Subscribe to Updates

    Get the latest creative news from FooBar about art, design and business.

    What's Hot

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ | ಜೂನ್ 28
    Uncategorized

    ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ | ಜೂನ್ 28

    June 27, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶ್ರೀ ಗುರು ಪಂಚಾಕ್ಷರಿ ಪುಟ್ಟರಾಜ ಸಂಗೀತ ಶಾಲೆ ಬೆಂಗಳೂರು, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಮತ್ತು ಗೀತಾ ಸಂಗೀತ ಅಕಾಡೆಮಿ ಟ್ರಸ್ಟ್ (ರಿ) ಇವರ ವತಿಯಿಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ ಕಾರ್ಯಕ್ರಮವನ್ನು ದಿನಾಂಕ 28 ಜೂನ್ 2025 ಶನಿವಾರ ಮದ್ಯಾಹ್ನ 3-00 ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ಗೀತ ಗಾಯನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

    ರಾಯಚೂರಿನ ಸಾಹಿತಿ ಡಾ. ಮಹೇಂದ್ರ ಕುರ್ಡಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಭಾರತೀಯ ಸ್ತ್ರೀ ಶಕ್ತಿ ಸಂಘಟನಾ ಟ್ರಸ್ಟ್ (ರಿ.) ಇದರ ಸಂಸ್ಥಾಪಕ ಅಧ್ಯಕ್ಷರಾದ ಡಾ. ಭಾಗ್ಯ ಸರವನ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಮನಗರ ಜಿಲ್ಲೆಯ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅಂಬರೀಷ್ ಇವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಶ್ರೀಮತಿ ರೇಣುಕಾ ವಾಯ್.ಎ. ಇವರ ‘ಸಾತ್ವಿಕ ಸಿರಿ’ ಕೃತಿಯನ್ನು ಸಾಹಿತಿ ಡಾ. ರಾಮಲಿಂಗೇಶ್ವರಾ ಇವರು ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಭಾವಗೀತೆಗಳ ಪೋಸ್ಟರ್ ಬಿಡುಗಡೆಗೊಳ್ಳಲಿದೆ. ಕುಮಾರಿ ತೇಜಸ್ವಿನಿ ಎಸ್. ಮತ್ತು ತಂಡ ಹಾಗೂ ಶ್ರೀಮತಿ ಎಂ. ಜಯಶ್ರೀ ಮತ್ತು ತಂಡದವರಿಂದ ‘ಭರತನಾಟ್ಯ’, ಶ್ರೀಮತಿ ನೇತ್ರಾವತಿ ಮತ್ತು ತಂಡ ಹಾಗೂ ಕುಮಾರಿ ಋತುಸ್ಪರ್ಶ ಮತ್ತು ತಂಡದವರಿಂದ ‘ಶಾಸ್ತ್ರೀಯ ನೃತ್ಯ ಕಾರ್ಯಕ್ರಮ’, ಡಾ. ಹಂಸಲೇಖ ದೇಶಿ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳಿಂದ ಸುಗಮ ಸಂಗೀತ ಮತ್ತು ಜಾನಪದ ಸಂಗೀತ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಹಾಗೂ ಶ್ರೀ ಶ್ರೀ ಶ್ರೀ ತಾಯಪ್ಪ ಸ್ವಾಮಿಯವರ ಭಜನಾ ಮಂಡಳಿಯವರಿಂದ ‘ಭಜನಾ ಗಾಯನ’ ಪ್ರಸ್ತುತಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಪನ್ಯಾಸಕ, ಸಾಹಿತಿ ಡಾ. ಜಮೀರ್ ಅಹಮದ್ ಇವರಿಗೆ 2025ನೇ ಸಾಲಿನ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’
    Next Article ಶಿಕ್ಷಣ ಶಿಕ್ಷಕ ಹಾಗೂ ಕಲಾವಿದ ಶಿವಣ್ಣ ಎಸ್. ಇವರಿಗೆ ಅವಳಿ ಪ್ರಶಸ್ತಿ
    roovari

    Add Comment Cancel Reply


    Related Posts

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ನಿರಂತರ ರಂಗ ಉತ್ಸವ – 2025’ | ಡಿಸೆಂಬರ್ 17ರಿಂದ 21

    December 15, 2025

    ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ | ಡಿಸೆಂಬರ್ 04

    December 1, 2025

    ಬಂಟ್ವಾಳದಲ್ಲಿ ‘ಸುದರ್ಶನ ವಿಜಯ – ಭಾರ್ಗವ ವಿಜಯ’ ಯಕ್ಷಗಾನ ಬಯಲಾಟ | ಅಕ್ಟೋಬರ್ 19

    October 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.