Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆಯಲ್ಲಿ ಯಕ್ಷ-ಗಾನ-ನಮನ

    June 27, 2025

    ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್. ಆರ್. ಹೆಗ್ಡೆ ಜಂಟಿ ಹೆಸರಿನ ಪ್ರಶಸ್ತಿಗೆ ಇತಿಹಾಸ ತಜ್ಞೆ ಡಾ. ಮಾಲತಿ ಕೃಷ್ಣಮೂರ್ತಿ ಆಯ್ಕೆ

    June 27, 2025

    ಧಾರವಾಡದ ರಂಗಾಯಣದಲ್ಲಿ ಯಶಸ್ವಿಯಾಗಿ ನಡೆದ ‘ಗುರು ಗುಣಗಾನ’

    June 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ಆಯೋಜಿಸುವ ‘ಮಂಚಿ ನಾಟಕೋತ್ಸವ’ | ಮೇ 17ರಿಂದ 19
    Drama

    ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ಆಯೋಜಿಸುವ ‘ಮಂಚಿ ನಾಟಕೋತ್ಸವ’ | ಮೇ 17ರಿಂದ 19

    May 14, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ.) ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ ರಂಗ ಭೂಮಿಕಾ -2024 ದಿನಾಂಕ 17-05-2024ರಿಂದ 19-05-2024ರವರೆಗೆ ಕುಕ್ಕಾಜೆಯ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ.

    ದಿನಾಂಕ 17-05-2024ರಂದು ಸಂಜೆ 6-00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅಂತರಾಷ್ಟ್ರೀಯ ಜಾದೂಗಾರರಾದ ಪ್ರೊ. ಶಂಕರ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ನಾಟಕೋತ್ಸವವನ್ನು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಧ್ಯಕ್ಷರಾದ ಶ್ರೀ ವಿಶ್ವನಾಥ ಶೆಣೈ ಉಡುಪಿ ಇವರು ಉದ್ಘಾಟಿಸಲಿದ್ದು, ಕ್ಯಾಂಪ್ಕೋ ಲಿ. ಇದರ ನಿರ್ದೇಶಕರಾದ ಡಾ. ಜಯಪ್ರಕಾಶ್ ನಾರಾಯಣ ಟಿ.ಕೆ. ಮತ್ತು ಶಿವಮೊಗ್ಗ ರಂಗಾಯಣದ ಮಾಜಿ ನಿರ್ದೇಶಕರಾದ ಶ್ರೀ ಸಂದೇಶ ಜವಳಿ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ತೀರ್ಥಹಳ್ಳಿಯ ‘ನಟ ಮಿತ್ರರು’ ತಂಡದವರು ಶಿವಕುಮಾರ್ ತೀರ್ಥಹಳ್ಳಿ ಇವರ ನಿರ್ದೇಶನದಲ್ಲಿ ‘ಸಂಸಾರದಲ್ಲಿ ಸನಿದಪ’ ಕನ್ನಡ ನಾಟಕ ಪ್ರಸ್ತುತ ಪಡಿಸಲಿದ್ದಾರೆ.

    ದಿನಾಂಕ 18-05-2024ರಂದು ಸಂಜೆ 6-00ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ ಶ್ರೀ ಪಡಾರು ಮಹಾಬಲೇಶ್ವರ ಭಟ್ಟ ಇವರು ಅಧ್ಯಕ್ಷತೆ ವಹಿಸಲಿದ್ದು, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಡಿ. ಶೆಟ್ಟಿ, ಮಂಗಳೂರಿನ ಹೊಟೇಲ್ ಜನತಾ ಡಿಲಕ್ಸ್ ಇದರ ಮಾಲಕರಾದ ಶ್ರೀ ಪಿ. ಸೂರ್ಯನಾರಾಯಣ ರಾವ್ ಪತ್ತುಮುಡಿ ಮತ್ತು ಶಿವಮೊಗ್ಗದ ರಂಗ ನಿರ್ದೇಶಕರು ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎಸ್.ಸಿ. ಗೌರಿಶಂಕರ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ‘ಅಭಿನಯ ಶಿವಮೊಗ್ಗ’ ತಂಡದವರು ಪ್ರೊ. ಎಸ್.ಸಿ. ಗೌರಿಶಂಕರ ಇವರ ರಚನೆ ಮತ್ತು ನಿರ್ದೇಶನದಲ್ಲಿ ‘ಪೀಠಾರೋಹಣ’ ಕನ್ನಡ ನಾಟಕ ಪ್ರಸ್ತುತ ಪಡಿಸಲಿದ್ದಾರೆ.

    ದಿನಾಂಕ 19-05-2024ರಂದು ಸಂಜೆ 6-00ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಂ. ಅಶ್ವಿನ್ ಕುಮಾರ್ ರೈ ಇವರು ವಹಿಸಲಿದ್ದು, ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗಭೂಷಣ ಎಚ್.ಎಸ್. ಮತ್ತು ಬಂಟ್ವಾಳ ಕ.ಸಾ.ಪ.ದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಬಿ. ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಶಿವಮೊಗ್ಗದ ‘ನಮ್ಮ ಹಳ್ಳಿ ಥಿಯೇಟರ್’ ತಂಡದವರಿಂದ ಪ್ರೊ. ಎಸ್.ಸಿ. ಗೌರಿಶಂಕರ ಇವರ ರಂಗ ರೂಪಾಂತರ ಮತ್ತು ನಿರ್ದೇಶನದಲ್ಲಿ ‘ಮಹಾಬಲಯ್ಯನ ಕೋಟು’ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಇಂಟಾಕ್ ವತಿಯಿಂದ ರೇಖಾಚಿತ್ರಗಳ ‘ಪ್ರದರ್ಶನ | ಮೇ 18
    Next Article ಶ್ರೀ ಎಡನೀರು ಕ್ಷೇತ್ರದಲ್ಲಿ ಕೃತಿಗಳ ಅನಾವರಣ | ಮೇ 19
    roovari

    Add Comment Cancel Reply


    Related Posts

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನ | ಜೂನ್ 29 

    June 27, 2025

    ಡಿವಿಜಿ ಪ್ರಶಸ್ತಿ ಪ್ರದಾನ ಸಮಾರಂಭ – 2025

    June 27, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನ | ಜೂನ್ 28

    June 27, 2025

    ನೀನಾಸಂ ರಂಗ ಶಿಕ್ಷಣಕ್ಕೆ ಹಾರಂಬಿ ಯತಿನ್ ಆಯ್ಕೆ

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.