Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪರಕ್ಕಿಲದಲ್ಲಿ ಡಾ. ಯು. ಮಹೇಶ್ವರಿ ಬದುಕು ಬರಹದ ‘ಸಾಹಿತ್ಯ ಸಲ್ಲಾಪ’
    Literature

    ಪರಕ್ಕಿಲದಲ್ಲಿ ಡಾ. ಯು. ಮಹೇಶ್ವರಿ ಬದುಕು ಬರಹದ ‘ಸಾಹಿತ್ಯ ಸಲ್ಲಾಪ’

    November 27, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ವಿಶ್ರಾಂತ ಪ್ರಾಧ್ಯಾಪಕಿ, ಸಾಹಿತಿ ಡಾ. ಯು. ಮಹೇಶ್ವರಿಯವರ ಬದುಕು ಬರಹದ ‘ಸಾಹಿತ್ಯ ಸಲ್ಲಾಪ’ ಕಾರ್ಯಕ್ರಮ ಪರಕ್ಕಿಲದ‌ ಶ್ರೀಮಹಾದೇವ ಕ್ಷೇತ್ರದ ನಟರಾಜ ಮಂಟಪದಲ್ಲಿ ದಿನಾಂಕ 24 ನವೆಂಬರ್ 2024ರ ಭಾನುವಾರದಂದು ಜರಗಿತು.

    ಸಮತಾ ಸಾಹಿತ್ಯ ವೇದಿಕೆ ಬದಿಯಡ್ಕ ಹಾಗೂ ತರುಣ ಕಲಾವೃಂದ ಉಳಿಯ ಆಯೋಜಿಸಿದ ಈ ಕಾರ್ಯಕ್ರಮವನ್ನು ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಆಸ್ರ ಉದ್ಘಾಟಿಸಿದರು. ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಕವಿ, ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಡಾ. ರಮಾನಂದ ಬನಾರಿ, ಕಾಸರಗೋಡು ಚಿನ್ನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಳಿಕ ಡಾ. ಮೀನಾಕ್ಷಿ ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಮೀಕ್ಷೆಯಲ್ಲಿ ಕಾವ್ಯದ ಬಗ್ಗೆ ಸೌಮ್ಯ ಪ್ರಸಾದ್, ಅಂಕಣ ಹಾಗೂ ಲೇಖನ ಬರಹಗಳ ಬಗ್ಗೆ ಕಾರ್ತಿಕ್ ಪಡ್ರೆ, ವಿಮರ್ಶೆ ಹಾಗೂ ಸಂಶೋಧನಾ ಲೇಖನಗಳ ಬಗ್ಗೆ ಡಾ. ಸುಭಾಷ್ ಪಟ್ಟಾಜೆ ವಿಷಯ ಮಂಡಿಸಿದರು.

    ಬಳಿಕ ನಡೆದ ಮಹೇಶ್ವರಿ ಅವರೊಡನೆ ಸಂವಾದ ಕಾರ್ಯಕ್ರಮದಲ್ಲಿ ಕವಿಗಳಾದ ಟಿ.ಎ.ಎನ್. ಖಂಡಿಗೆ, ಬಾಲಕೃಷ್ಣ ಬೇರಿಕೆ, ವಿಕ್ರಂ‌ ಕಾಂತಿಕೆರೆ ಪಾಲ್ಗೊಂಡರು. ವಿಶಾಲಾಕ್ಷ ಪುತ್ರಕಳ ಸಮನ್ವಯಕಾರರಾಗಿದ್ದರು. ಹಿರಿಯ ಕವಿ ಶ್ರೀಕೃಷ್ಣಯ್ಯ ಅನಂತಪುರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕವಿಗೋಷ್ಠಿಯಲ್ಲಿ ಹಲವು ಕವಿಗಳು ಸ್ವರಚಿತ ಕವನ‌ ವಾಚಿಸಿದರು.

    ಗೌರವಾಭಿನಂದನೆ ಕಾರ್ಯಕ್ರಮದಲ್ಲಿ ಡಾ. ಯು. ಮಹೇಶ್ವರಿ ಅವರನ್ನು ಶಿಷ್ಯಂದಿರು, ಹಿತೈಷಿಗಳು ಹಾಗೂ ಒಡನಾಡಿಗಳ ಪರವಾಗಿ ಅಭಿನಂದಿಸಲಾಯಿತು. ಕ. ಸಾ. ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಮಧುರಕಾನನ ಗೋಪಾಲಕೃಷ್ಣ ಭಟ್ ಅಭಿನಂದನಾ ಭಾಷಣಗೈದು, ಡಾ. ವೇದಾವತಿ ಹಾಗೂ ಲಕ್ಷ್ಮೀ ಕೆ. ಗುರು ನಮನ ಸಲ್ಲಿಸಿದರು. ಟಿ. ಶಂಕರ ನಾರಾಯಣ ಭಟ್, ಸುರೇಶ್ ಯು. ಆರ್. ಸಭೆಯಲ್ಲಿ ಉಪಸ್ಥಿತರಿದ್ದರು. ಉದಯ ಕುಮಾರ್ ಮುಂಡೋಡು ಸ್ವಾಗತಿಸಿ, ದಿವ್ಯಾ ಗಟ್ಟಿ ಉಳಿಯ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಾಂಗಣದಿಂದ ಎ.ಕೆ. ನಾರಾಯಣ ಶೆಟ್ಟಿ, ಮಹಾಬಲ ಶೆಟ್ಟಿ ಸಂಸ್ಮರಣೆ – ವಕ್ವಾಡಿ ಸಮ್ಮಾನ
    Next Article ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬರಹಗಾರ ಗೊ.ರು. ಚನ್ನಬಸಪ್ಪನವರ ಆಯ್ಕೆ
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    ಶಿವಮೊಗ್ಗದ ಕ.ಸಾ.ಪ. ಜಿಲ್ಲಾ ಸಮಿತಿ ವತಿಯಿಂದ ‘ಶ್ರೀ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ’ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.