Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಗವತ ಲೀಲಾವತಿ ಬೈಪಡಿತ್ತಾಯ ವಿಧಿವಶ
    Yakshagana

    ಭಾಗವತ ಲೀಲಾವತಿ ಬೈಪಡಿತ್ತಾಯ ವಿಧಿವಶ

    December 16, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನದ ಪ್ರಥಮ ಮಹಿಳಾ ವೃತ್ತಿ ಭಾಗವತರಾಗಿದ್ದ ಲೀಲಾವತಿ ಬೈಪಡಿತ್ತಾಯ ದಿನಾಂಕ 14 ಡಿಸೆಂಬರ್ 2024 ರಂದು ನಿಧನರಾದರು. ಅವರಿಗೆ 78ವರ್ಷ ವಯಸ್ಸಾಗಿತ್ತು.

    ಕಾಸರಗೋಡಿನ ಮಧೂರಿನಲ್ಲಿ 1947ರ ಮೇ 23ರಂದು ಜನಿಸಿದ್ದ ಲೀಲಾವತಿ ಸಣ್ಣ ಪ್ರಾಯದಲ್ಲೇ ತಂದೆಯನ್ನು ಕಳೆದು ಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್, ಮಧೂರು ದೇವಾಲಯದಲ್ಲಿ ದೇವ ನೃತ್ಯ ಕಲಾವಿದರಾಗಿದ್ದರು. ಬಡತನದಿಂದಾಗಿ ಲೀಲಾವತಿಗೆ ವಿದ್ಯೆ ಕಲಿಯಲಾಗಲಿಲ್ಲ. ಸುಮಧುರವಾಗಿ ಹಾಡುತ್ತಿದ್ದ ಅವರು ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತರು. 23ನೇ ವರ್ಷ ಪ್ರಾಯದಲ್ಲಿ ತೆಂಕುತಿಟ್ಟಿನ ಚೆಂಡೆ-ಮದ್ದಳೆಯ ಕಲಾವಿದ ಹರಿನಾರಾಯಣ ಬೈಪಾಡಿತ್ತಾಯ ಅವರನ್ನು ಮದುವೆಯಾಗಿ ಕಡಬಕ್ಕೆ ಸ್ಥಳಾಂತರಗೊಂಡರು.
     ಲೀಲಾವತಿ ಅವರ ಶಾಸ್ತ್ರೀಯ ಸಂಗೀತ ಗಾಯನ ಪ್ರತಿಭೆಯನ್ನು ಅರಿತ ಪತಿ ಹರಿನಾರಾಯಣರು ಯಕ್ಷಗಾನ ಹಾಡುಗಾರಿಕೆಗೆ ಪ್ರೋತ್ಸಾಹ ನೀಡಿದರು. ಆರಂಭದಲ್ಲಿ ಕಡಬದ ಸುತ್ತಲಿನ ಶಾಲಾ ವಾರ್ಷಿಕೋತ್ಸವ, ಮದುವೆ, ಉಪನಯನ ಮತ್ತಿತರ ಕಾರ್ಯಕ್ರಮಗಳಲ್ಲಿ ಆಯೋಜಿಸುವ ತಾಳಮದ್ದಲೆಯ ಪ್ರಸಂಗಗಳಲ್ಲಿ ಹಾಡುಗಾರಿಕೆ ನಡೆಸಿಕೊಟ್ಟರು. ಬಳಿಕ ‘ಸೆಟ್ ಮೇಳ’ಗಳ ಪ್ರಸಂಗದಲ್ಲಿಯೂ ಹಾಡುಗಾರಿಕೆ ನಡೆಸಿದರು.
    ಬೆಳ್ತಂಗಡಿಯಲ್ಲಿ ಅರುವ ನಾರಾಯಣ ಶೆಟ್ಟಿ ‘ಆಳದಂಗಡಿ ಮೇಳ’ ಕಟ್ಟಿದ್ದರು. ಆ ಮೇಳದಲ್ಲಿ ಪತಿ ಹರಿನಾರಾಯಣ ಬೈಪಾಡಿತ್ತಾಯ ಚೆಂಡೆ- ತಾಳಮದ್ದಲೆ ನಿರ್ವಹಿಸುತ್ತಿದ್ದರು. ಲೀಲಾವತಿ ಭಾಗವತಿಕೆ ಮಾಡುತ್ತಿದ್ದರು. ಹಲವು ಯಕ್ಷಗಾನ ಕಲಾವಿದರ ಒಡನಾಟವು ಲೀಲಾವತಿಗೆ ಲಭಿಸಿತು.
