Subscribe to Updates

    Get the latest creative news from FooBar about art, design and business.

    What's Hot

    ತಿಂಗಳ ನಾಟಕ ಸಂಭ್ರಮದಲ್ಲಿ ‘ದಿ ಫೈಯರ್’ ನಾಟಕ ಪ್ರದರ್ಶನ | ಮೇ 17

    May 15, 2025

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಮನುಶ್ರೀ ದತ್ತಿ ಪ್ರಶಸ್ತಿ’ಗೆ ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ಆಯ್ಕೆ
    Awards

    ‘ಮನುಶ್ರೀ ದತ್ತಿ ಪ್ರಶಸ್ತಿ’ಗೆ ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ಆಯ್ಕೆ

    May 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥಸಾರಥಿ ‘ಮನುಶ್ರೀ ದತ್ತಿ ಪ್ರಶಸ್ತಿ’ಗೆ ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀಮತಿ ಮನೋಹರಿ ಪಾರ್ಥಸಾರಥಿಯವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬರಹಗಾರರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.

    ಬೆಳ್ತಂಗಡಿಯ ತೆಂಕಕಾರಂದೂರಿನವರಾದ ಪ. ರಾಮಕೃಷ್ಣ ಶಾಸ್ತ್ರಿಗಳು ಕನ್ನಡ ಸಾಹಿತ್ಯ ಕಂಡ ವಿಶಿಷ್ಟ ಲೇಖಕರು. ವೃತ್ತಿಯಲ್ಲಿ ಕೃಷಿಕರಾದ ಇವರು ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿಕರು. 1964ರಿಂದ ಹಿಡಿದು ಇಂದಿನವರೆಗೂ ದಣಿವರಿಯದೆ ನಿರಂತರವಾಗಿ ಬರೆಯುತ್ತಾ ಬರುತ್ತಿರುವ ಇವರ ಹನ್ನೆರಡು ಸಾವಿರಕ್ಕೂ ಹೆಚ್ಚು ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ವಿವಿಧ ಪ್ರಾಕಾರದಲ್ಲಿ 104 ಕೃತಿಗಳು ಅಚ್ಚಾಗಿವೆ. ಇದರಲ್ಲಿ ಮಕ್ಕಳಿಗಾಗಿಯೇ 50 ಕಥಾ ಸಂಕಲನಗಳಿರುವುದು ವಿಶೇಷ. ತುಳು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿಯೂ ಕಥೆ-ಕಾದಂಬರಿಗಳನ್ನು ಬರೆದಿರುವ ಇವರು ವಿಜ್ಞಾನ, ಅಧ್ಯಾತ್ಮ, ವೈಚಾರಿಕ ಕ್ಷೇತ್ರಗಳಲ್ಲಿಯೂ ಬರಹಗಳನ್ನು ಮಾಡಿದ್ದಾರೆ. ಮೂವತ್ತಕ್ಕೂ ಹೆಚ್ಚು ವಿವಿಧ ಪುರಸ್ಕಾರಗಳನ್ನು ಪಡೆದಿರುವ ರಾಮಕೃಷ್ಣ ಶಾಸ್ತ್ರಿಗಳು ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನೂ ವಹಿಸಿದ್ದಾರೆ. ಸಾಹಿತ್ಯದ ಜೊತೆಗೆ ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಅವರು ಹೆಸರನ್ನು ಮಾಡಿದ್ದಾರೆ. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿಶ್ವವಿದ್ಯಾಲಯದ ಪದವಿ ತರಗತಿಗಳಿಗೆ ಪಠ್ಯವಾಗಿದೆ.

    ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿಯ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ನೇ.ಭ. ರಾಮಲಿಂಗ ಶೆಟ್ಟಿ ಮತ್ತು ದತ್ತಿದಾನಿಗಳ ಪರವಾಗಿ ಡಾ. ವರದಾ ಶ್ರೀನಿವಾಸ್ ಭಾಗವಹಿಸಿದ್ದರು. ದತ್ತಿ ಪ್ರಶಸ್ತಿ ಪುರಸ್ಕೃತರಾದ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಅಭಿನಂದಿಸುತ್ತದೆ ಮತ್ತು ಅವರ ಸಾಧನೆಯ ಹಾದಿ ಇನ್ನಷ್ಟು ಉಜ್ವಲವಾಗಲಿ ಎಂದು ಆಶಿಸುತ್ತದೆ ಎಂಬುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಡಾ. ಶ್ರೀಧರ ಎಚ್.ಜಿ. ಅವರ ‘ಶಾಸ್ತ್ರ ಸಂಕಲ್ಪ’ : ಬತ್ತದ ಸೆಲೆ
    Next Article ಕಟೀಲಿನಲ್ಲಿ ಸಂಗೀತ ಶಿಬಿರ ಮತ್ತು ಗೋಷ್ಠಿ ಗಾಯನ | ಮೇ 11, 12 ಮತ್ತು 13 
    roovari

    Add Comment Cancel Reply


    Related Posts

    ಸಾಹಿತಿ ರತ್ನ ಕುಮಾರ್ ಎಂ. ಇವರಿಗೆ ಕ.ಸಾ.ಪ.ದಿಂದ ಸನ್ಮಾನ

    May 15, 2025

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಸುಳ್ಯದ ಕನ್ನಡ ಭವನದಲ್ಲಿ ಮಕ್ಕಳ ಕಥಾ ರಚನೆ ಕಾರ್ಯಾಗಾರ | ಮೇ 30

    May 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.