Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿ. ವಿ. ಯಲ್ಲಿ ಕ. ಸಾ. ಪ. ದತ್ತಿನಿಧಿ ಉಪನ್ಯಾಸ
    Literature

    ಮಂಗಳೂರು ವಿ. ವಿ. ಯಲ್ಲಿ ಕ. ಸಾ. ಪ. ದತ್ತಿನಿಧಿ ಉಪನ್ಯಾಸ

    October 30, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ಮಂಗಳೂರು ವಿ. ವಿ.ಇಲ್ಲಿನ  ಎಸ್.  ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಅಂಬಲಪಾಡಿ ವ್ಯಾಸ ಬಲ್ಲಾಳ ಜಾನಕಿ ದತ್ತಿ ನಿಧಿ, ಸೇಡಿಯಾಪು ಕೃಷ್ಣಭಟ್ಟರ ಬಗ್ಗೆ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 29 ಅಕ್ಟೋಬರ್ 2024ರ ಮಂಗಳವಾರದಂದು ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಕಾಸರಗೋಡು ಕೇಂದ್ರೀಯ ವಿ. ವಿ. ಯ ಸಹಾಯಕ ಪ್ರಾಧ್ಯಾಪಕ  ಡಾ. ಪ್ರವೀಣ ಪದ್ಯಾಣ ಮಾತನಾಡಿ ಸೇಡಿಯಾಪು ಅವರು ಕವಿಯಾಗಿ, ಸಾಹಿತಿಯಾಗಿ, ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದರು. ಪ್ರಗತಿಪರ ಚಿಂತಕರಾಗಿದ್ದ ಅವರದ್ದು ವಸ್ತುನಿಷ್ಠವಾಗಿ ಆಲೋಚನೆ ಮಾಡುವ ವ್ಯಕ್ತಿತ್ವ. ಪ್ರಗತಿಯು ಹೇಗಿರಬೇಕೆಂದರೆ ಸಾತ್ವಿಕತೆ, ಒಗ್ಗೂಡಿಸುವ ಮೂಲಕ ಆಗಬೇಕು ಎಂದು ನಂಬಿದ್ದ  ಅವರದ್ದು ತಾತ್ವಿಕ ಸಮೃದ್ಧಿಯ ಬರವಣಿಗೆಯಾಗಿತ್ತು. ಸಾಹಿತ್ಯವು ಇಡೀ ಸಮಾಜವನ್ನು ಕಟ್ಟುವ ಮತ್ತು ಸಂಸ್ಕೃತಿಯ ಹಿರಿಮೆಯನ್ನು ಬೆಳಗಿಸುವಂತಿರಬೇಕು ಎಂದಿದ್ದ ಅವರು ಅಕ್ಷರ, ವರ್ಣಗಳ ಬಗ್ಗೆ ಹಾಗೂ ಭಾಷಾ ವಿಚಾರಗಳ ಬಗ್ಗೆಯೂ ವಿಮರ್ಶೆ ಮಾಡಿದ್ದಾರೆ. ಆಧ್ಯಾತ್ಮದ ಬಗ್ಗೆಯೂ ಅವರ ಚಿಂತನೆ ಅಪೂರ್ವವಾದುದು. ಸಾಹಿತ್ಯದ ಬಗ್ಗೆ ಸುದೀರ್ಘವಾಗಿ ಚರ್ಚಿಸಿರುವುದನ್ನು ಅವರ ಬರವಣಿಗೆಯಲ್ಲಿ ಕಾಣಬಹುದು. ‘ಕುಮಾರ ವಿಜಯ’ ಪ್ರಸಂಗದ ಬಗ್ಗೆ, ತಾಳಮದ್ದಳೆಯ ಬಗ್ಗೆ ಅನೇಕ ವಿಚಾರ ವಿಮರ್ಶೆಗಳನ್ನು ಮಾಡಿರುವ ಅವರು ಯಕ್ಷಗಾನ‌ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ.” ಎಂದರು.
     ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ. ಸೋಮಣ್ಣ ಹೊಂಗಳ್ಳಿ ಮಾತನಾಡಿ “ಕರಾವಳಿ ಪಂಡಿತ ಪರಂಪರೆಗೆ ಹೆಸರಾದ ನಾಡು. ಅಂತಹ ಪರಂಪರೆಯ ಭಾಗವಾದ ಸೇಡಿಯಾಪು ಉತ್ತಮ ಕತೆಗಾರರು ಕೂಡ. ಅವರು ತಮ್ಮ ಕತೆಗಳಲ್ಲಿ  ಪ್ರಭುತ್ವದ ವಿರುದ್ಧ ಧ್ವನಿಯೆತ್ತಿದ್ದರು.” ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಪ್ರೊ. ನಾಗಪ್ಪ ಗೌಡ, ಡಾ. ಯಶುಕುಮಾರ್,  ಗುಣಾಜೆ ರಾಮಚಂದ್ರ ಭಟ್ ಮೊದಲಾದವರು ಉಪಸ್ಥಿತರಿದ್ದರು.
    ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ಡಾ. ಧನಂಜಯ ಕುಂಬ್ಳೆ ಸ್ವಾಗತಿಸಿ, ‌ಪ್ರಾಸ್ತಾವಿಕವಾಗಿ ಮಾತನಾಡಿ, ಕ. ಸಾ. ಪ. ಉಳ್ಳಾಲ ಘಟಕದ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article“ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ | ನವಂಬರ್ 1
    Next Article ಮೂಕಾಂಬಿಕಾ ಕಲಾ ಮಂಟಪದಲ್ಲಿ ‘ಜನ್ಸಾಲೆ ಯಕ್ಷ ಪರ್ವ 2024’ | ನವೆಂಬರ್ 3
    roovari

    Add Comment Cancel Reply


    Related Posts

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.