Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ.ನಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರರ 133ನೆಯ ಜನ್ಮದಿನೋತ್ಸವ
    Literature

    ಕ.ಸಾ.ಪ.ನಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರರ 133ನೆಯ ಜನ್ಮದಿನೋತ್ಸವ

    June 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರರ 133ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 06-06-2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಉತ್ತಮ ಆಡಳಿತಗಾರರಾಗಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸಿದರು, ಜೀವನ ಪತ್ರಿಕೆಯನ್ನು ನಡೆಸಿದರು. ಬರಹಗಾರರಿಗೆ ಬೆಂಬಲವಾಗಿ, ಪುಸ್ತಕ ಪ್ರಕಾಶನಕ್ಕೆ ಸಹಾಯ ಮಾಡಿದ್ದರಿಂದ ಕನ್ನಡ ಸಾಹಿತ್ಯ ಬಹುಮುಖಿಯಾಗಿ ಬೆಳೆಯುವುದು ಸಾಧ್ಯವಾಯಿತು. ಕರ್ಣಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಬೇಕು ಎಂದು ಸೂಚಿಸಿದವರಲ್ಲಿ ಮಾಸ್ತಿಯವರೂ ಪ್ರಮುಖರು. 1943ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ಮಾಸ್ತಿಯವರ ಮುಖ್ಯವಾದ ಕೊಡುಗೆ ಕನ್ನಡ ಸಾಹಿತ್ಯ ಪರಿಷತ್ತಿನ ವಿಕೇಂದ್ರೀಕರಣ. ಅವರ ಕಾಲದಲ್ಲಿ ಸದಸ್ಯರ ಸಂಖ್ಯೆ 2,500ಕ್ಕೆ ಏರಿತು. ಮಹಿಳಾ ಶಾಖೆ ಕೂಡ ಆರಂಭವಾಯಿತು. ‘ಕನ್ನಡ ಸರಸ್ವತಿ ಹಳ್ಳಿಗೆ ಬಂದಳು’ ಎನ್ನುವ ಯೋಜನೆಯಡಿ ಹಳ್ಳಿ-ಹಳ್ಳಿಗಳಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆದವು. ಮಾಸ್ತಿಯವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಕಲಾಪಗಳಿಗೆ ಎಷ್ಟೇ ದೂರ ಪ್ರಯಾಣ ಮಾಡಿದರೂ ಪ್ರಯಾಣ ಭತ್ಯವನ್ನು ಪಡೆಯುತ್ತಿರಲಿಲ್ಲ”ವೆನ್ನುತ್ತಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಮಾಸ್ತಿಯವರ ಕೊಡುಗೆಗಳನ್ನು ಸ್ಮರಿಸಿಕೊಂಡರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರಾದ ಶಿವಾನಂದ ಎಚ್. ಕಲಕೇರಿಯವರು ಮಾತನಾಡಿ “ಮಾಸ್ತಿಯವರು ಕನ್ನಡದ ಮೊದಲ ಕಥೆಗಾರರಲ್ಲ, ಆದರೆ ಅವರಷ್ಟು ಉತ್ತಮ ಕಥೆಗಳನ್ನು ಕನ್ನಡದಲ್ಲಿ ಬರೆದವರು ವಿರಳ. ಕಥೆಗಳಿಗೂ ಮಾಸ್ತಿಯವರಿಗೂ ಅವಿನಾಭಾವ ಸಂಬಂಧ. ಮಾಸ್ತಿಯವರ ಸಣ್ಣಕಥೆಗಳ ಭಾಷೆ, ನಿರೂಪಣೆ, ಶೈಲಿ ಸರಳ. ಕನ್ನಡ ಕಥಾಬ್ರಹ್ಮ, ಸಣ್ಣಕಥೆಗಳ ಪಿತಾಮಹ, ಕಥೆಗಾರರ ಅಣ್ಣ ಎಂಬ ಹೇಳಿಕೆಗಳು ಇದಕ್ಕೆ ಸಾಕ್ಷಿ” ಎಂದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗ ಶೆಟ್ಟಿ, ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ಅವರು ಸೇರಿದಂತೆ ಪರಿಷತ್ತಿನ ಸಿಬ್ಬಂದಿ ವರ್ಗದವರು ಮತ್ತು ಮಾಸ್ತಿಯವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಚಡಗ ಕಾದಂಬರಿ ಪ್ರಶಸ್ತಿ’ಗೆ ಅರ್ಹ ಕಾದಂಬರಿಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 30
    Next Article ಮಂಗಳೂರಿನ ಶಕ್ತಿನಗರದಲ್ಲಿ ಬೆಳಕಿನ ವಿನ್ಯಾಸದ ಕಾರ್ಯಾಗಾರ | ಜೂನ್ 25, 26 ಮತ್ತು 27
    roovari

    Add Comment Cancel Reply


    Related Posts

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications