Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳ್ತಂಗಡಿಯಲ್ಲಿ ಮನೆ ಮನೆ ಗಮಕಕ್ಕೆ ಚಾಲನೆ
    Literature

    ಬೆಳ್ತಂಗಡಿಯಲ್ಲಿ ಮನೆ ಮನೆ ಗಮಕಕ್ಕೆ ಚಾಲನೆ

    May 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ತಂಗಡಿ : ಕನ್ನಡ ಕಾವ್ಯ ಪರಂಪರೆಯ ಪರಿಚಯ ಮತ್ತು ಸಂಸ್ಕೃತಿಯನ್ನು ಉಳಿಸುವ ಹೊಸ ಆಂದೋಲನವನ್ನು ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ ಆರಂಭಿಸಿದೆ. ಮನೆ ಮನೆಗಳಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸುವ ಅಭಿಯಾನಕ್ಕೆ ಧರ್ಮಸ್ಥಳ ಗ್ರಾಮದ ನಾರ್ಯದ ಜಯರಾಮ ಕುದ್ರೆತ್ತಾಯರ ಮನೆಯಲ್ಲಿ ದಿನಾಂಕ 07-05-2024ರಂದು ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು.

    ಬೆಳ್ತಂಗಡಿ ತಾಲೂಕು ಘಟಕದ ಗಮಕ ಪರಿಷತ್ತಿನ ಪೂರ್ವಾಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಜಯರಾಮ ಕುದ್ರೆತ್ತಾಯರ ಮನೆಯಲ್ಲಿ ಮನೆಮನೆ ಗಮಕದ ಕಾರ್ಯಕ್ರಮವನ್ನು ಕಲಾಪೋಷಕರಾದ ಶ್ರೀ ಭುಜಬಲಿಯವರು ಉದ್ಘಾಟಿಸಿದರು. ನಂತರ ಶುಭಾಶಯಗಳನ್ನು ಕೋರಿದ ಅವರು “ಎಲ್ಲಾ ಕಲೆಗಳಿಗೂ ಸಂಗೀತವು ಮೂಲವಾಗಿದ್ದು, ವಾಚನ ಪ್ರಧಾನವಾದ ಗಮಕ ಕಲೆಯು ನಮ್ಮ ಸಂಸ್ಕೃತಿಯನ್ನು ಉಳಿಸಲು ಬಲು ಮುಖ್ಯ ಕಾರಣವಾಗಿದೆ. ಇಂತಹ ಗಮಕ ಕಲೆಯ ಮೂಲಕ ಕನ್ನಡದ ಕಾವ್ಯ ಸಂಪತ್ತನ್ನು ಮನೆ ಮನೆಗೆ ತಲುಪಿಸುವ ಕಾರ್ಯವು ಸ್ತುತ್ಯರ್ಹವಾಗಿದೆ. ಈ ಕಾರ್ಯದಲ್ಲಿ ನಾವೆಲ್ಲರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.

    ನಂತರ ಕುಮಾರವ್ಯಾಸ ವಿರಚಿತ ಕರ್ಣಾಟಕ ಕಥಾಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ‘ಕೃಷ್ಣತಂತ್ರ’ ಕಾವ್ಯ ಭಾಗವನ್ನು ವಾಚನ ವ್ಯಾಖ್ಯಾನ ಮಾಡಲಾಯಿತು. ವಾಚನದಲ್ಲಿ ಹಳೆಯ ಮತ್ತು ಹೊಸ ಗಮಕ ಪ್ರತಿಭೆಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಜಯರಾಮ ಕುದ್ರೆತ್ತಾಯರ ಮೊಮ್ಮಕ್ಕಳಾದ ಚಿ. ಆರ್ಯ ಹೊಳ್ಳ, ಕು. ಶ್ರಿಯಾ ಹೊಳ್ಳ, ಕು. ಆಶ್ರಿತಾ, ಶ್ರೀಮತಿ ವರ್ಷಾ ಕಾರ್ತಿಕ್ ಭಟ್ ಮತ್ತು ಆಹ್ವಾನಿತ ಗಮಕಿಗಳಾದ ಗಮಕಿ ಮಂಜುಳಾ ಸುಬ್ರಹ್ಮಣ್ಯ ಭಟ್ ಮಂಚಿ ಹಾಗೂ ಕು. ಶ್ರೀವಿದ್ಯಾ ಐತಾಳ್ ಉಜಿರೆ ಪಾಲ್ಗೊಂಡರು. ವ್ಯಾಖ್ಯಾನವನ್ನು ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್ ಉಜಿರೆ ನಡೆಸಿದರು. ಕಾರ್ಯಕ್ರಮದಲ್ಲಿ ಪರಿಷತ್ತಿನ ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್ ಬೆಳಾಲು ಮತ್ತು ಶ್ರೀ ರಮೇಶ್ ಮಯ್ಯ, ಪರಿಷತ್ತಿನ ಪೂರ್ವಾಧ್ಯಕ್ಷರಾದ ಶ್ರೀ ಸುರೇಶ್ ಕುದ್ರೆತ್ತಾಯ. ಸಂಗೀತ ಶಿಕ್ಷಕರಾದ ಎ.ಡಿ. ಸುರೇಶ್ ಬೆಳ್ತಂಗಡಿ, ಹವ್ಯಾಸಿ ಯಕ್ಷಗಾನ ಅರ್ಧದಾರಿಗಳಾದ ಹರಿದಾಸ ಗಾಂಭೀರ್, ಮನೆಯವರು ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೋಟದ ಹರ್ತಟ್ಟುವಿನಲ್ಲಿ ‘ಶ್ವೇತಸಂಜೆ-27’
    Next Article ಖ್ಯಾತ ಬಾಲ ಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ವಯೋಲಿನ್ ಕಛೇರಿ’ | ಮೇ 15
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.