Subscribe to Updates

    Get the latest creative news from FooBar about art, design and business.

    What's Hot

    ಡಾ. ವಸಂತಕುಮಾರ ಪೆರ್ಲ ಇವರಿಗೆ ಹವ್ಯಕ ಸಭಾದಿಂದ ಸನ್ಮಾನ

    January 28, 2026

    ಶ್ರೀ ಭ್ರಾಮರೀ ನಾಟ್ಯಾಲಯದ ರಜತ ವರ್ಷದ ಅಂಗವಾಗಿ ‘ಬಾಲ ಯುಗ್ಮ ನೃತ್ಯ’ ಪ್ರಸ್ತುತಿ

    January 28, 2026

    ಬಸವಣ್ಣ ದೇವರಮಠದಲ್ಲಿ ‘ವಚನ ಕಂಠಪಾಠ ಸ್ಪರ್ಧೆ’ | ಏಪ್ರಿಲ್ 19

    January 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಸಾರಾಂಗದಿಂದ ಏಳು ಕನ್ನಡ ಭಾಷಾ ಪಠ್ಯಪುಸ್ತಕ ಬಿಡುಗಡೆ
    Book Release

    ಪ್ರಸಾರಾಂಗದಿಂದ ಏಳು ಕನ್ನಡ ಭಾಷಾ ಪಠ್ಯಪುಸ್ತಕ ಬಿಡುಗಡೆ

    June 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಮಂಗಳೂರು ವಿವಿ ಪ್ರಸಾರಾಂಗ ಪ್ರಕಟಿಸಿದ ಮೂರನೇ ಚತುರ್ಮಾಸದ ಏಳು ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ದಿನಾಂಕ 21-06-2023ರಂದು ಸಿಂಡಿಕೇಟ್ ಸಭಾಂಗಣದಲ್ಲಿ ಅನಾವರಣಗೊಳಿಸಲಾಯಿತು. ಮಂಗಳ ಪಠ್ಯಪುಸ್ತಕ ಮಾಲಿಕೆಯಡಿ ಪ್ರಕಟಿಸಲಾದ ಕಲಾಮಂಗಳ, ವಾಣಿಜ್ಯ ಮಂಗಳ, ಮುಕ್ತ ಮಂಗಳ, ನಿರ್ವಹಣಾ ಮಂಗಳ, ಗಣಕ ಮಂಗಳ, ಸೌಂದರ್ಯ ಮಂಗಳ, ವಿಜ್ಞಾನ ಮಂಗಳ ಎಂಬ ಕೃತಿಗಳನ್ನು ಮಂಗಳೂರು ವಿವಿಯ ಕುಲಪತಿ ಪ್ರೊ. ಜಯರಾಜ್ ಅಮೀನ್ ಬಿಡುಗಡೆಗೊಳಿಸಿ ಮಾತನಾಡುತ್ತಾ “ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯ ಪುಸ್ತಕಗಳಿಗೆ ಅತೀ ಹೆಚ್ಚು ಮಹತ್ವವಿದ್ದು ಅದು ತಲೆಮಾರುಗಳ ಆಲೋಚನೆಯನ್ನು ರೂಪಿಸುತ್ತದೆ. ಅಂತಹ ಪಠ್ಯರಚನೆಯಲ್ಲಿ ಪೂರ್ವಾಗ್ರಹಗಳು, ಜ್ಞಾನಕಿಂತ ಹೊರತಾದ ಹಿತಾಸಕ್ತಿ ಇರಬಾರದು. ಮಂಗಳೂರು ವಿವಿಯ ಕನ್ನಡ ಪಠ್ಯಗಳನ್ನು ಎಲ್ಲರ ಸಹಭಾಗಿತ್ವದಲ್ಲಿ ಸಕಾಲದಲ್ಲಿ ಸಂಪಾದಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತಿರುವ ಅಧ್ಯಯನ ಮಂಡಳಿ ಮತ್ತು ಪ್ರಸಾರಾಂಗದ ಕಾರ್ಯ ಶ್ಲಾಘನೀಯ” ಎಂದರು.

    ಮಂಗಳೂರು ವಿವಿ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ “ಮಂಗಳೂರು ವಿವಿಯ ಕನ್ನಡ ಪಠ್ಯ ಕರಾವಳಿಯ ಅಸ್ಮಿತೆ ಮತ್ತು ಮುದ್ರಣದ ಗುಣಮಟ್ಟದಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಎನ್.ಇ.ಪಿ. ಪೂರಕವಾಗುವಂತೆ ಶ್ರದ್ಧೆಯಿಂದ ರೂಪಿಸಿದ ಇಲ್ಲಿನ ಪಠ್ಯಗಳು ಮಾದರಿಯಾಗಿವೆ” ಎಂದರು.

    ಸಮಾರಂಭದಲ್ಲಿ ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ, ಸಿಂಡಿಕೇಟ್ ಸದಸ್ಯ ರವಿಚಂದ್ರ, ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ, ಸಹಾಯಕ ನಿರ್ದೇಶಕ ಡಾ. ಧನಂಜಯ ಕುಂಬ್ಳೆ, ಪಠ್ಯ ಪುಸ್ತಕ ಕಾರ್ಯನಿರ್ವಾಹಕ ಸಂಪಾದಕ ಡಾ. ಮಾಧವ ಎಂ.ಕೆ, ನಾರಾಯಣ ಗುರು ಅಧ್ಯಯನ ಕೇಂದ್ರದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್, ಪೂರ್ಣಪ್ರಜ್ಞ ಕಾಲೇಜು ಉಡುಪಿ ಇಲ್ಲಿನ ಪ್ರಾಂಶುಪಾಲ ಡಾ. ರಾಘವೇಂದ್ರ, ಬಂಟ್ವಾಳ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ ಶಿಶಿಲ, ಕವಿ ಜ್ಯೋತಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರು ನರಸಿಂಹ ನಾಯಕ್ ಅವರಿಂದ ಹರಿದಾಸ ಕೃತಿ ಕೀರ್ತನೆಗಳ ಗಾಯನ ‘ದಾಸ ಗಾನಾಮೃತ’
    Next Article ಮೈಸೂರಿನ ಕಿರು ರಂಗಮಂದಿರ ದಲ್ಲಿ ‘ಮಥನ’ | ಜೂನ್ 29ರಂದು
    roovari

    Add Comment Cancel Reply


    Related Posts

    ಡಾ. ವಸಂತಕುಮಾರ ಪೆರ್ಲ ಇವರಿಗೆ ಹವ್ಯಕ ಸಭಾದಿಂದ ಸನ್ಮಾನ

    January 28, 2026

    ಬಸವಣ್ಣ ದೇವರಮಠದಲ್ಲಿ ‘ವಚನ ಕಂಠಪಾಠ ಸ್ಪರ್ಧೆ’ | ಏಪ್ರಿಲ್ 19

    January 28, 2026

    ಪುಸ್ತಕ ವಿಮರ್ಶೆ | ಡಾ. ನರಹರಿ ಮತ್ತು ಐ.ಎ.ಡಿ.

    January 28, 2026

    ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ‘ಮಹಿಳಾ ವೈಭವ -2026’ | ಫೆಬ್ರುವರಿ 01 ಮತ್ತು 02

    January 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.