Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನ ಕಿರು ರಂಗಮಂದಿರ ದಲ್ಲಿ ‘ಮಥನ’ | ಜೂನ್ 29ರಂದು
    Drama

    ಮೈಸೂರಿನ ಕಿರು ರಂಗಮಂದಿರ ದಲ್ಲಿ ‘ಮಥನ’ | ಜೂನ್ 29ರಂದು

    June 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಶ್ರೀ ಗುರು ಕಲಾ ಶಾಲೆ ಅರ್ಪಿಸುವ ಎಚ್. ಎಸ್.ಕವಿತಾ ಧನಂಜಯ ಸಂಗೀತ ಮತ್ತು ನಿರ್ದೇಶನದ ‘ಮಥನ’ ನಾಟಕವು ದಿನಾಂಕ 29-06-2023 ರಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರ ದಲ್ಲಿ ಪ್ರದರ್ಶನಗೊಳ್ಳಲಿದೆ.
    ನಾಟಕದ ಬಗ್ಗೆ:
    ಪ್ರಸ್ತುತ ನಾಟಕವು ಎರಡು ಪ್ರಮುಖ ಪಾತ್ರಗಳಾದ ಕುಂತಿ ಮತ್ತು ದ್ರೌಪದಿಯನ್ನು ಕೇಂದ್ರೀಕರಿಸಿ ರಚಿತವಾದ ನಾಟಕವಾಗಿದೆ. ಇಬ್ಬರ ಸಂಭಾಷಣೆಯಲ್ಲಿ ಮಹಾಭಾರತದ ಅನೇಕ ಸಂಗತಿಗಳು ಪ್ರಸ್ತಾಪವಾಗುತ್ತವೆ. ಇಬ್ಬರ ನಡುವಿನ ಮಾನಸಿಕ ಸಂಘರ್ಷವನ್ನು ನಾಟಕ ಸಶಕ್ತವಾಗಿ ತೆರೆದಿಡುತ್ತದೆ. ಕುಂತಿಗೆ ದ್ರೌಪದಿಯ ಮೇಲೆ ಬಹಳ ಪ್ರೀತಿ ಮತ್ತು ವಿಶ್ವಾಸ. ಐವರು ಪಾಂಡವರನ್ನು ಒಂದೇ ಸಮನಾಗಿ ಹಿಡಿದಿಟ್ಟಿದ್ದಾಳೆ ಪಾಂಚಾಲಿ ಎಂಬ ಹೆಮ್ಮೆ ಕುಂತಿಗೆ. ಕುರುಕ್ಷೇತ್ರ ಯುದ್ಧ ಆಗದಂತೆ ತಡೆಯುವ ದೊಡ್ಡ ಜವಾಬ್ದಾರಿ ದ್ರೌಪದಿಯ ಮೇಲಿದೆ. ಅವಳಿಂದ ಆರಂಭವಾದ ಯುದ್ಧದ ಕಾರ್ಮೋಡ ಅವಳಿಂದಲೇ ತಿಳಿಯಾಗಬೇಕು. ಅದಕ್ಕಾಗಿ ಅವಳು ಪಂಚ ಪಾಂಡವರ ಜೊತೆ ಆರನೆಯವನಾದ ಕರ್ಣನನ್ನೂ ಪತಿಯನ್ನಾಗಿ ಸ್ವೀಕರಿಸಬೇಕು ಎಂಬುದು ಕುಂತಿಯ ವಾದ. ಕೃಷ್ಣನಿಗೆ ಅಸಾಧ್ಯವಾದದ್ದು ಕೃಷ್ನೆಗೆ ಸಾಧ್ಯವಾಗುತ್ತದೆ ಎಂಬ ನಂಬಿಕೆ ಕುಂತಿಯದು. ಹೆಣ್ಣು ಎಲ್ಲರನ್ನೂ ಪೊರೆಯುವವಳು, ಕೊಲ್ಲುವ ಮನಸ್ಥಿತಿ ಅವಳದ್ದಲ್ಲ. ಭರತವರ್ಷದ ಭವಿಷ್ಯ ಪಾಂಚಾಲಿಯ ಕೈಯಲ್ಲಿದೆ ಎಂಬ ಕುಂತಿಯ ಮಾತು ಪರಿಣಾಮಕಾರಿ ಎನಿಸುತ್ತದೆ. ಹೀಗೆ ಯುದ್ಧವನ್ನು ನಿಲ್ಲಿಸುವ ಯೋಚನೆಯ ಹಿನ್ನೆಲೆಯಲ್ಲಿ ಅವರಿಬ್ಬರ ಬದುಕಿನ ಅನೇಕ ವಿಚಾರಗಳು ಇಬ್ಬರ ಮಧ್ಯೆ ಬಂದು ಹೋಗುತ್ತವೆ. ಇಬ್ಬರ ಸಮರ್ಥನೆಗಳು, ನಿರ್ಧಾರಗಳು ಮತ್ತು ಯೋಚನೆಗಳು ನಾಟಕದಲ್ಲಿ ಅತ್ಯಂತ ಸಮರ್ಥವಾಗಿ ಬಿಂಬಿತವಾಗಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರಸಾರಾಂಗದಿಂದ ಏಳು ಕನ್ನಡ ಭಾಷಾ ಪಠ್ಯಪುಸ್ತಕ ಬಿಡುಗಡೆ
    Next Article ದುಬಾಯಿಯಲ್ಲಿ ಯಕ್ಷಗಾನ ಸಾಧಕರಿಗೆ ಸನ್ಮಾನ, ವಿಂಶತಿ ಉತ್ಸವ ಕಾರ್ಯಕ್ರಮ “ಯಕ್ಷ ಮದ್ದಳೆ”
    roovari

    Add Comment Cancel Reply


    Related Posts

    ನಾಟಕ ವಿಮರ್ಶೆ | ಕಣ್ಮನ ಸೆಳೆಯುವ ‘ಮಹಾಯುಗ’

    February 18, 2026

    ಬೆಂಗಳೂರಿನ ವಾಡಿಯ ಸಭಾಂಗಣದಲ್ಲಿ ‘ಜ್ಞಾನ ದೇಗುಲ’ ನಾಟಕ ಪ್ರದರ್ಶನ | ಫೆಬ್ರವರಿ 20

    February 17, 2026

    ಕೊಡಗು ಕ.ಸಾ.ಪ.ದಿಂದ ಮುಕ್ತ ನಾಟಕ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 17, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.