Subscribe to Updates

    Get the latest creative news from FooBar about art, design and business.

    What's Hot

    ಪಾಣೆಮಂಗಳೂರಿನಲ್ಲಿ ‘ಕಥಾಬಿಂದು ಸಾಹಿತ್ಯ ಸಂಭ್ರಮ -2026’ | ಜನವರಿ 04

    January 3, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಸುನಾದ ಸಂಗೀತ ಕಲಾಶಾಲೆಯ ಸುನಾದ ಸಂಗೀತೋತ್ಸವ ಸಂಭ್ರಮ

    January 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮರವೂರಿನಲ್ಲಿ ‘ಮರಿಯಲದ ಮಿನದನ’ | ಜುಲೈ 9ರಂದು
    Competition

    ಮರವೂರಿನಲ್ಲಿ ‘ಮರಿಯಲದ ಮಿನದನ’ | ಜುಲೈ 9ರಂದು

    June 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಆಶ್ರಯದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಜರಗುವ ತುಳುವರ ಮೋಜು – ಮಸ್ತಿಯ ಕಾರ್ಯಕ್ರಮ ‘ಮರಿಯಲದ ಮಿನದನ’ವನ್ನು ಈ ಬಾರಿ ಜುಲೈ 9ರಂದು ಭಾನುವಾರ ಮರವೂರು ನದಿ ಕಿನಾರೆಯ ಗ್ರಾಂಡ್ ಬೇ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷ ಎ.ಸದಾನಂದ ಶೆಟ್ಟಿ ಹೇಳಿದ್ದಾರೆ. ನಗರದ ಬಲ್ಮಠ ಕುಡ್ಲ ಪೆವಿಲಿನ್ ನ ಸದಾಶಯ ಕಚೇರಿಯಲ್ಲಿ ಜರಗಿದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪೂರ್ವಭಾವಿ ಸಭೆಯಲ್ಲಿ ಅವರು ಈ ವಿಷಯವನ್ನು ಪ್ರಕಟಿಸಿದರು.

    ತುಳುನಾಡಿನಲ್ಲಿ ಎಲ್ಲ ಋತುಗಳಲ್ಲೂ ವಿಶೇಷವಾದ – ಹಬ್ಬ ಆಚರಣೆಗಳು ನಡೆಯುತ್ತವೆ. ಸಂಸ್ಕೃತಿ – ಸಂಪ್ರದಾಯ, ಆಚಾರ – ವಿಚಾರ, ಆಟ – ಕೂಟ ಮತ್ತು ತಿಂಡಿ – ತಿನಿಸುಗಳಲ್ಲಿ ತುಳು ಜನರ ಪ್ರಾದೇಶಿಕ ಅನನ್ಯತೆ ಕಂಡುಬರುತ್ತದೆ. ಅವುಗಳನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಸಲುವಾಗಿ ಕಾಲಕಾಲಕ್ಕೆ ಇಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ’ ಎಂದವರು ತಿಳಿಸಿದರು.

    ಕಾರ್ಯಕ್ರಮ ವೈವಿಧ್ಯ:
    ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ. ಶೆಟ್ಟಿ ಮಾತನಾಡಿ ಮಿನದನದಲ್ಲಿ ತುಳುನಾಡಿನ ವಿವಿಧ ಬಗೆಯ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ಅದರಲ್ಲಿ ಸಮುದಾಯದ ಎಲ್ಲರೂ ಪಾಲ್ಗೊಳ್ಳುವಂತೆ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಇದರೊಂದಿಗೆ ಮಹಿಳೆಯರಿಗೆಂದೇ ಪ್ರತ್ಯೇಕ ಆಟಗಳನ್ನು ಸ್ಪರ್ಧಾ ರೂಪದಲ್ಲಿ ಸಂಘಟಿಸಲಾಗುವುದು’ ಎಂದರು.

    ಸಂಘಟನಾ ಕಾರ್ಯದರ್ಶಿ ರಾಜಗೋಪಾಲ ರೈ ಅವರು ದಿನವಿಡೀ ನಡೆಯುವ ಕಾರ್ಯಕ್ರಮಗಳು, ಭಾಗವಹಿಸುವ ಅತಿಥಿಗಳು ಹಾಗೂ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸುವ ಬಗ್ಗೆ ವಿವರ ನೀಡಿದರು. ಪ್ರಮುಖರಾದ ಸುರೇಶ್ಚಂದ್ರ ಶೆಟ್ಟಿ, ಮತ್ತು ಮದಲಾಕ್ಷಿ ರೈ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಭೆಯಲ್ಲಿ ಪಾಲ್ಗೊಂಡ ಕೆಲವು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

    ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಸ್ವಾಗತಿಸಿದರು. ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ವಂದಿಸಿ ಮಹಿಳಾ ವಿಭಾಗದ ಆರತಿ ಆಳ್ವ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದ ಸಾಹಿತ್ಯ ಗಂಗಾ ವೇದಿಕೆ ನಡೆಸಿದ ಕಾಸರಗೋಡು ಜಿಲ್ಲಾ ಮಟ್ಟದ ಕವನ ಸ್ಪರ್ಧೆಯ ಫಲಿತಾಂಶ
    Next Article ಹಿರಿಯ ಲೇಖಕಿ ಡಾ. ಪ್ರಮೀಳಾ ಮಾಧವ್ ಅವರಿಗೆ ನಾಡೋಜ ಕಯ್ಯಾರ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10

    January 1, 2026

    ‘ಕಡೆಂಗೋಡ್ಲು ಪ್ರಶಸ್ತಿ’ಗೆ ಕವನ ಸಂಕಲನಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15

    December 31, 2025

    ಉಡುಪಿಯಲ್ಲಿ ಸಂಪನ್ನಗೊಂಡ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’

    December 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.