Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರೊಂದಿಗೆ ಮಾತುಕತೆ ಸಂವಾದ ಕಾರ್ಯಕ್ರಮ
    Exhibition

    ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರೊಂದಿಗೆ ಮಾತುಕತೆ ಸಂವಾದ ಕಾರ್ಯಕ್ರಮ

    March 31, 2025Updated:April 1, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕ ಹಾಗೂ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರೊಂದಿಗೆ ಮಾತುಕತೆ ಸಂವಾದ ಕಾರ್ಯಕ್ರಮವು ದಿನಾಂಕ 30 ಮಾರ್ಚ್ 2025ರಂದು ಕಿನ್ನಿಗೋಳಿ ಎಳತ್ತೂರು ಗುತ್ತಿನಲ್ಲಿ ನಡೆಯಿತು.

    ಇಂದಿರಾ ಹೆಗ್ಗಡೆಯವರು ಬಾಲ್ಯದ ತಮ್ಮ ನೆನಪುಗಳನ್ನು ಅಕ್ಕರೆಯಿಂದ ಹಂಚಿಕೊಂಡರು. ತಾವು ಸಾಹಿತಿಯಾಗಿ ರೂಪುಗೊಂಡ ಹಾಗೂ ಇತಿಹಾಸ ಸಂಶೋಧಕ ಪ್ರೊ. ಎಂ. ಚಿದಾನಂದ ಮೂರ್ತಿಯವರ ಮಾರ್ಗದರ್ಶನ ಪಡೆದು ಸಂಶೋಧಕಿಯಾಗಿ ಕಾರ್ಯನಿರ್ವಹಿಸಿದ ಕ್ರಮಗಳನ್ನು ತಿಳಿಸಿದರು.

    ಹಿರಿಯ ಸಾಹಿತಿ ಹಾಗೂ ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ ಅವರು ಪ್ರಸಕ್ತ ಸಂದರ್ಭದಲ್ಲಿ ಜನಪದ ಆಚರಣೆಗಳಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಉಲ್ಲೇಖಿಸಿ ಮಾತುಕತೆ ನಡೆಸಿದರು. ಮೂಡಬಿದ್ರಿ ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಡಾ. ಸುಧಾರಾಣಿ ಮಾತನಾಡಿ “ಸ್ತ್ರೀ ಪರ ಚಿಂತನೆ ಹಾಗೂ ಜನಪರ ನಿಲುವು ಮೂಲಕ ಜಾನಪದ ಸಂಸ್ಕೃತಿಯ ಆಳವಾದ ಅಧ್ಯಯನದ ಮೂಲಕ ಸಂಶೋಧನ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಸಾಧನೆಯನ್ನು ಇಂದಿರಾ ಹೆಗ್ಗಡೆ ಮಾಡಿದ್ದಾರೆ” ಎಂದರು.

    ಎಸ್.ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ “ಸಾಹಿತಿಯಾಗಿ ರೂಪುಗೊಂಡ ಇಂದಿರಾ ಹೆಗ್ಗಡೆ ಸಂಶೋಧಕಿಯಾಗಿ ರೂಪುಗೊಂಡ ಸತ್ಯಗಳ ಹುಡುಕಾಟ ಹಾಗೂ ಹೊಸ ಹೊಳಹು ಮೂಲಕ ತುಳುನಾಡಿನಲ್ಲಿ ಹೊಸ ಹೊಸ ವಿಚಾರಗಳ ಅನ್ವೇಷಣೆಗೆ ಹಾದಿ ಸೃಷ್ಟಿಸಿದ್ದಾರೆ” ಎಂದರು.

    ಗುತ್ತಿನಾರ್ ಬಾಲಕೃಷ್ಣ ಯಾನೆ ಶಂಕರ ರೈ ಹಾಗೂ ಕರಾವಳಿ ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕದ ವತಿಯಿಂದ ಇಂದಿರಾ ಹೆಗ್ಗಡೆ ಅವರನ್ನು ಸಮ್ಮಾನಿಸಲಾಯಿತು. ಸಂತೋಷ್ ಹೆಗ್ಡೆ ಸ್ವಾಗತಿಸಿ, ಲಾವಣ್ಯ ಶೆಟ್ಟಿ ಕವನಗಳನ್ನು ಹಾಡಿದರು. ಎಸ್.ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟ್ ಕೋಶಾಧಿಕಾರಿ ಜ್ಯೋತಿ ಚೇಲ್ಯಾರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಅಧ್ಯಕ್ಷ ಮಿಥುನ್ ಉಡುಪ ಕಾರ್ಯಕ್ರಮ ನಿರ್ವಹಿಸಿದರು. ಬೆನೆಟ್ ಅಮ್ಮನ್ನ, ದೇವಿಕಾ ನಾಗೇಶ್, ರೂಪಕಲ ಆಳ್ವ, ಸರಿತಾ ಹೆಗ್ಡೆ, ಸುಜಾತ, ಉದಯ ಕುಮಾರ್ ಹಬ್ಬು ಮೊದಲಾದವರು ಸಂವಾದದಲ್ಲಿ ಪಾಲ್ಗೊಂಡರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬ್ರಹ್ಮಾವರದಲ್ಲಿ ‘ಮಂದಾರ ರಂಗೋತ್ಸವ 2025’ | ಏಪ್ರಿಲ್ 04ರಿಂದ 06
    Next Article ಉಪ್ಪಿನಂಗಡಿಯಲ್ಲಿ ‘ಗಯಾಪದ ರಂಗ ಸಂಭ್ರಮ’
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.