Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಹಿಂದೂ ಸಂಸ್ಕಾರ ಬೇಸಿಗೆ ಶಿಬಿರದಲ್ಲಿ ತಾಳಮದ್ದಳೆ
    Camp

    ಮಂಗಳೂರಿನ ಹಿಂದೂ ಸಂಸ್ಕಾರ ಬೇಸಿಗೆ ಶಿಬಿರದಲ್ಲಿ ತಾಳಮದ್ದಳೆ

    April 18, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18 ಏಪ್ರಿಲ್ 2023, ಮಂಗಳೂರು: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆ ಮತ್ತು ಸದ್ಬೋಧ ಗುರುಕುಲದ ಹಿಂದೂ ಸಂಸ್ಕಾರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಹಿಂದೂ ಸಂಸ್ಕಾರ ಬೇಸಿಗೆ ಶಿಬಿರ” ಏಪ್ರಿಲ್ 3 ರಿಂದ 19ರವರೆಗೆ “ಶ್ರೀ ಕೃಷ್ಣ ನಿಲಯ”, ಕೋಟೆಕಣಿ 1ನೇ ಕ್ರಾಸ್, ಉರ್ವಸ್ಟೋರ್, ಮಂಗಳೂರಿನಲ್ಲಿ ನಡೆಯುತ್ತಿದೆ.

    ಈ ಶಿಬಿರದ ವಿಶೇಷತೆಗಳು 1) ವೇದ ಮಂತ್ರಗಳ ಉಪದೇಶ 2) ಸಂಸ್ಕೃತ ಭಾಷಾ ಪರಿಚಯ 3) ಸುಭಾಷಿತ, ನೀತಿಯ ಕಥೆಗಳು 4) ವಿಷ್ಣುಸಹಸ್ರನಾಮ ಪಠಣಾ ತರಬೇತಿ 5) ಬೌದ್ಧಿಕ, ಒಳಾಂಗಣ ಆಟಗಳು 6) ಧಾರ್ಮಿಕ ಶೈಕ್ಷಣಿಕ ಪ್ರವಾಸ 7) ಭಜನಾ ಸಂಗೀತ ತರಬೇತಿ 8) ಪಂಚಾಂಗ, ರಂಗೋಲಿ ಕಲಿಕೆ 9) ಪುರಾಣದ ಕಥೆಗಳು 10) ರಾಮಾಯಣ, ಭಾಗವತ 11) ಪೂಜೆ ಹೋಮ – ಹಿಂದೂ ಸಂಸ್ಕಾರ 12) ಹಿಂದೂ ಧರ್ಮದ ಶ್ರೇಷ್ಠತೆ ಇತ್ಯಾದಿ ವಿಷಯಗಳಿಗೆ ಒತ್ತು ನೀಡಿ ತರಬೇತಿ ನಡೆಯುತ್ತಿದೆ.

    ಈ ಶಿಬಿರದಲ್ಲಿ ಸೈಂಟ್ ಆಲೋಶಿಯಶ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಕಾರ್ಪೊರೇಷನ್ ಬ್ಯಾಂಕ್ ನ ನಿವೃತ್ತ ಡಿ.ಜಿ.ಎಂ. ಸಂಗೀತ ಕಲಾ ವಿಶಾರದರಾದ ಶ್ರೀ ಕೃಷ್ಣರಾಜ ರಾವ್, ಪ್ರೌಢ ಶಾಲೆಯ ಅಧ್ಯಾಪಕರಾದ, ಶ್ರೀಮತಿ ದಿವ್ಯಾರಾಣಿ ಬಿ.ಕೆ. ಮತ್ತು ಶ್ರೀಮತಿ ವೀಣಾ ಗರ್ದೆ ಇವರು ಸಂಪನ್ಮೂಲ ಗುರುಗಳಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ.

