Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಹಾವೀರ ಪ. ಪೂ. ಕಾಲೇಜಿನಲ್ಲಿ ಉಪನ್ಯಾಸ
    Literature

    ಶ್ರೀ ಮಹಾವೀರ ಪ. ಪೂ. ಕಾಲೇಜಿನಲ್ಲಿ ಉಪನ್ಯಾಸ

    January 9, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಶ್ರೀ ಮಹಾವೀರ ಪ. ಪೂ. ಕಾಲೇಜಿನ ಸಹಯೋಗದಲ್ಲಿ ‘ಕನ್ನಡ ಚಿಂತನ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ‘ಕನ್ನಡ ಕಾವ್ಯ ಮತ್ತು ಜೀವನಪ್ರೀತಿ’ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 08 ಜನವರಿ 2025ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗೀಶ್ ಕೈರೋಡಿ ಮಾತನಾಡಿ “ಹೊರಗಿನ ಪ್ರಪಂಚವನ್ನು ತೆರೆದ ಕಣ್ಣುಗಳಿಂದ ಕಂಡಾಗ ಅನೇಕ ಸಂಗತಿಗಳು ನಮ್ಮ ಮನಸ್ಸನ್ನು ತಟ್ಟಿ ಯೋಚನೆಗೀಡು ಮಾಡಿದಾಗ ಅಂತಹ ಸಂಗತಿಗಳೇ ನಮ್ಮನ್ನು ಕವಿತ್ವದೆಡೆಗೆ ಸೆಳೆಯುತ್ತವೆ.ಭಾವನಾತ್ಮಕ ಸಂಗತಿಗಳಿರಬಹುದು, ನೋವಿನ ಘಟನೆಗಳೇ ಇರಬಹುದು, ಸಂತೋಷದ ಕ್ಷಣಗಳೇ ಇರಬಹುದು ಆ ಸಂದರ್ಭಗಳಲ್ಲಿ ನಮ್ಮನ್ನು ಕಾಡುವ ಸಂವೇದನೆ, ಜೀವನಪ್ರೀತಿ ಕವಿಮನಸ್ಸಿಗೆ ಮೂಲ. ಒಳ್ಳೆಯ ಬರಹವೂ ಕಾವ್ಯವಾಗಬಲ್ಲುದು ಮತ್ತು ಕಾವ್ಯ ರಚಿಸದಿದ್ದರೂ ಜೀವನ ಪ್ರೀತಿಯ ಸಂವೇದನೆ ಇರುವವರೆಲ್ಲರೂ ಕವಿಗಳೇ ಆಗಿರುತ್ತಾರೆ” ಎಂದರು.

    ಸಭಾಧ್ಯಕ್ಷತೆಯನ್ನುವಹಿಸಿದ್ದ ಕ. ಸಾ. ಪ. ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ಪ್ರೊ. ಕೆ.ವೇಣುಗೋಪಾಲ ಶೆಟ್ಟಿ ಮಾತನಾಡಿ “ಇಂದಿನ ಯುವಜನತೆಯಲ್ಲಿ ಭಾವನಾತ್ಮಕ ಸಂಬಂಧಗಳು ಸಡಿಲಗೊಳ್ಳುತ್ತಿದ್ದು ಹೆತ್ತವರು ಅನಾಥರಾಗುವಂತಹ ಮತ್ತು ವೃದ್ಧಾಶ್ರಮಗಳಲ್ಲಿ ದಿನಕಳೆಯುವಂತಹ ಸ್ಥಿತಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗದಂತೆ ಮಕ್ಕಳಲ್ಲಿ ಮಾನವೀಯತೆಯ ಸಂಸ್ಕಾರವನ್ನು ಬೆಳೆಸುವಲ್ಲಿ ಸಾಹಿತ್ಯ ಪ್ರೀತಿ ನೆರವಾಗುತ್ತದೆ” ಎಂದರು.
    ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ. ರಾಧಾಕೃಷ್ಣ ಶೆಟ್ಟಿ, ಕ. ಸಾ. ಪ. ಮೂಡುಬಿದಿರೆ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಸದಾನಂದ ನಾರಾವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಮೇಶ್ ಭಟ್ ಸ್ವಾಗತಿಸಿ, ಅಮೂಲ್ಯ ಜೈನ್ ಕಾರ್ಯಕ್ರಮ ನಿರ್ವಹಿಸಿ, ಕನ್ನಡ ಉಪನ್ಯಾಸಕಿ ಶ್ರೀಮತಿ ವಿಜಯಲಕ್ಷ್ಮೀ ಮಾರ್ಲ ವಂದಿಸಿದರು.

    lecturer Literature
    Share. Facebook Twitter Pinterest LinkedIn Tumblr WhatsApp Email
    Previous Articleಎಂ. ಸಿ. ಎಫ್. ನಾಗರಿಕ ಸಲಹಾ ಸಮಿತಿ ಸಾಂಸ್ಕೃತಿಕ ವೇದಿಕೆಯಲ್ಲಿ ‘ಉದಯರಾಗ–58’
    Next Article ದ. ಕ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಕಲೋತ್ಸವ’
    roovari

    Add Comment Cancel Reply


    Related Posts

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.