    ಕಾಳಿಂಗ ನಾವಡ, ಎಂ. ಎಲ್. ಸಾಮಗ, ಪಾತಾಳ ವೆಂಕಟರಮಣ ಭಟ್, ಈಶ್ವರ ಭಟ್, ಶೇಣಿ ಗೋಪಾಲಕೃಷ್ಣ ಭಟ್, ರಾಮದಾಸ ಸಾಮಗ, ಬಣ್ಣದ ಮಾಲಿಂಗ, ಪ್ರಭಾಕರ ಜೋಷಿ, ಬಲಿಪ ನಾರಾಯಣ ಭಾಗವತರು, ಕಡತೋಕ ಭಾಗವತರು, ನೆಡ್ಲೆ ನರಸಿಂಹ ಭಟ್, ಇತರ ಮುಮ್ಮೇಳ ಮತ್ತು ಹಿಮ್ಮೇಳ ಕಲಾವಿದರ ಒಡನಾಟವೂ ಲೀಲಾವತಿಯ ಕಲಾಸೇವೆಗೆ ಸಹಕಾರವಾಯಿತು.
    ಇವರು ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿ ಭಾಗವತಿಕೆ ನಡೆಸಿದ್ದರು. ಪರಕೆದ ಪಿಂಗಾರ, ದೇವಿಮಹಾತ್ಮೆ, ದಕ್ಷಯಜ್ಞ, ಕರ್ಣಪರ್ವ, ಸುಧನ್ವ ಮೋಕ್ಷ, ವಜ್ರಕೋಗಿಲೆ ಮುಂತಾದ ಪ್ರಸಂಗಗಳಲ್ಲಿ ಹಾಡಿದ ಪದ್ಯಗಳು ಪ್ರಸಿದ್ಧವಾಗಿವೆ. ಆಳದಂಗಡಿ ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದ ಇವರು ತೆಂಕು, ಬಡಗು ಶೈಲಿಗೆ ಮತ್ತು ಕನ್ನಡ, ತುಳು ಪ್ರಸಂಗಗಳಿಗೆ ಹಾಡುಗಾರಿಕೆ ನಿರ್ವಹಿಸಿದ್ದರು.
    ಇವರ ಸಾಧನಗೆ ‘ಕರ್ನಾಟಕ ಯಕ್ಷಗಾನ ಅಕಾಡಮಿ ಪ್ರಶಸ್ತಿ’, ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’, ‘ಆಳ್ವಾಸ್ ನುಡಿಸಿರಿ ಪ್ರಶಸ್ತಿ’, ‘ಉಳ್ಳಾಲ ರಾಣಿ ಅಬ್ಬಕ್ಕ ಪ್ರಶಸ್ತಿ’ ಸಹಿತ ಹಲವಾರು ಸಂಘ-ಸಂಸ್ಥೆಗಳಿಂದ ಸನ್ಮಾನ ಹಾಗೂ ಪುರಸ್ಕಾರಗಳು ಲಭಿಸಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 10
    Next Article ಬೆಂಗಳೂರಿನಲ್ಲಿ ಕಾವಿ ಕಲೆ ಭಿತ್ತಿಚಿತ್ರಗಳ ಕಲಾ ಪ್ರದರ್ಶನ | ಡಿಸೆಂಬರ್ 18ರಿಂದ 29
    roovari

    Add Comment Cancel Reply


    Related Posts

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ತಾಳಮದ್ದಳೆ ಜ್ಞಾನಯಜ್ಞ’ | ಮೇ 26

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.