Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಐತರೇಯ ಉಪನಿಷತ್’ ಕುರಿತು ಉಪನ್ಯಾಸ
    Literature

    ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಐತರೇಯ ಉಪನಿಷತ್’ ಕುರಿತು ಉಪನ್ಯಾಸ

    July 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ದಿನಾಂಕ 06-07-2024ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮ ಜರಗಿತು.

    ಈ ಕಾರ್ಯಕ್ರಮದಲ್ಲಿ ‘ಐತರೇಯ ಉಪನಿಷತ್’ ಇದರ ಕುರಿತು ಉಪನ್ಯಾಸ ನೀಡಿದ ಸಂಸ್ಕೃತ ವಿದ್ವಾಂಸರು ಹಾಗೂ ಪ್ರಾಧ್ಯಾಪಕರೂ ಆಗಿರುವ ಶ್ರೀ ಅನೀಶ ಮುಳಿಯಾಲ ಇವರು “ಐತರೇಯ ಉಪನಿಷತ್ ಮೂರು ಅಧ್ಯಾಯಗಳಿರುವ ಸಣ್ಣ ಉಪನಿಷತ್ ಆದರೂ ಆತ್ಮಜ್ಞಾನವನ್ನು ಬೋಧಿಸುವ ಮಹತ್ವದ ಉಪನಿಷತ್ತಾಗಿದೆ. ಸಮುದ್ರದ ಅಲೆಗಳಂತೆ ಪಂಚೇಂದ್ರಿಯಗಳ ಬಯಕೆಗಳಿಗೆ ಕೊನೆಯೆಂಬುದಿಲ್ಲ. ಯೋಗ್ಯ ಗುರುವಿನ ಮಾರ್ಗದರ್ಶನ ದೊರಕಿದಲ್ಲಿ ಪೂರ್ಣಜ್ಞಾನವೆಂಬ ಹಡಗನ್ನೇರಿ ಸಂಸಾರವೆಂಬ ಸಾಗರದಿಂದ ಪಾರಾಗಿ ದಡ ಸೇರಿ ಮೋಕ್ಷ ಪದವನ್ನು ಪಡೆಯಬಹುದಾಗಿದೆ. ಅಂತಃಕರಣ ರೂಪದಲ್ಲಿ ಪರಮಾತ್ಮ ನಮ್ಮೊಳಗಿದ್ದು, ಆತನ ಉಪಾಸನೆಯಿಂದ ಆತ್ಮಜ್ಞಾನವನ್ನು ಹೊಂದಿ ಮುಕ್ತರಾಗುವ ಮಾರ್ಗವನ್ನು ಉಪನಿಷತ್ತು ನಮಗೆ ತೋರಿಸುತ್ತದೆ” ಎಂದು ಹೇಳಿದರು.

    ಡಾ. ನಾ. ಮೊಗಸಾಲೆ, ನಿತ್ಯಾನಂದ ಪೈ, ಏರ್ ವೇಸ್ ಮಾರ್ಷಲ್ ರಮೇಶ್ ಕಾರ್ಣಿಕ್, ಕಾರ್ಕಳ ತಾಲೂಕು ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾದ ಕಮಲಾಕ್ಷ ಕಾಮತ್, ಉಪಾಧ್ಯಕ್ಷರಾದ ಮೋಹನದಾಸ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಪೂರ್ಣ ಪ್ರಾಯೋಜಕತ್ವವನ್ನು ಕಾರ್ಕಳ ತಾಲೂಕು ಹಿರಿಯ ನಾಗರಿಕರ ಸಂಘವು ವಹಿಸಿಕೊಂಡಿದ್ದು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗೀತಾ ಜಿ. ಮಲ್ಯ ಪ್ರಾರ್ಥಿಸಿ, ಜಗದೀಶ ಗೋಖಲೆಯವರು ಅತಿಥಿಗಳನ್ನು ಪರಿಚಯಿಸಿದರು. ಶೈಲಜಾ ಹೆಗ್ಡೆಯವರು ಕಾರ್ಯಕ್ರಮ ನಿರೂಪಿಸಿ, ಸದಾನಂದ ನಾರಾವಿ ಸ್ವಾಗತಿಸಿ, ಪ್ರದೀಪ್ ನಾಯಕ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ವಿಜಯ ಕಲಾ ರಂಗೋತ್ಸವ’ | ಜುಲೈ 21
    Next Article ಗುಡ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.