Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಮುಂಡಕ ಉಪನಿಷತ್ತು’ ಇದರ ಉಪನ್ಯಾಸ
    Literature

    ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಮುಂಡಕ ಉಪನಿಷತ್ತು’ ಇದರ ಉಪನ್ಯಾಸ

    August 21, 2024Updated:August 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮವು 17 ಆಗಸ್ಟ್2024ರಂದು ಕರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ವೇದಾಂತ ಹಾಗೂ ಯೋಗ ಪ್ರವೀಣರಾದ ಡಾ. ಶಶಾಂಕ ಹತ್ವಾರ್ ‘ಮುಂಡಕ ಉಪನಿಷತ್ತು’ ಇದರ ಕುರಿತು ಮಾತನಾಡಿ “ವೇದಜ್ಞಾನದ ಮೂಲ ಸಂಸ್ಕಾರವು ತಂದೆಯಿಂದ ಮಕ್ಕಳಿಗೆ ನಂತರ ಹೆಚ್ಚಿನ ಜ್ಞಾನವು ಗುರುಗಳಿಂದ ಶಿಷ್ಯರಿಗೆ ಪಾರಂಪರಿಕವಾಗಿ ದೊರೆಯುವ ವಿದ್ಯೆಯಾಗಿದೆ. ಮುಂಡಕವು ಜ್ಞಾನಕ್ಕೆ ಸಂಬಂಧಿಸಿದ ಉಪನಿಷತ್ತು ಆಗಿದ್ದು ಇದನ್ನು ಸಂಹಿತಾ ಉಪನಿಷತ್ತು ಎಂಬುದಾಗಿಯೂ ಕರೆಯಲಾಗುತ್ತಿದೆ. ಯಾವುದನ್ನು ತಿಳಿದುಕೊಂಡಾಗ ಎಲ್ಲವನ್ನೂ ತಿಳಿದುಕೊಂಡಂತಾಗುವುದೋ ಅದನ್ನೇ ಪರಾ ವಿದ್ಯೆ, ಬ್ರಹ್ಮಜ್ಞಾನ, ಮೋಕ್ಷ ಎನ್ನಲಾಗುತ್ತದೆ. ನಮ್ಮೊಳಗೆ ಪ್ರತಿಯೊಬ್ಬರಲ್ಲಿಯೂ ಭಗವಂತನ ವಿಶೇಷ ಚೇತನವಿದ್ದು ಸಾಧನೆಯಿಂದ ಆ ಚೈತನ್ಯ ಸ್ವರೂಪದ ಅರಿವಾಗುತ್ತದೆ. ಲೌಕಿಕದಲ್ಲಿದ್ದುಕೊಂಡೇ ಈ ಬ್ರಹ್ಮ ಜ್ಞಾನವನ್ನು ಹೊಂದಬಹುದಾಗಿದೆ. ವೇದಾಂತವು ಸ್ವಂತ ಅಧ್ಯಯನದಿಂದ ಕಲಿಯುವ ವಿದ್ಯೆಯಾಗಿದೆ. ಇದು ಒಬ್ಬರಿಗೆ ಅಥವಾ ಒಂದು ಪಂಗಡಕ್ಕೆ ಸೀಮಿತವೂ ಆಗಿರದೆ ಯೋಗ್ಯತೆ ಇರುವ ಎಲ್ಲರೂ ವೇದೋಪನಿಷತ್ತುಗಳನ್ನು ಕಲಿಯಬಹುದಾಗಿದೆ.“ ಎಂದರು.
    ಡಾ. ನಾ. ಮೊಗಸಾಲೆ, ನಿತ್ಯಾನಂದ ಪೈ, ಏರ್‌ವೈಸ್ ಮಾರ್ಷಲ್ ಶ್ರೀ ರಮೇಶ್ ಕಾರ್ಣಿಕ್, ಶ್ರೀಮತಿ ಮಿತ್ರಪ್ರಭಾ  ಹೆಗ್ಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಾನಂದ ನಾರಾವಿ ಸ್ವಾಗತಿಸಿ, ಕು. ಶಾರ್ವರಿ ಪ್ರಾರ್ಥಿಸಿ, ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿ, ಶ್ರೀ ಸುಧಾಕರ್ ಶ್ಯಾನುಭೋಗ್  ಅತಿಥಿಗಳನ್ನು ಪರಿಚಯಿಸಿ, ಶ್ರೀಮತಿ ಸುಲೋಚನಾ ಬಿ. ವಿ. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮುರಳೀಧರ್ ಭಟ್ ರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ
    Next Article ಸುಳ್ಯದಲ್ಲಿ ‘ವಾಹಿನಿ ಸಾಹಿತ್ಯ ಸೌರಭ 2024’ | ಆಗಸ್ಟ್ 25
    roovari

    Comments are closed.

    Related Posts

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.