Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ಆಯೋಜಿಸುವ ‘ಮಂಚಿ ನಾಟಕೋತ್ಸವ’
    Drama

    ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ಆಯೋಜಿಸುವ ‘ಮಂಚಿ ನಾಟಕೋತ್ಸವ’

    May 14, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ.) ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ ರಂಗ ಭೂಮಿಕಾ -2023 ದಿನಾಂಕ 20-05-2023ರಿಂದ 22-05-2023ರವರೆಗೆ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ, ಕುಕ್ಕಾಜೆ ಇಲ್ಲಿ ನಡೆಯಲಿದೆ.

    20-05-2023 ಶನಿವಾರ
    ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಬ್ಯಾಂಕ್ ನ ನಿವೃತ್ತ ಎ.ಜಿ.ಎಂ. ಶ್ರೀ ಶ್ರೀನಿವಾಸ ದೇಶಪಾಂಡೆ ಮಾಡಲಿದ್ದು, ಅರೆಹೊಳೆ ಪ್ರತಿಷ್ಠಾನದ ರಂಗ ಸಂಘಟಕರಾದ ಶ್ರೀ ಅರೆಹೊಳೆ ಸದಾಶಿವ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಶ್ರೀ ರಾಜೇಶ್ ಮತ್ತು ಲಯನ್ಸ್ ಜಿಲ್ಲಾ ಸಂಯೋಜಕರು ಲ| ಶ್ರೀ ಮನೋರಂಜನ್ ಕರೈರವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ‘ಕಲಾಭಿ ಥಿಯೇಟರ್’ ಮಂಗಳೂರು ಪ್ರಸ್ತುತಪಡಿಸುವ ‘ಮೋಗ್ಲಿ’ ಕನ್ನಡ ನಾಟಕ ಪ್ರದರ್ಶನಗೊಳ್ಳಲಿದೆ. ರುಡ್ಯಾರ್ಡ್ ಕಿಪ್ಲಿಂಗ್ ಮೂಲ ಕೃತಿ ಆಧಾರಿತ ಈ ನಾಟಕದ ರಂಗರೂಪ ಮತ್ತು ನಿರ್ದೇಶನ ಭುವನ ಮಣಿಪಾಲ ಅವರದ್ದು.

    21-05-2023 ಆದಿತ್ಯವಾರ
    ಆಸ್ತಿತ್ವ (ರಿ.) ಮಂಗಳೂರು ಪ್ರಸ್ತುತಪಡಿಸುವ ಕೊಂಕಣಿ ನಾಟಕ ‘ಜುಗಾರಿ’. ಎಂ.ಪಿ. ರಾಜೇಶ್ ರಚಿಸಿದ ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಅರುಣ್ ಲಾಲ್ ಮಾಡಿದ್ದು, ನಿರ್ವಹಣೆ ಕ್ರಿಸ್ಟಿ ನೀನಾಸಂ ಅವರದ್ದು.

    22-05-2023 ಸೋಮವಾರ
    ‘ಮಂಚಿ ನಾಟಕೋತ್ಸವ’ದ ಸಮಾರೋಪ ಸಮಾರಂಭ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಕಟೀಲು ಯಕ್ಷಗಾನ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಪತ್ತುಮುಡಿ ವೆಂಕಟೇಶ ಪ್ರತಾಪ್ ರವರು ವಹಿಸಲಿರುವರು. ಅತಿಥಿಗಳಾಗಿ ಲ| ಶ್ರೀ ಜೆಪ್ರಿ ಲೂವಿಸ್ ಕುಕ್ಕಾಜೆ ಹಾಗೂ ಮಂಚಿ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಮಂಚಿ ಇದರ ಅಧ್ಯಕ್ಷರಾದ ಶ್ರೀ ಉಮ್ಮರ್ ಬಿ.ಯವರು ಭಾಗವಹಿಸಲಿದ್ದಾರೆ. ಮೂಲ ಬಿ.ಆರ್. ವೆಂಕಟರಮಣ ಐತಾಳ್ ರವರ ‘ಮಕ್ಕಳ ರಾಮಾಯಣ’ ಕುಂದಾಪ್ರ ಕನ್ನಡ ನಾಟಕವು ಸುರಭಿ (ರಿ.) ಬೈಂದೂರು ಇವರಿಂದ ಪ್ರಸ್ತುತಗೊಳ್ಳಲಿದೆ. ಈ ನಾಟಕವನ್ನು ಗಣೇಶ್ ಮಂದಾರ್ತಿಯವರು ಕುಂದಾಪ್ರ ಕನ್ನಡಕ್ಕೆ ಅನುವಾದಿಸಿ, ವಿನ್ಯಾಸ ಹಾಗೂ ನಿರ್ದೇಶಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ‘ಅಮರ ಸುಳ್ಯದ ಕ್ರಾಂತಿ 1837’ ನಾಟಕ ಕೃತಿ ಬಿಡುಗಡೆ – ಸುಳ್ಯ ತಾಲೂಕು ಘಟಕ
    Next Article ಪರಿಚಯ ಲೇಖನ | ‘ಯಕ್ಷೋತ್ಸಾಹಿ ಪ್ರತಿಭೆ’ ಟಿ.ಎಸ್.ಶ್ರೀವತ್ಸ ಭಟ್
    roovari

    Add Comment Cancel Reply


    Related Posts

    ನಾಟಕ ವಿಮರ್ಶೆ | ಕಣ್ಮನ ಸೆಳೆಯುವ ‘ಮಹಾಯುಗ’

    February 18, 2026

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026

    ಕೊಡಗು ಕ.ಸಾ.ಪ.ದಿಂದ ಮುಕ್ತ ನಾಟಕ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 17, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.