ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಇದರ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 26 ಮಾರ್ಚ್ 2026ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಇದರ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ರಂಗ ಸಾಧಕರಾದ ರಂಗ ನಟಿ ಗೀತಾ ಸುರತ್ಕಲ್ ಮಂಗಳೂರು, ರಂಗ ನಟ ಶ್ರೀಪತಿ ಮಂಜನಬೈಲು ಬೆಂಗಳೂರು, ರಂಗ ಸಂಘಟನೆ ಎಸ್. ನಿತ್ಯಾನಂದ ಪೈ, ಕಾರ್ಕಳ, ರಂಗ ನಟ ಅವಿನಾಶ್ ಕಾಮತ್ ಮುಂಬೈ, ರಂಗ ನಿರ್ದೇಶನ ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ ಇವರುಗಳಿಗೆ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು. ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಇವರ ಸಭಾಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನವೀನ್ ಕುಮಾರ್ ಮತ್ತು ಸುಗುಣ ಸುವರ್ಣ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

