Subscribe to Updates

    Get the latest creative news from FooBar about art, design and business.

    What's Hot

    ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಡಿಟೋರಿಯಂನಲ್ಲಿ ಅರೆಭಾಷೆ ನಾಟಕ | ನವೆಂಬರ್ 27

    November 24, 2025

    ಉಡುಪಿಯಲ್ಲಿ ‘ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು’ ಕುರಿತ ವಿಚಾರ ಸಂಕಿರಣ

    November 24, 2025

    ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

    November 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಲೀಲಾವತಿ ಬೈಪಾಡಿತ್ತಾಯ ಸಂಸ್ಮರಣೆ
    Yakshagana

    ಮಂಗಳೂರಿನಲ್ಲಿ ಲೀಲಾವತಿ ಬೈಪಾಡಿತ್ತಾಯ ಸಂಸ್ಮರಣೆ

    October 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕಾಟಿಪಳ್ಳದ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಆಯೋಜಿಸಿದ್ದ ವೃತ್ತಿಪರ ಯಕ್ಷಗಾನ ಮೇಳದ ಪ್ರಥಮ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ ಅವರ ಸಂಸ್ಮರಣಾ ಗೋಷ್ಠಿ ಕಾರ್ಯಕ್ರಮವು ದಿನಾಂಕ 12 ಅಕ್ಟೋಬರ್ 2025ರ ಭಾನುವಾರದಂದು ಮಂಗಳೂರಿನ ತುಳು ಸಾಹಿತ್ಯ ಅಕಾಡೆಮಿಯ ಸಭಾಭವನದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಯಕ್ಷಗಾನ ತಜ್ಞ ಪ್ರಭಾಕರ ಜೋಶಿ ಮಾತನಾಡಿ “ಮಹಿಳಾ ಕಲಾವಿದೆಯಾಗಿ ಮಾತ್ರವಲ್ಲ, ಭಾಗವತಿಕೆ ವಲಯದಲ್ಲೇ ಪ್ರಥಮರ ಸಾಲಿನಲ್ಲಿ ನಿಲ್ಲುವ ಲೀಲಾವತಿ ಬೈಪಾಡಿತ್ತಾಯ ಅವರ ಯಕ್ಷಗಾನ ಪ್ರಾವೀಣ್ಯವು ‘ಲೀಲಾವತಿ ಪ್ರಜ್ಞೆ’ಯಾಗಿ ಕಲಾಕ್ಷೇ ತ್ರದಲ್ಲಿ ಪುನರುತ್ಥಾನಗೊಳ್ಳಬೇಕು. ಯಕ್ಷಗಾನದಲ್ಲಿ ಮಹಿಳೆಯರ ಚಾಪು ಮೂಡಿ ವರ್ಷಗಳು ಅನೇಕ ಆಗಿವೆ. ಆದರೆ ಪೂರ್ಣಾವಧಿ ಕಲಾವಿದೆಯಾಗಿ, ವೃತ್ತಿಪರತೆಯನ್ನು ಮೂಡಿಸಿದ ಮೊದಲಿಗರು ಲೀಲಾವತಿ. ಅವರಿಗೆ ಆರಂಭದಲ್ಲಿ ಆರ್ಥಿಕ ಬಡತನ ಇದ್ದರೂ ಕಲಾಶ್ರೀಮಂತಿಕೆ ಇತ್ತು. ರಾಗ, ಲಯ, ತಾಳ, ಕಾಲಪ್ರಭೇದ ಅರಿತು ಭಾಗವತಿಕೆ ಮಾಡಿ ಅವರು ಯಕ್ಷಗಾನದ ಗುರುವಾಗಿಯೂ ಹೆಸರು ಮಾಡಿದ್ದಾರೆ. ನಿಷ್ಕಲ್ಮಶ, ಗಂಭೀರ ವ್ಯಕ್ತಿತ್ವ ಹೊಂದಿದ್ದ ಅವರಲ್ಲಿ ಹಾಸ್ಯಪ್ರಜ್ಞೆಯೂ ಇತ್ತು. ಲೀಲಾವತಿ ಅವರು ಹಿಮ್ಮೇಳವನ್ನು ಮುನ್ನಡೆಸುತ್ತಿದ್ದರೂ ಮುಮ್ಮೇಳದವರಿಗೂ ಸ್ಪಂದಿಸುತ್ತಿದ್ದರು. ಅದರಿಂದ ವೇದಿಕೆ ಸಕ್ರಿಯವಾಗಿರುತ್ತಿತ್ತು. ಇಂಥ ಗುಣಗಳಿಂದ ಅವರು ಯಕ್ಷಗಾನದಲ್ಲಿ ಹೊಸ ವ್ಯಕ್ತಿತ್ವ ಬೆಳೆಸಿದರು. ಹೊಸ ಬೆಳಕು ಚೆಲ್ಲಿದರು. ಸಮತೋಲನವನ್ನೂ ತಂದಿದ್ದರು” ಎಂದರು.
    ಮಂಡಳಿಯವರಿಂದ ಶ್ರೀ ಮಹಾಗಣಪತಿ ಯಕ್ಷಗಾನ ಪೂರ್ಣಿಮಾ ಯತೀಶ್ ರೈ ನೇತೃತ್ವದಲ್ಲಿ ಮಹಿಳೆಯರಿಂದ ತುಳು ಯಕ್ಷಗಾನ ಪ್ರದರ್ಶನ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರೈ, ಕಾಂಗ್ರೆಸ್ ಮುಖಂಡ ಶಶಿಧರ ಹೆಗ್ಡೆ, ಗಾಯಕ ನಾದಾ ಮಣಿನಾಲ್ಕೂರು, ಹರಿನಾರಾಯಣ ಬೈಪಾಡಿತ್ತಾಯ ಮತ್ತು ಅವಿನಾಶ್ ಬೈಪಾಡಿತ್ತಾಯ ಪಾಲ್ಗೊಂಡಿದ್ದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ನೂತನ ರವೀಂದ್ರಮಂಟಪದಲ್ಲಿ ಡಾ. ಕೋಟ ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ
    Next Article ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆಗೆ ತಂಡಗಳ ಆಹ್ವಾನ | ನವಂಬರ್ 09
    roovari

    Add Comment Cancel Reply


    Related Posts

    ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಡಿಟೋರಿಯಂನಲ್ಲಿ ಅರೆಭಾಷೆ ನಾಟಕ | ನವೆಂಬರ್ 27

    November 24, 2025

    ಉಡುಪಿಯಲ್ಲಿ ‘ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು’ ಕುರಿತ ವಿಚಾರ ಸಂಕಿರಣ

    November 24, 2025

    ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

    November 24, 2025

    ಮಧುರ ತರಂಗದ ವಜ್ರ ಮಹೋತ್ಸವದ ಅಂಗವಾಗಿ ‘ಶ್ರೀ ಸಿದ್ಧಿವೃದ್ಧಿ ಸ್ವರಮಾಧುರ್ಯ’

    November 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.