ ವಿತರಿಸಲಾಯಿತು. ರಂಗನಿರ್ದಶಕ ಬಿ. ಗಣೇಶ ಕಾರಂತ್ ಇದ್ದರು. ಮೂರ್ತಿ ಬೈಂದೂರು ಪ್ರಾರ್ಥಿಸಿದರು. ಸಂಸ್ಥೆಯ ವ್ಯವಸ್ಥಾಪಕ ಗಣಪತಿ ಎಸ್. ಸ್ವಾಗತಿಸಿ, ನಿರೂಪಿಸಿದರು. ಕಾರ್ಯದರ್ಶಿ ಹರೇಗೋಡು ವಿಶ್ವನಾಥ ಆಚಾರ್ಯ ವಂದಿಸಿದರು. ಅನಂತರ ಮಕ್ಕಳಿಂದ ‘ನಮಗೂ ಸ್ವಾತಂತ್ರ್ಯ ಬೇಕು’ ಹಾಗೂ ‘ಝೂಂ ಝೂಂ ಆನೆ ಮತ್ತು ಪುಟ್ಟಿ’ ಎಂಬ ಎರಡು ನಾಟಕಗಳು ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
    Next Article ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಇವರಿಂದ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’
    roovari

    Add Comment Cancel Reply


    Related Posts

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025

    ಅಭಿನಯ ತರಂಗ ವತಿಯಿಂದ ‘ಅಂತರಂಗದ ರಂಗ’ ಅಭಿನಯ ಶಿಬಿರ | ಆಗಸ್ಟ್ 01ರಿಂದ 15

    July 15, 2025

    ಆಯನ ನಾಟಕದ ಮನೆಯಿಂದ ‘ಅಶ್ವತ್ಥಾಮ not out’ ವಿಭಿನ್ನ ನಾಟಕ ಪ್ರದರ್ಶನ | ಜುಲೈ 18

    July 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.