Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಪ್ರೆಸ್ಟೀಜ್ ಪ್ರಿಮ್ ರೋಸ್ ಹಿಲ್ಸ್ ನಲ್ಲಿ ಯಕ್ಷಗಾನ ಪ್ರದರ್ಶನ | ನವೆಂಬರ್ 22

    November 21, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ | ನವೆಂಬರ್ 23ರಿಂದ 29

    November 21, 2025

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ

    November 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರತಿಭಾ ರಾವ್ ಇವರ ಕೃತಿಗೆ ಎಂ.ಕೆ. ಇಂದಿರಾ ಪುಸ್ತಕ ಬಹುಮಾನ
    Awards

    ಪ್ರತಿಭಾ ರಾವ್ ಇವರ ಕೃತಿಗೆ ಎಂ.ಕೆ. ಇಂದಿರಾ ಪುಸ್ತಕ ಬಹುಮಾನ

    November 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬೈ : ಕರ್ನಾಟಕ ಸಂಘ ಶಿವಮೊಗ್ಗ ಕೊಡಮಾಡುವ 2024ರ ಸಾಲಿನ ಎಂ.ಕೆ. ಇಂದಿರಾ ವಾರ್ಷಿಕ ಪುಸ್ತಕ ಬಹುಮಾನಕ್ಕೆ ಮುಂಬೈ ವಿಶ್ವವಿದ್ಯಾಲಯದ ಸಂಶೋಧನ ವಿದ್ಯಾರ್ಥಿ ಪ್ರತಿಭಾ ರಾವ್ ಇವರು ಆಯ್ಕೆಯಾಗಿದ್ದಾರೆ.

    ಪ್ರತಿಭಾ ರಾವ್ ಇವರು ರಚಿಸಿರುವ ಡಾ. ಸುಧಾಮೂರ್ತಿಯವರ ಸಾಹಿತ್ಯ ಸಾಧನೆಯ ಹಿನ್ನೆಲೆಯ ಕೃತಿ ‘ಜೀವನ್ಮುಖಿ’ ಈ ಸಾಲಿನ ಎಂ.ಕೆ. ಇಂದಿರಾ ಪುರಸ್ಕಾರಕ್ಕೆ ಭಾಜನವಾಗಿದೆ. ಇದನ್ನು ಮುಂಬೈ ವಿ.ವಿ. ಕನ್ನಡ ವಿಭಾಗ ಪ್ರಕಟಿಸಿದೆ. ಮೂಲತಃ ಮಂಗಳೂರಿನವರಾದ ಪ್ರತಿಭಾ ರಾವ್ ಇವರು ಮುಂಬೈ ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿಯನ್ನು ಎಂ.ಬಿ. ಕುಕ್ಯಾನ್ ಚಿನ್ನದ ಪದಕದೊಂದಿಗೆ ಪಡೆದಿರುತ್ತಾರೆ. ನೂರರ ಸಂಭ್ರಮವನ್ನು ಆಚರಿಸುತ್ತಿರುವ ಮುಂಬೈಯ ಪ್ರತಿಷ್ಠಿತ ಸಂಸ್ಥೆಯಾದ ಬಿ.ಎಸ್.ಕೆ.ಬಿ. ಅಸೋಸಿಯೇಷನ್ ಕುರಿತ ಇವರ ಎರಡು ಕೃತಿಗಳಾದ ‘ಶತಮಾನದ ಯಾನ’ ಹಾಗೂ ‘ಸೆಂಟಿನಿಯಲ್ ಒಡಿಸ್ಸಿ’ ಈಗಾಗಲೇ ಪ್ರಕಟಗೊಂಡಿವೆ. ‘ಶೋಧ ಸಿರಿ’ ಶಿಷ್ಯವೇತನ ಪುರಸ್ಕಾರವನ್ನು ಪಡೆದಿರುವ ಇವರು ಪ್ರಸ್ತುತ ಪ್ರೊ. ಜಿ.ಎನ್. ಉಪಾಧ್ಯ ಇವರ ಮಾರ್ಗದರ್ಶನದಲ್ಲಿ ‘ಶಿಲಾಹಾರರು – ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಬಗೆಗೆ ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಉತ್ತಮ ಚಿತ್ರ ಕಲಾವಿದರಾಗಿರುವ ಪ್ರತಿಭಾರವರು ಕನ್ನಡವಲ್ಲದೆ ಸಂಖ್ಯಾಶಾಸ್ತ್ರದಲ್ಲೂ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleತೀರ್ಥಹಳ್ಳಿಯಲ್ಲಿ ದಾಸವರೇಣ್ಯ ಪುರಂದರದಾಸರ ‘ಕೀರ್ತನೋತ್ಸವ’ ಕಾರ್ಯಕ್ರಮ | ನವೆಂಬರ್ 04
    Next Article ಡಾ. ಇಂದಿರಾ ಹೆಗ್ಗೆಡೆ ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ನವೆಂಬರ್ 05
    roovari

    Add Comment Cancel Reply


    Related Posts

    ಬೆಂಗಳೂರಿನ ಪ್ರೆಸ್ಟೀಜ್ ಪ್ರಿಮ್ ರೋಸ್ ಹಿಲ್ಸ್ ನಲ್ಲಿ ಯಕ್ಷಗಾನ ಪ್ರದರ್ಶನ | ನವೆಂಬರ್ 22

    November 21, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ | ನವೆಂಬರ್ 23ರಿಂದ 29

    November 21, 2025

    ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಿಷಿಕಾ ದೇವಾಡಿಗ ಆಯ್ಕೆ

    November 21, 2025

    ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ‘ಮನರಂಜನೆಯ ಮಹಾ ಸಂಗಮ’ | ನವೆಂಬರ್ 22

    November 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.