Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025

    ಬಹುವಚನಂನ ಪದ್ಮಿನೀ ಸಭಾಭವನದಲ್ಲಿ ‘ಶಾಸ್ತ್ರೀಯ ಸಂಗೀತ ಕಛೇರಿ’ | ಡಿಸೆಂಬರ್ 14

    December 13, 2025

    ಸಾಧಕರಿಗೆ ‘ಅಜಿತ್ ಕುಮಾರ್ ಸ್ಮಾರಕ ಪ್ರಶಸ್ತಿ’ ಪ್ರದಾನ | ಡಿಸೆಂಬರ್ 14

    December 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಮನೆಯ ಮನುಜ ನೇಹಿಗ ರಾಜ್ಯಮಟ್ಟಕ್ಕೆ ಆಯ್ಕೆ
    Folk

    ರಂಗಮನೆಯ ಮನುಜ ನೇಹಿಗ ರಾಜ್ಯಮಟ್ಟಕ್ಕೆ ಆಯ್ಕೆ

    December 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಭಾರತ್ ಸ್ಕೌಡ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆಯು ಸರಕಾರಿ ಪದವಿಪೂರ್ವ ಕಾಲೇಜು ಮಡಿಕೇರಿ ಇಲ್ಲಿ ನಡೆಸಿದ ಮೈಸೂರು ವಿಭಾಗೀಯ ಮಟ್ಟದ, ರೋವರ್ ರೇಂಜರ್ಸ್ ವಿಭಾಗದ ಗೀತಗಾಯನ ಸಮೂಹ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜನ್ನು ಪ್ರತಿನಿಧಿಸಿದ ಸುಳ್ಯ ರಂಗಮನೆಯ ಮನುಜ ನೇಹಿಗನ ತಂಡವು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದಕ್ಕೂ ಮೊದಲು ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು, ನಂತರ ಮಂಗಳೂರು ಪಿಲಿಕುಳದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಬಹುಮಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು. ದಿನಾಂಕ 13 ಜನವರಿ 2025ರಂದು ರಾಜ್ಯಮಟ್ಟದ ಸ್ಪರ್ಧೆಯು ಬಳ್ಳಾರಿಯಲ್ಲಿ ನಡೆಯಲಿದೆ.

    ಇದಲ್ಲದೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕರ್ನಾಟಕ ಸರಕಾರ ಇವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ಸ್ಪರ್ಧೆಯ ವೈಯ್ಯಕ್ತಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಅದಕ್ಕೂ ಮೊದಲು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಇದೀಗ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು. ದಿನಾಂಕ 15 ಡಿಸೆಂಬರ್ 2025ರಂದು ರಾಜ್ಯಮಟ್ಟದ ಸ್ಪರ್ಧೆಯು ತುಮಕೂರಲ್ಲಿ ನಡೆಯಲಿದೆ. ನಾಟಕ, ಸಂಗೀತ, ಯಕ್ಷಗಾನ, ಜಾನಪದ, ಜಾದೂ ಇತ್ಯಾದಿ ಬಹುಮುಖ ಪ್ರತಿಭೆ ಹೊಂದಿದ ಮನುಜ ನೇಹಿಗ ರಂಗಮನೆಯ ರೂವಾರಿ, ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಹಾಗೂ ಡಾ. ಮೌಲ್ಯ ಇವರ ಪುತ್ರರಾಗಿದ್ದಾರೆ. ಇವರ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

    baikady folk Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನ | ಡಿಸೆಂಬರ್ 16
    Next Article ಸಾಧಕರಿಗೆ ‘ಅಜಿತ್ ಕುಮಾರ್ ಸ್ಮಾರಕ ಪ್ರಶಸ್ತಿ’ ಪ್ರದಾನ | ಡಿಸೆಂಬರ್ 14
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025

    ಬಹುವಚನಂನ ಪದ್ಮಿನೀ ಸಭಾಭವನದಲ್ಲಿ ‘ಶಾಸ್ತ್ರೀಯ ಸಂಗೀತ ಕಛೇರಿ’ | ಡಿಸೆಂಬರ್ 14

    December 13, 2025

    ಸಾಧಕರಿಗೆ ‘ಅಜಿತ್ ಕುಮಾರ್ ಸ್ಮಾರಕ ಪ್ರಶಸ್ತಿ’ ಪ್ರದಾನ | ಡಿಸೆಂಬರ್ 14

    December 13, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನ | ಡಿಸೆಂಬರ್ 16

    December 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.