Subscribe to Updates

    Get the latest creative news from FooBar about art, design and business.

    What's Hot

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025

    ಯಕ್ಷನಿಧಿ ಡೈರಿ ಬಿಡುಗಡೆ ಮತ್ತು ಕಲಾವಿದರಿಗೆ ಬಸ್ ಪಾಸ್ ವಿತರಣೆ

    December 18, 2025

    ನೃತ್ಯ ವಿಮರ್ಶೆ | ಕಾಮನಬಿಲ್ಲಿನ ರಂಗು ಬಿಂಬಿಸಿದ ‘ನೃತ್ಯ ದರ್ಪಣ್’ದ ‘ತಾಳ್ ತರಂಗ್’

    December 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಭೂಮಿ ಉಡುಪಿ ಆಶ್ರಯದಲ್ಲಿ ‘ಮರವೇ ಮರ್ಮರವೇ’ ಬೀದಿ ನಾಟಕ ಪ್ರದರ್ಶನ
    Drama

    ರಂಗಭೂಮಿ ಉಡುಪಿ ಆಶ್ರಯದಲ್ಲಿ ‘ಮರವೇ ಮರ್ಮರವೇ’ ಬೀದಿ ನಾಟಕ ಪ್ರದರ್ಶನ

    December 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಂಗಭೂಮಿ ಉಡುಪಿ ಆಶ್ರಯದಲ್ಲಿ ಕಿನ್ನರ ಮೇಳ ತುಮರಿ ಪ್ರಸ್ತುತಿಯಲ್ಲಿ ರಥಬೀದಿಯ ಪೇಜಾವರ ಮಠದ ಮುಂಭಾಗದಲ್ಲಿ ದಿನಾಂಕ 14 ಡಿಸೆಂಬರ್ 2025ರಂದು ಡಾ. ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ‘ಮರವೇ ಮರ್ಮರವೇ!’ ಬೀದಿ ನಾಟಕದ ಪ್ರಥಮ ಪ್ರದರ್ಶನ ಹಾಗೂ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಮಾತನಾಡಿ “ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ. 60 ಸಂವತ್ಸರಗಳನ್ನು ಕಂಡಿರುವ ರಂಗಭೂಮಿ ಉಡುಪಿ ವತಿಯಿಂದ ಸಾಮಾಜಿಕ ಜಾಗೃತಿ, ಸಂದೇಶವನ್ನು ಸಾರುವ ಬೀದಿ ನಾಟಕಗಳನ್ನು ಮಾಡಿಸಿಕೊಂಡು ಬರುತ್ತಿದ್ದು, ಇತ್ತೀಚಿಗೆ ಕೋವಿಡ್ ಕಾಲದಲ್ಲಿ ನಡೆದಿರಲಿಲ್ಲ. ಇದೀಗ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಡಾ. ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ‘ಮರವೇ ಮರ್ಮವರವೇ !’ ನಾಟಕವನ್ನು ತುಮರಿಯ ಕಿನ್ನರ ಮೇಳ ಸಂಸ್ಥೆಯ ಕಲಾವಿದರಿಂದ ಪ್ರದರ್ಶನ ಮಾಡಲಾಗುತ್ತಿದೆ. ನಾಡು ಬೆಳೆದಂತೆ ಕಾಡು ಕಣ್ಮರೆಯಾಗುತ್ತಿರುವ ಈ ಆಧುನಿಕ ಕಾಲದಲ್ಲಿ ನಮ್ಮನಮ್ಮ ಮನೆ ಪರಿಸರದಲ್ಲಿ ಗಿಡಮರಗಳನ್ನು ಬೆಳೆಸುವ ಪ್ರವೃತ್ತಿಯನ್ನು ನಾವು ಬೆಳೆಸಿಕೊಳ್ಳಬೇಕು. ಮನೆಮುಂದಿನ ತುಳಸಿ ಗಿಡದಿಂದ ಹಿಡಿದು ನಿತ್ಯೋಪಯೋಗಿ ಗಿಡಗಳನ್ನು ಬೆಳೆಸಿ ಅವುಗಳನ್ನು ನಮ್ಮ ಜೀವನದ ಅಂಗವಾಗಿ ಮಾಡಿಕೊಂಡರೆ ನಮ್ಮ ಮನಸ್ಸಿಗೂ ನೆಮ್ಮದಿ ದೊರೆಯುತ್ತದೆ” ಎಂದು ಹೇಳಿದರು.

    ಕಾರ್ಯಕ್ರಮವನ್ನು ಉದ್ಯಮಿ ರಂಜನ್ ಕಲ್ಕೂರ ಇವರು ತಮ್ಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ರಂಗಭೂಮಿ ಉಡುಪಿ ಇದರ ಉಪಾಧ್ಯಕ್ಷರುಗಳಾದ ರಾಜಗೋಪಾಲ ಬಲ್ಲಾಳ್ ಮತ್ತು ಬಾಸ್ಕರ ರಾವ್ ಕಿದಿಯೂರು, ಗಿರಿಜಾ ಸರ್ಜಿಕಲ್ಸ್ ಮಾಲೀಕ ರವೀಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರಂಗಭೂಮಿಯ ಪದಾಧಿಕಾರಿಗಳಾದ ಜಿ.ಪಿ. ಪ್ರಭಾಕರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿವೇಕಾನಂದ ಎನ್. ಕಾರ್ಯಕ್ರಮ ನಿರೂಪಿಸಿದರು. ನಾಟಕಕ್ಕೆ ಕೆ.ಜಿ. ಕೃಷ್ಣಮೂರ್ತಿ, ಸಜಿ ಆರ್. ತುಮರಿ ಹಾಗೂ ಅರುಣ ಎನ್. ಇವರ ನಿರ್ದೇಶನವಿದೆ. ಸಂಗೀತ ದಿಗ್ವಿಜಯ ಹೆಗ್ಗೋಡು ಹಾಗೂ ಪರಿಕಲ್ಪನೆ ಮತ್ತು ವಿನ್ಯಾಸವನ್ನು ಕೆ.ಜಿ. ಕೃಷ್ಣಮೂರ್ತಿಯವರೇ ನೀಡಿದ್ದಾರೆ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ರಾಮಾಶ್ರಮ ಶಾಲೆಯಲ್ಲಿ 115ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’
    Next Article ನೃತ್ಯ ವಿಮರ್ಶೆ | ಕಾಮನಬಿಲ್ಲಿನ ರಂಗು ಬಿಂಬಿಸಿದ ‘ನೃತ್ಯ ದರ್ಪಣ್’ದ ‘ತಾಳ್ ತರಂಗ್’
    roovari

    Add Comment Cancel Reply


    Related Posts

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025

    ಯಕ್ಷನಿಧಿ ಡೈರಿ ಬಿಡುಗಡೆ ಮತ್ತು ಕಲಾವಿದರಿಗೆ ಬಸ್ ಪಾಸ್ ವಿತರಣೆ

    December 18, 2025

    ನೃತ್ಯ ವಿಮರ್ಶೆ | ಕಾಮನಬಿಲ್ಲಿನ ರಂಗು ಬಿಂಬಿಸಿದ ‘ನೃತ್ಯ ದರ್ಪಣ್’ದ ‘ತಾಳ್ ತರಂಗ್’

    December 18, 2025

    ಶ್ರೀ ರಾಮಾಶ್ರಮ ಶಾಲೆಯಲ್ಲಿ 115ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’

    December 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.