Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮ
    Literature

    ಮಂಗಳೂರಿನಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮ

    August 16, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ಇಪ್ಪತ್ತೆಂಟನೇ ಉಪನ್ಯಾಸ ದಿನಾಂಕ 12-08-2023ರಂದು ಮಂಗಳೂರಿನ ನೀರುಮಾರ್ಗದ ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ‘ಸ್ವಾಮಿ ವಿವೇಕಾನಂದರ ದೃಷ್ಟಿಯಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿ’ ಎಂಬ ವಿಷಯದ ಕುರಿತು ಬೆಂಗಳೂರಿನ ಬಸವನಗುಡಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ನಿತ್ಯಾನಂದಜಿ ಅವರು ಮಾತನಾಡುತ್ತಾ “ಸಮಾಜ ಕೆಟ್ಟದು ಎಂದು ದೂರುತ್ತ ಕೂರುವದು ನಮ್ಮ ಕೆಲಸವಲ್ಲ. ಅದನ್ನು ಹೇಗೆ ಸರಿಪಡಿಸುವುದು ಎಂದು ಆಲೋಚಿಸಬೇಕು ಮತ್ತು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಸಮಾಜಕ್ಕೆ ನಾವು ಉತ್ತಮವಾದ ಆಲೋಚನೆಗಳನ್ನು ನೀಡಬೇಕು. ಇದು ನಮ್ಮ ಕರ್ತವ್ಯ. ನಾವು ಕೇವಲ ಕೆಲಸವನ್ನು ನಮ್ಮ ಉದ್ಧಾರಕ್ಕಾಗಿ ಅಥವಾ ನಮ್ಮ ಉನ್ನತಿಗಾಗಿ ಮಾಡುತ್ತೇವೆ. ಆದರೆ ಕೆಲಸವನ್ನು ಪ್ರೀತಿಯಿಂದ ಮಾಡಿದಾಗ ಅದು ಸೇವೆಯಾಗುತ್ತದೆ ಮತ್ತು ಇದರಿಂದ ಸಮಾಜದ ಉದ್ಧಾರ ಸಾಧ್ಯ. ಕೆಲಸದ ರೀತಿ ನೀತಿಗಳು ಬದಲಾಗುವುದಿಲ್ಲ. ಆದರೆ ನಾವು ಅದನ್ನು ನೋಡುವ ದೃಷ್ಟಿ ಬದಲಾಗಬೇಕಾಗಿದೆ. ಈ ವಿಚಾರಗಳನ್ನು ನಾವು ಸ್ವಾಮಿ ವಿವೇಕಾನಂದರ ಚಿಂತನೆಗಳಲ್ಲಿ ಕಾಣಬಹುದು” ಎಂದು ಹೇಳಿದರು.

    ಸ್ವಾಮೀಜಿಯವರ ಭಾಷಣದ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗೆ ಸ್ವಾಮೀಜಿಯವರು ಉತ್ತರಿಸಿದರು. ಮಂಗಳೂರು ರಾಮಕೃಷ್ಣ ಮಿಷನ್‌ ಕಾರ್ಯಕ್ರಮಗಳ ಮುಖ್ಯ ಸಂಯೋಜಕರಾದ ರಂಜನ್‌ ಬೆಳ್ಳರ್ಪ್ಪಾಡಿ ಸಂವಾದ ಕಾರ್ಯಕ್ರಮ ನಿರ್ವಹಿಸಿದರು.

    ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್ ರಾವ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ಉಪಪ್ರಾಂಶುಪಾಲೆಯಾದ ಪ್ರೊ. ಗೀತಾಲಕ್ಷ್ಮೀ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ಧರ್ಮರಾಜ್‌ ಕೆ., ಕಾರ್ಯ ನಿರ್ವಹಣಾಧಿಕಾರಿಗಳಾದ ರಮೇಶ್ ನಾಯಕ್, ಅರ್ಟ್ಸ್ ಕ್ಲಬ್ ಸಂಯೋಜಕಿಯಾದ ಅಕ್ಷತಾ ಆಳ್ವ, ಎನ್‌.ಎಸ್‌.ಎಸ್. ಯೋಜನಾಧಿಕಾರಿಗಳಾದ ಮಿಥುನ್ ವೇಣುಗೋಪಾಲ್‌, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಿಜೇಶ್‌ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ವಿದ್ಯಾರ್ಥಿಗಳು ಭಾಗವಹಿಸಿದರು. ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಚಂದ್ರು ಹೆಗ್ಡೆ ಸ್ವಾಗತಿಸಿ, ಮಂಗಳ ಕಾಲೇಜ್ ಆಫ್ ಅಲೈಡ್‌ ಹೆಲ್ತ್ ಸೈನ್ಸಸ್ ನ ಪ್ರಾಂಶುಪಾಲೆ ಪ್ರೊ. ಪ್ರತಿಜ್ಞಾ ಸುಹಾಸಿನಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಶ್ರೀ ರಾಮಚಂದ್ರ ಹೆಗಡೆಯವರಿಗೆ ‘ಯಕ್ಷ ಸಾಧಕ’ ಪ್ರಶಸ್ತಿ ಪ್ರದಾನ  
    Next Article ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ‘ಭ್ರಾಮರೀ ಯಕ್ಷವೈಭವ’
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.