    ದಿನಾಂಕ 07-04-2023 ಶುಕ್ರವಾರ ಅಪರಾಹ್ನ ಶಿಬಿರದ ಒಂದು ಭಾಗವಾಗಿ “ಲವ ಕುಶ ಕಾಳಗ” ಕಥಾನಕದ ಮಕ್ಕಳ ಯಕ್ಷಗಾನ ತಾಳಮದ್ದಳೆ ಅತ್ಯಂತ ಆಕರ್ಷಕವಾಗಿ ಸಂಪನ್ನಗೊಂಡಿತು ಎಂದು ಕಲಾಕುಂಚ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮೀ ಕಾರಂತ್‌ರವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಮಂಗಳೂರಿನ “ಶ್ರೀ ಕೃಷ್ಣ ನಿಲಯ” ಸಭಾಂಗಣದಲ್ಲಿ ಮಕ್ಕಳು ಸಂಸ್ಕಾರ, ಸಂಸ್ಕೃತಿಯೊಂದಿಗೆ ಅಂತರಾಷ್ಟ್ರೀಯ ಖ್ಯಾತಿಯ ಮಹಿಳಾ ಯಕ್ಷಗಾನ ಕಲಾವಿದೆ ಶ್ರೀಮತಿ ವಿದ್ಯಾ ಕೊಳ್ಯೂರು ಅವರ ನಿರ್ದೇಶನದಲ್ಲಿ ನಡೆದ ಈ ತಾಳಮದ್ದಳೆಯ ಭಾಗವತಿಕೆ ಶ್ರೀಮತಿ ಶಾಲಿನಿ ಹೆಬ್ಬಾರ್, ಚಂಡೆ ವಾದನ ಕುಮಾರ್ ವರುಣ್ ಹೆಬ್ಬಾರ್, ಮದ್ದಳೆಯಲ್ಲಿ ಅಭಿಜಿತ ಬಂಟ್ವಾಳ್ ಅರ್ಧದಾರಿಗಳಾಗಿ ಶತ್ರುಘ್ನ ಪಾತ್ರದಲ್ಲಿ ಸುಮುಖ ಹೆಬ್ಬಾರ್, ಲವನ ಪಾತ್ರದಲ್ಲಿ ದೇವಾಂಶು ಕಾರಂತ್, ವಟುಗಳ ಪಾತ್ರದಲ್ಲಿ ಸಂಕರ್ಷಣ ರಾವ್, ದೇವಿ ಸಾಮತ್ಮಿಕ ನಾವಡ, ಸೀತೆಯ ಪಾತ್ರದಲ್ಲಿ ಆರುಷಿರಾವ್, ಕುಶನ ಪಾತ್ರದಲ್ಲಿ ವೇದಾಂತ ಕಾರಂತ್‌, ರಾಮನ ಪಾತ್ರದಲ್ಲಿ ಸಾತ್ವಿಕ್ ನಾವಡ, ವಾಲ್ಮೀಕಿ ಪಾತ್ರದಲ್ಲಿ ಸಿಂಧೂರ ದೇವ ಕಾನೆ. ಈ ಬಾಲಕ-ಬಾಲಕಿಯರ ಅತ್ಯುದ್ಭುತ ಯಕ್ಷಕಲಾ ಪ್ರಕಾರಗಳನ್ನು ಅನಾವರಣಗೊಳಿಸಿ ಮುಕ್ತವಾದ ವೇದಿಕೆ ಕಲ್ಪಿಸಿ ವಿಶ್ವವಿಖ್ಯಾತ ಆರಾಧನಾ ಕಲೆಯಾದ ಯಕ್ಷಗಾನವನ್ನು ಗಡಿನಾಡಿನಲ್ಲಿ ವೈಭವೀಕರಿಸುತ್ತಿರುವ ಕಲಾಕುಂಚ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ, ದಾವಣಗರ ಕಲಾಕುಂಚ: ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಸೇರಿದಂತೆ ಸರ್ವ ಸದಸ್ಯರು, ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಣಿಪಾಲದಲ್ಲಿ ರಾಗ ಧನ ಸಂಸ್ಥೆಯ “ರಾಗರತ್ನಮಾಲಿಕೆ”-11 
    Next Article ನಾಟಕ ವಿಮರ್ಶೆ: ‘ಹಕ್ಕಿ ಮತ್ತು ಅವಳು’ ಒಂದು ವಿಶಿಷ್ಟ ರಂಗ ಪ್ರಯೋಗ – ವಿಮರ್ಶಕ ರವಿ ಕಟ್ಕೆರೆ, ಕುಂದಾಪುರ
    roovari

    Add Comment Cancel Reply


    Related Posts

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಶಕ್ತಿನಗರದ ಕಲಾಂಗಣದಲ್ಲಿ ‘ಕಾಜಳ್’ ರಜಾ ಶಿಬಿರದ ಸಮಾರೋಪ

    May 6, 2025

    ಗೊಪ್ಪೇನಹಳ್ಳಿಯಲ್ಲಿ ‘ಚಿಣ್ಣರ ಚಿಗುರು’ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರ | ಮೇ 10 ಮತ್ತು 11

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.