ಬೆಂಗಳೂರು : ಸಂಚಲನ ಮೈಸೂರು (ರಿ.) ಮೈಸೂರು ಮತ್ತು ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ (ರಿ.) ಇದರ ವತಿಯಿಂದ ಒಡನಾಡಿ ಬಂಧು ಸಿಜಿಕೆ – 75 ‘ಮಾಸದ ನೆನೆಪು ಸರಣಿ ಕಾರ್ಯಕ್ರಮ 03’ವನ್ನು ದಿನಾಂಕ 11 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಚಲನ ಮೈಸೂರು ರಂಗ ತಂಡ ಅಭಿನಯಿಸುವ ಡಾ. ಚಂದ್ರಶೇಖರ ಕಂಬಾರರ ‘ಹರಕೆಯ ಕುರಿ’ ನಾಟಕ ದೀಪಕ್ ಮೈಸೂರು ಇವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.