Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಸಾಹಿತ್ಯ ಮತ್ತು ರಂಗಭೂಮಿ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ
    Theatre

    ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಸಾಹಿತ್ಯ ಮತ್ತು ರಂಗಭೂಮಿ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

    August 13, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಐಚ್ಛಿಕ ಕನ್ನಡ ವಿಭಾಗದ ವತಿಯಿಂದ ‘ಸಾಹಿತ್ಯ ಮತ್ತು ರಂಗಭೂಮಿ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ 2 ಆಗಸ್ಟ್ 2024ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರಂಗಭೂಮಿ ಕಲಾವಿದೆ ಹಾಗೂ ‘ನೀನಾಸಂ’ ಇದರ ಹಿರಿಯ ವಿದ್ಯಾರ್ಥಿನಿಯಾದ ಸಂಗೀತಾ ಭಿಡೆ ಮಾತನಾಡಿ “ಅಭಿನಯ, ರಂಗತಂತ್ರ, ನಾಟಕ ಸಂಗೀತ ಹಾಗೂ ತಂತ್ರಜ್ಞಾನ ಇಂತಹ ವಿವಿಧ ಅಂಶಗಳನ್ನು ಹೊಂದಿರುವುದೇ ರಂಗಭೂಮಿ. ರಂಗಭೂಮಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮೊದಲು ಇದಕ್ಕೆ ರಂಗಭೂಮಿ ಎಂದು ಹೆಸರಿರಲಿಲ್ಲ, ಕಾಲಕ್ರಮೇಣ ಈ ಹೆಸರು ಬಂದಿದೆ. ಒಂದು ಲಕ್ಷ ವರ್ಷದ ಹಿಂದೆ ಮಾನವನ ಉಗಮವಾಗಿದೆ. ಭಾಷೆ ಇರದಿದ್ದ ಕಾಲದಲ್ಲಿ ಮಾನವ ತಾನು ಬೇಟೆಯಾಡಿದ ರೀತಿಯನ್ನು ಮನೋರಂಜನೆಗಾಗಿ ತನ್ನ ಕುಟುಂಬಸ್ಥರ ಜೊತೆ ಅಭಿನಯಿಸುತ್ತ ಹೇಳಿಕೊಳ್ಳಲು ಪ್ರಾರಂಭಿಸಿದ. ಈ ರೀತಿ, ನಟನೆಗೆ ಹಲವಾರು ವರ್ಷಗಳ ಇತಿಹಾಸ ಇದೆ. ಹಿಂದೆ ಗ್ರೀಕ್ ಹಾಗೂ ರೋಮನ್ ನಾಗರಿಕತೆಯ ಸಮಯದಲ್ಲಿ ಅಭಿನಯಕ್ಕೆ ಹೆಚ್ಚು ಪ್ರಾಮುಖ್ಯತೆ ಇತ್ತು. ಇವರ ಸಮಯದಲ್ಲಿ ರಾಜಭವನದಲ್ಲಿ 500 ರಿಂದ 700 ಜನರಿಗೆ ನಾಟಕ ಪ್ರದರ್ಶಿಸಲು ಅವಕಾಶ ನೀಡಲಾಗುತ್ತಿತ್ತು.
    ಭರತನ ನಾಟ್ಯಶಾಸ್ತ್ರವು ನಾಟಕಕ್ಕೆ ಸಂಬಂಧಿಸಿದೆ. ನಾಟ್ಯ (ನಟನೆ) ಮತ್ತು ನೃತ್ಯ ಸೇರಿ ನಾಟಕವಾಯಿತು. ಭಾಸ, ಕಾಳಿದಾಸ, ಶೂದ್ರಕ ಹಾಗೂ ವಿಶಾಖದತ್ತ ಇಂತಹ ಅನೇಕ ಶ್ರೇಷ್ಠ ನಾಟಕಗಾರರು ಉಗಮಗೊಂಡರು. ಇಂತಹ ಮಹಾಕವಿಗಳು ನಾಟಕಕ್ಕೆ ದೊಡ್ಡ ಪ್ರಮಾಣದ ಕೊಡುಗೆ ನೀಡಿದ್ದಾರೆ. ಕ್ರಿ. ಶ. 19ನೇ ಶತಮಾನದ ನಂತರ ಜನಪದ ರಂಗಭೂಮಿ ಸ್ಥಾಪನೆಯಾಯಿತು. ಇದರಲ್ಲಿ ಜನರಿಂದ ಜನರಿಗೆ ಹರಡುವ ಕಥೆಗಳು, ಪುರಾಣಗಳು, ಲೋಕಧರ್ಮದಂತಹ ಕಥೆ ಆರಿಸಿಕೊಳ್ಳುತ್ತಿದ್ದರು. ಇದರ ನಂತರ ನಾಟಕವು ವೃತ್ತಿ (ವೃತ್ತಿ ರಂಗಭೂಮಿ)ಯಾಗಿ ಬದಲಾಯಿತು. ತದನಂತರ ರಂಗತಂತ್ರಗಳು, ದೃಶ್ಯ ಮಾಧ್ಯಮ (ಪರದೆ) ಬಳಕೆ ಆರಂಭವಾಯಿತು. ಕ್ರಮೇಣ ನಾಟಕ ಸಂಘಗಳು ಪ್ರಾರಂಭವಾದವು. ಮೊದಮೊದಲು ನಾಟಕಕ್ಕೆ ಮಹಿಳೆಯರು ಬರುತ್ತಿರಲಿಲ್ಲ. ಹಾಗಾಗಿ ಸ್ತ್ರೀ ವೇಷಗಳನ್ನು ಪುರುಷರೇ ಮಾಡುತ್ತಿದ್ದರು. ‘ನೀನಾಸಂ’ ತರಬೇತಿ ಕೇಂದ್ರದಲ್ಲೂ ಇದೇ ಸ್ಥಿತಿ ಇತ್ತು. ಕಾಲ ಕ್ರಮೇಣ ಮಹಿಳೆಯರು ನಟನೆ ತರಬೇತಿಗೆ ಬರಲು ಆರಂಭಿಸಿದರು.” ಎಂದು ವಿವರಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ. ಎನ್. ವಹಿಸಿದ್ದರು. ವಿದ್ಯಾರ್ಥಿನಿ ಅಮೃತ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಡಾ. ರಾಜಶೇಖರ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ತುಳು ರಂಗಭೂಮಿ ನಟ ಅಶೋಕ್ ಶೆಟ್ಟಿ ಅಂಗ್ಲಮೊಗರು ನಿಧನ
    Next Article ಪಾತಾಳ ವೆಂಕಟರಮಣ ಭಟ್ ಇವರಿಗೆ ‘ಶೇಣಿ ಪ್ರಶಸ್ತಿ’ | ಆಗಸ್ಟ್ 15
    roovari

    Comments are closed.

    Related Posts

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ರಾಷ್ಟ್ರೀಯ ಕಾರ್ಯಾಗಾರ’ | ಮೇ 07ರಿಂದ 09

    May 5, 2025

    ಧಾರವಾಡ ರಂಗಾಯಣದಲ್ಲಿ ‘ಚಿಣ್ಣರಮೇಳ 2025’ ಸಮಾರೋಪ ಸಮಾರಂಭ | ಮೇ 03ರಿಂದ 05

    May 2, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.