Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಗಣೇಶ ನೃತ್ಯಾಲಯದಲ್ಲಿ ‘ನೃತ್ಯೋಲ್ಲಾಸ’ ಮಾಸಿಕ ಭರತನಾಟ್ಯ ಕಾರ್ಯಕ್ರಮ

    August 26, 2025

    ಬಂಟ್ವಾಳದ ಏರ್ಯ ಬೀಡುವಿನಲ್ಲಿ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭ | ಆಗಸ್ಟ್ 28

    August 26, 2025

    ಕ.ಸಾ.ಪ.ದಿಂದ ಹಿರಿಯ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರಿಗೆ ಸನ್ಮಾನ | ಆಗಸ್ಟ್ 30

    August 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌. ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ
    Literature

    ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌. ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ

    October 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸೋಮವಾರಪೇಟೆ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲ್ಲೂಕು, ಕಸಬ ಹೋಬಳಿ ಪರಿಷತ್‌ ವತಿಯಿಂದ ಎಸ್‌. ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ದಿನಾಂಕ 28 ಸೆಪ್ಟೆಂಬರ್ 2024ರ ಶನಿವಾರದಂದು ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ ಬೆಳವಣಿಗೆಗೆ ಕನ್ನಡ ಕವಿಗಳ ಕೊಡುಗೆ’ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ ಕವಯತ್ರಿ ವಸಂತಿ ರವೀಂದ್ರ ಮಾತನಾಡಿ “ಕವಿಗಳು ಮತ್ತು ಸಾಹಿತಿಗಳಿಂದ ಕನ್ನಡ ಭಾಷೆ ಶ್ರೀಮಂತವಾಗಿದೆ. 20ನೇ ಶತಮಾನದ ಪ್ರಾರಂಭದಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ, ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಪ್ರಕಾರದಲ್ಲಿ ಕಾಣಿಸಿಕೊಂಡಿತು. ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ ಹೀಗೆ ಬಹುಬೇಗ ಅಭಿವೃದ್ಧಿ ಪಡೆದು ವಿಪುಲ ಸಾಹಿತ್ಯ ಬೆಳೆವಣಿಗೆಗೆ ಕಾರಣವಾಯಿತು. ಕುವೆಂಪು, ದ. ರಾ. ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ. ಕೃ. ಗೋಕಾಕ್, ಯು. ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ ಅವರು ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿದ್ದಾರೆ. ಇನ್ನು ಅನೇಕ ಕವಿಗಳು ಕನ್ನಡ ಭಾಷಾ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.” ಎಂದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಕ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಡಿ. ಆ‌ರ್. ಗಿರೀಶ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕ. ಸಾ. ಪ. ಜಿಲ್ಲಾಧ್ಯಕ್ಷ ಎಂ. ಪಿ. ಕೇಶವ ಕಾಮತ್‌, ತಾಲೂಕು ಅಧ್ಯಕ್ಷ ಎಸ್. ಡಿ. ವಿಜೇತ್, ಮಾಜಿ ಅಧ್ಯಕ್ಷ ಜೆ. ಸಿ. ಶೇಖರ್, ಕ. ಸಾ. ಪ. ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್‌, ಜಲಜಾ ಶೇಖ‌ರ್, ಕೆ. ಪಿ. ಸುದರ್ಶನ್, ಕೆ. ಎಸ್. ಭಾಗ್ಯ ಉಪಸ್ಥಿತರಿದ್ದರು. ಶಿಕ್ಷಕಿ ಅನುಸೂಯ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ‘ಉದಯರಾಗ – 56’ | ಅಕ್ಟೋಬರ್ 6
    Next Article ಕಟೀಲಿನ ಸರಸ್ವತೀ ಸದನದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಸಂಮಾನ
    roovari

    Comments are closed.

    Related Posts

    ಬಂಟ್ವಾಳದ ಏರ್ಯ ಬೀಡುವಿನಲ್ಲಿ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭ | ಆಗಸ್ಟ್ 28

    August 26, 2025

    ಕ.ಸಾ.ಪ.ದಿಂದ ಹಿರಿಯ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರಿಗೆ ಸನ್ಮಾನ | ಆಗಸ್ಟ್ 30

    August 26, 2025

    ಮೂಡುಬಿದಿರೆಯಲ್ಲಿ ‘ಕನ್ನಡ ಕಂಪು’ ಕನ್ನಡ ಕಲರವ ಮತ್ತು ಉಪನ್ಯಾಸ | ಆಗಸ್ಟ್ 28

    August 26, 2025

    ಪುತ್ತೂರಿನಲ್ಲಿ ಜನಮನ ಗೆದ್ದ ‘ಸ್ವಾತಂತ್ರ್ಯೋತ್ಸವ ಮಕ್ಕಳ ಕವಿಗೋಷ್ಠಿ’

    August 26, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.