Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಹೊಟೇಲ್ ವುಡ್ ಲ್ಯಾಂಡ್ಸ್ ನಲ್ಲಿ ಉಪನ್ಯಾಸ ಕಾರ್ಯಕ್ರಮ | ನವೆಂಬರ್ 11

    November 10, 2025

    ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ‘ಮಲೆಯಾಳ ಮಿತ್ರ’ ಪ್ರಶಸ್ತಿ ಪ್ರದಾನ

    November 10, 2025

    ಗಿಳಿವಿಂಡು ಇದರ ವತಿಯಿಂದ ನಾಲ್ಕನೇ ಮಹಾ ಸಮಾವೇಶ

    November 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ಕಾಲೇಜಿನಲ್ಲಿ ಮಹಾಭಾರತ ಕಾರ್ಯಾಗಾರ ಮತ್ತು ಪ್ರಶಸ್ತಿ ಪ್ರದಾನ
    Literature

    ಆಳ್ವಾಸ್ ಕಾಲೇಜಿನಲ್ಲಿ ಮಹಾಭಾರತ ಕಾರ್ಯಾಗಾರ ಮತ್ತು ಪ್ರಶಸ್ತಿ ಪ್ರದಾನ

    November 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಪ್ರಜ್ಞಾಜಿಜ್ಞಾಸಾವೇದಿಹಿ ವೇದಿಕೆಯ ಸಹಯೋಗದಲ್ಲಿ ದಿನಾಂಕ 08 ನವೆಂಬರ್ 2025ರಂದು ಮಹಾಭಾರತ ಕಾರ್ಯಾಗಾರ ಹಾಗೂ ರಾಮಾಯಣ-ಮಹಾಭಾರತ ಪರೀಕ್ಷೆಗಳ ಪ್ರಮಾಣಪತ್ರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಯಿತು.

    ಖ್ಯಾತ ಸಂಶೋಧಕ ಪ್ರೊ. ಗೋಪಾಲಕೃಷ್ಣ ನಾರಾಯಣ ಭಟ್ ಮಹಾಭಾರತದ ಆಳವಾದ ಅಂಶಗಳನ್ನು ವಿಶ್ಲೇಷಿಸಿ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. “ಮಹಾಭಾರತವು ಕೇವಲ ಪೌರಾಣಿಕ ಕಾವ್ಯವಲ್ಲ, ಅದು ಮಾನವ ಜೀವನದ ಮಾರ್ಗದರ್ಶಕ ಗ್ರಂಥವಾಗಿದ್ದು, ಆತ್ಮಜ್ಞಾನ, ಧರ್ಮಾಚರಣೆ ಮತ್ತು ಸೌಹಾರ್ದಯುತ ಸಹಜೀವನದ ಪಾಠಗಳನ್ನು ನೀಡುತ್ತದೆ. ರಾಮಾಯಣ ಮತ್ತು ಮಹಾಭಾರತದಂತಹ ಪವಿತ್ರ ಗ್ರಂಥಗಳು ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವಂತ ಪಾಠಶಾಲೆಗಳು” ಎಂದು ಉಲ್ಲೇಖಿಸಿದರು.

    ಆಳ್ವಾಸ್ ಪ್ರೌಢಶಾಲೆಯ ಒಟ್ಟು 143 ವಿದ್ಯಾರ್ಥಿಗಳಿಗೆ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ನಡೆಸಿ, ಎಲ್ಲರೂ ಉತ್ತೀರ್ಣರಾಗಿ, 100% ಫಲಿತಾಂಶ ದಾಖಲಾಯಿತು. ಆಳ್ವಾಸ್ ಶಾಲೆಯ ಆಡಳಿತಾಧಿಕಾರಿ ಪ್ರೀತಂ ಕುಂದರ್ ದೀಪ ಪ್ರಜ್ವಲನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ. ನಾರಾಯಣ ಶೆಟ್ಟಿ, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಭಟ್ ಗಾಳಿಮನೆ ಹಾಗೂ ಪ್ರೌಢಶಾಲೆ ಮತ್ತು ಪದವಿ ವಿಭಾಗದ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರಾವ್ಯ ಹಾಗೂ ಸ್ಪರ್ಷಾ ಕಾರ್ಯಕ್ರಮ ನಿರೂಪಿಸಿ, ಆಶ್ವಿಜಾ ವಂದಿಸಿ, ವಂಶಿಕಾ ಮತ್ತು ಸ್ವಾಗತಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಇಸ್ರೇಲ್‌ನಲ್ಲಿ ವರ್ಣಮಯ ಪ್ರದರ್ಶನಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಿದ ಯಕ್ಷಗಾನ ಪ್ರದರ್ಶನ
    Next Article ಗಿಳಿವಿಂಡು ಇದರ ವತಿಯಿಂದ ನಾಲ್ಕನೇ ಮಹಾ ಸಮಾವೇಶ
    roovari

    Add Comment Cancel Reply


    Related Posts

    ಮಂಗಳೂರಿನ ಹೊಟೇಲ್ ವುಡ್ ಲ್ಯಾಂಡ್ಸ್ ನಲ್ಲಿ ಉಪನ್ಯಾಸ ಕಾರ್ಯಕ್ರಮ | ನವೆಂಬರ್ 11

    November 10, 2025

    ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ‘ಮಲೆಯಾಳ ಮಿತ್ರ’ ಪ್ರಶಸ್ತಿ ಪ್ರದಾನ

    November 10, 2025

    ಗಿಳಿವಿಂಡು ಇದರ ವತಿಯಿಂದ ನಾಲ್ಕನೇ ಮಹಾ ಸಮಾವೇಶ

    November 10, 2025

    ಇಸ್ರೇಲ್‌ನಲ್ಲಿ ವರ್ಣಮಯ ಪ್ರದರ್ಶನಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಿದ ಯಕ್ಷಗಾನ ಪ್ರದರ್ಶನ

    November 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.