Subscribe to Updates

    Get the latest creative news from FooBar about art, design and business.

    What's Hot

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅರಿವು ತಿಳಿವು’ ಸರಣಿಯಲ್ಲಿ ‘ಬೃಹದಾರಣ್ಯಕ ಉಪನಿಷತ್ತು’ ವಿಷಯದ ಉಪನ್ಯಾಸ 
    Literature

    ‘ಅರಿವು ತಿಳಿವು’ ಸರಣಿಯಲ್ಲಿ ‘ಬೃಹದಾರಣ್ಯಕ ಉಪನಿಷತ್ತು’ ವಿಷಯದ ಉಪನ್ಯಾಸ 

    November 19, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ತಿಂಗಳ ಉಪನ್ಯಾಸ ಸರಣಿ ‘ಅರಿವು ತಿಳಿವು’ ಕಾರ್ಯಕ್ರಮವು ದಿನಾಂಕ 16 ನವೆಂಬರ್ 2024ರ ಶನಿವಾರದಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ‘ಬೃಹದಾರಣ್ಯಕ ಉಪನಿಷತ್ತು’ ಇದರ ಕುರಿತು ಉಪನ್ಯಾಸ ನೀಡಲು ಆಗಮಿಸಿದ ಸಂಸ್ಕೃತ ವಿದ್ವಾಂಸರು ಹಾಗೂ ನಿವೃತ್ತ ಪ್ರಾಧ್ಯಾಪಕರಾದ ವಿದ್ಯಾವಾರಿಧಿ ಡಾ. ವಾಗೀಶ್ವರೀ ಶಿವರಾಮ್ ಮಾತನಾಡಿ “ನಾಮರೂಪಗಳ ಆಚೆಗಿರುವ ಪರಮಾತ್ಮನ ಶಕ್ತಿಯ ಪರಿಚಯವನ್ನು ಮಾಡಿಸಿ ಅಂತಹ ಪರಮಾತ್ಮನೆಡೆಗೆ ಸಾಗಲು ನೆರವಾಗುವ ಇಂದ್ರಿಯಗಳ ನಿಗ್ರಹ, ಪರಿಶ್ರಮದ ಸಾಧನೆಯ ವಿವರಗಳನ್ನು ಶಿಷ್ಯರಿಗೆ ಬೋಧಿಸಿದ ಜ್ಞಾನವೇ ‘ಬೃಹದಾರಣ್ಯಕ ಉಪನಿಷತ್ತು’ ಆಗಿದೆ. ನಮ್ಮ ವಿವೇಕದ ಪ್ರಜ್ಞೆಯನ್ನು ಜಾಗೃತಗೊಳಿಸಿ ಪಂಚೇಂದ್ರಿಯಗಳಿಗೆ ನಿಲುಕುವ ಭೌತಿಕ ಜ್ಞಾನವನ್ನು ಮೀರಿದ ಇಂದ್ರಿಯಾತೀತ ಜ್ಞಾನವನ್ನು ನೀಡುವ ಉಪನಿಷತ್ತುಗಳು ಜ್ಞಾನದ ಬೆಳಕಿನೆಡೆಗೆ ನಮ್ಮನ್ನು ಕರೆದೊಯ್ಯುತ್ತವೆ. ನಮ್ಮನ್ನು ದುರ್ಬಲಗೊಳಿಸುವ ಅಹಂಕಾರ, ಮಮಕಾರ, ನಕಾರಾತ್ಮಕ ಚಿಂತನೆಗಳನ್ನು ಹೋಗಲಾಡಿಸಿ ಲೋಕಹಿತದ ಕಾರ್ಯದಲ್ಲಿಯೇ ಆನಂದವನ್ನು ಕಂಡುಕೊಳ್ಳುವ ಬಗ್ಗೆ ಉಪನಿಷತ್ತು ನಮಗೆ ಮಾರ್ಗದರ್ಶನ ನೀಡುತ್ತದೆ.” ಎಂದರು.
    ಡಾ. ನಾ. ಮೊಗಸಾಲೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ನಿತ್ಯಾನಂದ ಪೈ ಮತ್ತು ಶ್ರೀಮತಿ ಮಿತ್ರಪಭಾ ಹೆಗ್ಡೆ ಅತಿಥಿಯಾಗಿ ಭಾಗವಹಿಸಿದರು. ಶ್ರೀಮತಿ ಗೀತಾ ಮಲ್ಯ ಪ್ರಾರ್ಥಿಸಿ, ಸದಾನಂದ ನಾರಾವಿ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ಶೆಣೈ ಅತಿಥಿಗಳನ್ನು ಪರಿಚಯಿಸಿ, ಶ್ರೀಮತಿ ಮಾಲತಿ ವಸಂತರಾಜ್ ಕಾರ್ಯಕ್ರಮ ನಿರೂಪಿಸಿ, ಜಗದೀಶ್ ಗೋಖಲೆ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಲೋಕಾರ್ಪಣೆಗೊಂಡ ಗೋವಿಂದ ಪೈ ಸಂಶೋಧನಾ ಸಂಪುಟ -1 
    Next Article ಮತ್ತೆ ಚೈತ್ರಯಾತ್ರೆಗೆ ಸಿದ್ಧಗೊಂಡ ಆಳ್ವಾಸ್ ನ ‘ಚಾರುವಸಂತ’ | ನವೆಂಬರ್ 21 – 22
    roovari

    Add Comment Cancel Reply


    Related Posts

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.