Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾ ರಾವ್ ಇವರ ಕೃತಿಗೆ ಎಂ.ಕೆ. ಇಂದಿರಾ ಪುಸ್ತಕ ಬಹುಮಾನ

    November 1, 2025

    ತೀರ್ಥಹಳ್ಳಿಯಲ್ಲಿ ದಾಸವರೇಣ್ಯ ಪುರಂದರದಾಸರ ‘ಕೀರ್ತನೋತ್ಸವ’ ಕಾರ್ಯಕ್ರಮ | ನವೆಂಬರ್ 04

    November 1, 2025

    ಬೆಂಗಳೂರಿನ ಕೆ.ಆರ್.ಇ.ಡಿ.ಎಲ್. ಆಡಿಟೋರಿಯಂನಲ್ಲಿ ‘ತಾಳಮದ್ದಳೆ’ | ನವೆಂಬರ್ 02

    November 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿವಿ ‘ಸಂಭ್ರಮ 2022-23’ ಉದ್ಘಾಟನೆ
    Competition

    ಮಂಗಳೂರು ವಿವಿ ‘ಸಂಭ್ರಮ 2022-23’ ಉದ್ಘಾಟನೆ

    July 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಡಿಪು : ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಆಶ್ರಯದಲ್ಲಿ ‘ಸಂಭ್ರಮ-2023’ ಸಾಂಸ್ಕೃತಿಕ ಸ್ಪರ್ಧೆಯು ದಿನಾಂಕ 17-07-2023 ಸೋಮವಾರ ಉದ್ಘಾಟನೆಗೊಂಡು 18 ಮತ್ತು 19-07-2023ರಂದು ಮೂರು ದಿನಗಳ ಕಾಲ ನಡೆಯಿತು.

    ಈ ಕಾರ್ಯಕ್ರಮವನ್ನು ಮಂಗಳಾ ಸಭಾಂಗಣದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಅವರು ಉದ್ಘಾಟಿಸಿ ಮಾತನಾಡುತ್ತಾ “ಕಾಲ ಬದಲಾದರೂ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆಯದೆ ಸಂಸ್ಕಾರದ ಮೌಲ್ಯವನ್ನು ಅರಿತುಕೊಂಡು ನಾವು ಮುನ್ನಡೆಯಬೇಕು. ನಾವು ಯಾವುದೇ ಸಾಧನೆ ಮಾಡಿದರೂ ನಮ್ಮ ತಂದೆ ತಾಯಿಗೆ ಕೊಡುವ ಗೌರವದ ಮೌಲ್ಯ ನಮಗೆ ತಿಳಿದಿರಬೇಕು. ಇಂದಿನ ಆಧುನಿಕ ಯುಗದಲ್ಲಿ ಸಾಧನೆಗೆ ಬಹಳಷ್ಟು ಮಾರ್ಗಗಳಿದ್ದು ಅದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಬದುಕನ್ನು ಕಂಡುಕೊಳ್ಳಬೇಕು” ಎಂದು ಹೇಳಿದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕುಲಪತಿ ಪ್ರೊ. ಜಯರಾಜ್ ಅಮೀನ್‌ ಅವರು ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು” ಎಂದರು.

    ರಾಷ್ಟ್ರಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಜಯಗಳಿಸಿದ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಗೋವಿಂದ ದಾಸ ಕಾಲೇಜು ಮತ್ತು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕ ಡಾ. ಪರಮೇಶ್ವರ ಅವರು ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಅವರು ವಂದಿಸಿ, ಪ್ರಗತಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶನೀಶ್ವರ ಯಕ್ಷಗಾನದ ಶ್ರೀ ವಿಜಯ ಕುಮಾರ್ ಶೆಟ್ಟಿ ಮೊಯ್ಲೊಟ್ಟು ಅವರಿಗೆ ‘ಗುರುದೇವ ಕಲಾ ಪ್ರಶಸ್ತಿ’
    Next Article ‘ಪುಣ್ಯಕ್ಷೇತ್ರ ಬೀಬೀಲಚ್ಚಿಲ್’ ಭಕ್ತಿಗೀತೆಗಳ ಬಿಡುಗಡೆ
    roovari

    Add Comment Cancel Reply


    Related Posts

    ಬಳ್ಳಾರಿಯಲ್ಲಿ ಕವಿಗೋಷ್ಠಿಗೆ ಕವನ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 05

    October 31, 2025

    ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 12

    October 30, 2025

    ಸ್ಕೌಟ್ಸ್ ಗೈಡ್ಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ

    October 30, 2025

    ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರಬಂಧ, ಕಥಾ ಸ್ಪರ್ಧೆಗಳಿಗೆ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 02

    October 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.