Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 23

    November 22, 2025

    ಸಾಗರದಲ್ಲಿ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನ | ನವೆಂಬರ್ 23

    November 22, 2025

    ಪ್ರಾಚಾರ್ಯ ಗುಂಡ್ಮಿ ಸದಾನಂದ ಐತಾಳರಿಗೆ ‘ಯಕ್ಷದೇಗುಲ 2025’ರ ಪ್ರಶಸ್ತಿ

    November 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಮಣೆ ಮ೦ಚೊದ ಮಂತ್ರಮೂರ್ತಿ’ ನಾಟಕದ ಚೊಚ್ಚಲ ಪ್ರದರ್ಶನ ಮತ್ತು ‘ಕುಂದೇಶ್ವರ ಕಲಾಭೂಷಣ ಪ್ರಶಸ್ತಿ’ ಪ್ರದಾನ | ಸೆಪ್ಟೆಂಬರ್ 4ರಂದು
    Drama

    ಮಂಗಳೂರಿನಲ್ಲಿ ‘ಮಣೆ ಮ೦ಚೊದ ಮಂತ್ರಮೂರ್ತಿ’ ನಾಟಕದ ಚೊಚ್ಚಲ ಪ್ರದರ್ಶನ ಮತ್ತು ‘ಕುಂದೇಶ್ವರ ಕಲಾಭೂಷಣ ಪ್ರಶಸ್ತಿ’ ಪ್ರದಾನ | ಸೆಪ್ಟೆಂಬರ್ 4ರಂದು

    September 3, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ದಿನಾಂಕ 04-09-2023ರ ಸೋಮವಾರ ಸಂಜೆ 6 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಶ್ರೀಪ್ರಾಪ್ತಿ ಕಲಾವಿದೆರ್ ಕುಡ್ಲ’ ತಂಡ ಅಭಿನಯಿಸುವ ಕಲಾಸವ್ಯಸಾಚಿ ಪ್ರಶಾಂತ ಸಿ.ಕೆ. ವಿರಚಿತ ‘ಮಣೆ ಮ೦ಚೊದ ಮಂತ್ರಮೂರ್ತಿ’ ನಾಟಕದ ಉದ್ಘಾಟನಾ ಪ್ರದರ್ಶನ ನಡೆಯಲಿದೆ.

    ಇದೇ ಸಂದರ್ಭದಲ್ಲಿ ತುಳು, ಕೊಂಕಣಿ, ಕನ್ನಡ, ತೆಲುಗು ಸಿನಿಮಾ ಮತ್ತು ರಂಗಭೂಮಿ ದಿಗ್ಗಜ ಕಲಾವಿದ ಗೋಪಿನಾಥ್ ಭಟ್‌ ಅವರಿಗೆ ‘ಕುಂದೇಶ್ವರ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಗೋಪಿನಾಥ್ ಭಟ್ ಅವರು ರಂಗಭೂಮಿಯಲ್ಲಿ 100ಕ್ಕೂ ಹೆಚ್ಚು ಪಾತ್ರ ನಿರ್ವಹಿಸಿ 750ಕ್ಕೂ ಹೆಚ್ಚು ಪ್ರದರ್ಶನ ನೀಡಿದ್ದಾರೆ. ವೀರಮದಕರಿ ಸಹಿತ 45ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ದಟ್ಸ್ ಆಲ್ ಯುವರ್ ಆನರ್ ನಾಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಗೆದ್ದುಕೊಂಡಿರುವ ಭಟ್ ಅವರು ಕೊಂಕಣಿ ಅಕಾಡೆಮಿ ಗೌರವ ಪ್ರಶಸ್ತಿಗೂ ಭಾಜನರಾಗಿದ್ದಾರೆ.

    ಸಂಸದ ನಳಿನ್ ಕುಮಾರ್ ಕಟೀಲ್‌, ಶಾಸಕ ಡಿ.ವೇದವ್ಯಾಸ ಕಾಮತ್, ನಿವೃತ್ತ ಸೇನಾಧಿಕಾರಿ ಕ್ಯಾ. ಬ್ರಿಜೇಶ್ ಚೌಟ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಕಲಾಮಾಣಿಕ್ಯ ವಿಜಯಕುಮಾರ್ ಕೊಡಿಯಾಲಬೈಲ್, ಯು.ಟಿ.ಫರೀದ್‌ ಫೌಂಡೇಶನ್ ಅಧ್ಯಕ್ಷರಾದ ಡಾ. ಯು.ಟಿ. ಇಫ್ತಿಕರ್ ಮತ್ತಿತರರು ಈ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ನಿರ್ದೆಶನದಲ್ಲಿ ಪಾಡ್ದನ ಆಧಾರಿತ ತುಳು ನಾಟಕ ‘ಮಣೆ ಮ೦ಚೊದ ಮಂತ್ರಮೂರ್ತಿ’ ಚೊಚ್ಚಲ ಪ್ರದರ್ಶನ ಆಯೋಜಿಸಲಾಗಿದ್ದು, ಇದೇ ಸಂದರ್ಭ ಹಿರಿಯ ದೈವಾರಾಧಕ ಸೀನ ಶೆಡ್ಯ ಅವರಿಗೆ ಗೌರವ ಸನ್ಮಾನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯೊಂದಿಗೆ ‘ಸಂವಾದ’ | ಸೆಪ್ಟೆಂಬರ್ 4ರಂದು
    Next Article ಪರಿಚಯ ಲೇಖನ | “ಯಕ್ಷ ಕಲಾನ್ವಿತೆ” ಪ್ರತಿಷ್ಠ ಎಸ್. ರೈ
    roovari

    Add Comment Cancel Reply


    Related Posts

    ಉಡುಪಿ ರಂಗಭೂಮಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ – 2025 | ನವೆಂಬರ್ 23ರಿಂದ ಡಿಸೆಂಬರ್ 04

    November 22, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ | ನವೆಂಬರ್ 22

    November 20, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ವಿಚಾರ ಸಂಕಿರಣ | ನವೆಂಬರ್ 23

    November 20, 2025

    ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 24

    November 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.