Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿ. ವಿ. ಯ ಯಕ್ಷಪಯಣ ಸರಣಿಯಲ್ಲಿ ಮಾಂಬಾಡಿ ಸುಬ್ರಹ್ಮಣ್ಯ ಭಟ್   
    Yakshagana

    ಮಂಗಳೂರು ವಿ. ವಿ. ಯ ಯಕ್ಷಪಯಣ ಸರಣಿಯಲ್ಲಿ ಮಾಂಬಾಡಿ ಸುಬ್ರಹ್ಮಣ್ಯ ಭಟ್   

    August 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕೊಣಾಜೆ: ಮಂಗಳೂರು ವಿ. ವಿ.ಯಲ್ಲಿನ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಕಲಾವಿದರ ಯಕ್ಷಪಯಣದ ಸ್ವಗತ ಯಕ್ಷಾಯಣ- ದಾಖಲೀಕರಣ ಸರಣಿಯ 5ರ ಕಾರ್ಯಕ್ರಮವು 30 ಜುಲೈ 2024ರ ಮಂಗಳವಾರದಂದು ನಡೆಯಿತು.
    ಕಾರ್ಯಕ್ರಮದಲ್ಲಿ ತಮ್ಮ ಯಕ್ಷ ಪಯಣದ ಅನುಭವ ಕಥನವನ್ನು ಹಂಚಿಕೊಂಡ ಯಕ್ಷಗಾನ ರಂಗದ ಹಿರಿಯ ಹಿಮ್ಮೇಳ ಕಲಾವಿದರು ಹಾಗೂ ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ “ಯಕ್ಷಗಾನ ಸಂಪ್ರದಾಯ ಬದ್ದವಾಗಿ ಮುನ್ನಡೆಯಬೇಕಾದರೆ ಯಕ್ಷಗಾನ ಪರಂಪರೆಯ ಜ್ಞಾನ, ಅರಿವನ್ನು ಸಮರ್ಥವಾಗಿ ಮುಂದಿನ ತಲೆಮಾರಿಗೆ ತಲುಪಿಸುವವರು ಹಾಗೂ ವಿವರಿಸುವವರು ಮುಖ್ಯವಾಗುತ್ತಾರೆ. ಯಕ್ಷಗಾನದಲ್ಲಿ ಅನುಭವದಿಂದಲೇ ಬಹುತೇಕ ಶಿಕ್ಷಣ ಸಿಗುತ್ತದೆ. ನಮ್ಮಲ್ಲಿನ ಬಹುತೇಕ ಕಲಾವಿದರು ರಂಗದಲ್ಲಿ ಮತ್ತು ಹಿರಿಯ ಕಲಾವಿದರ ಮಾರ್ಗದರ್ಶನದಿಂದಲೇ ರೂಪುಗೊಂಡವರು. ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರವು ಈ ನಿಟ್ಟಿನಲ್ಲಿ ಹಿರಿಯ ಕಲಾವಿದರ ಅನುಭವ ಕಥನವನ್ನು ದಾಖಲಿಸುವ ಕಾರ್ಯ ಶ್ಲಾಘನೀಯ ಹಾಗೂ ಇದರಿಂದ ಮುಂದಿನ ಯುವ ಪೀಳಿಗೆಗೆ ಅನುಕೂಲವಾಗಲಿದೆ. ಹಿಮ್ಮೇಳ ಕಲಿಯುವವರಿಗೆ ಯಕ್ಷಗಾನದ ಆಸಕ್ತಿಯ ಜೊತೆಗೆ ಹಿಮ್ಮೇಳ, ಮುಮ್ಮೇಳ ಹಾಗೂ ಯಕ್ಷಗಾನದ ಸೂಕ್ಷ್ಮತೆಗಳ ಅರಿವು ಅಗತ್ಯ. ಹಿಂದಿನ ಕಾಲದಲ್ಲಿ ಚೆಂಡೆ ಮದ್ದಳೆಗೆ ವಿಶೇಷ ತರಗತಿಗಳು ಇರಲಿಲ್ಲ. ಯಕ್ಷಗಾನ ನೋಡಿಕೊಂಡು ಮತ್ತು ಹಿರಿಯರಲ್ಲಿ ಕೇಳಿಕೊಂಡು ಕಲಿತವವರೇ ಹೆಚ್ಚು. ಇಂದು ಯಕ್ಷಗಾನ ಹಿಮ್ಮೇಳ ಅಭ್ಯಾಸ ಮಾಡಲು ಅನೇಕ ಅವಕಾಶಗಳಿವೆ.” ಎಂದರು.
    ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಧನಂಜಯ ಕುಂಬ್ಳೆ ಮಾತನಾಡಿ “ಮಾಂಬಾಡಿಯವರು ಹಿಮ್ಮೇಳ ಕಲಾವಿದರಾಗಿ, ಮೇಳದ ವ್ಯವಸಾಯಿಯಾಗಿ ಹಾಗೂ ಪರಂಪರಾನಿಷ್ಠ ಯಕ್ಷಗುರುಗಳಾಗಿ ಅಪಾರ ಅನುಭವ ಹೊಂದಿದವರು. ಕಟೀಲು, ಧರ್ಮಸ್ಥಳ, ಕೂಡ್ಲು, ಕರ್ನಾಟಕ, ಕದ್ರಿ ಮೊದಲಾದ ಮೇಳಗಳಲ್ಲಿ 20 ವರ್ಷಗಳ ಕಾಲ ತಿರುಗಾಟ ನಡೆಸಿದ ಇವರು ತೆಂಕುತಿಟ್ಟು ಯಕ್ಷಗಾನದ ಗುರುಗಳಾಗಿ ಮೂರು ಸಾವಿರಕ್ಕೂ ಅಧಿಕ ಶಿಷ್ಯಬಳಗವನ್ನು ರೂಪಿಸಿದ್ದಾರೆ. ಮಾಂಬಾಡಿ ಮನೆತನ ಯಕ್ಷಗಾನಕ್ಕೆ ಕೊಟ್ಟ ಕೊಡುಗೆ ಅಪಾರ.” ಎಂದರು.
    ಇದೇ ಸಂದರ್ಭದಲ್ಲಿ ಯಕ್ಷಪಯಣದ ಅನುಭವವನ್ನು ಹಂಚಿಕೊಂಡ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಗೌರವಿಸಲಾಯಿತು.
    ಯಕ್ಷಗಾನ ಅಧ್ಯಯನ ಕೇಂದ್ರದ ನಿಕಟಪೂರ್ವ ನಿರ್ದೇಶಕರಾದ ಪ್ರೊ. ಶ್ರೀಪತಿ ಕಲ್ಲೂರಾಯ, ಯಕ್ಷಗಾನ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿ ಡಾ. ಸತೀಶ್ ಕೊಣಾಜೆ, ಯಕ್ಷಗಾನ ಕಲಾವಿದ ಪೂರ್ಣೆಶ್ ಆಚಾರ್ಯ, ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಚಂದ್ರಶೇಖರ್ ಎಂ. ಬಿ., ಪ್ರಸಾದ್, ಕಿರಣ್, ಯತೀಶ್ ಕುಡುಪು, ದಿಲೀಪ್, ಯಕ್ಷಮಂಗಳ ವಿದ್ಯಾರ್ಥಿ ಅಭಿರಾಮ್ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮಿಲನದ ಸಮಾರೋಪ ಸಮಾರಂಭ
    Next Article ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ಹಳ್ಳಾಡಿ ಜಯರಾಮ ಶೆಟ್ಟಿ ಆಯ್ಕೆ | ಆಗಸ್ಟ್ 10
    roovari

    Comments are closed.

    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    ಪರಿಚಯ ಲೇಖನ | ‘ಬೆಳೆಯುವ ಯಕ್ಷಸಿರಿ’ ಸಚಿನ್ ಶೆಟ್ಟಿ ನಾಗರಕೊಡಿಗೆ

    May 6, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.