Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರಸಿದ್ಧ ಯಕ್ಷಗಾನ ಕಲಾವಿದ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಗುರು ಮಟಪಾಡಿ ವೀರಭದ್ರ  ನಾಯಕ್ ಪ್ರಶಸ್ತಿ 
    Awards

    ಪ್ರಸಿದ್ಧ ಯಕ್ಷಗಾನ ಕಲಾವಿದ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಗುರು ಮಟಪಾಡಿ ವೀರಭದ್ರ  ನಾಯಕ್ ಪ್ರಶಸ್ತಿ 

    July 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಉಡುಪಿ : ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ (ರಿ.)  ಪ್ರಾಯೋಜಿತ 2024ನೇ ಸಾಲಿನ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಬಣ್ಣದ ವೇಷಧಾರಿ ಶ್ರೀ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯ ಅವರು ಆಯ್ಕೆಯಾಗಿರುತ್ತಾರೆ
    ಯಕ್ಷಗಾನ ಕೇಂದ್ರ ಇಂದ್ರಾಳಿ ಇದರ ಸಹಯೋಗದಲ್ಲಿ ಕೊಡಮಾಡುವ ಈ ಪ್ರಶಸ್ತಿಯು ರೂಪಾಯಿ 10,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು 09 ನವಂಬರ್ 2024ರಂದು ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ  ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಇವರ ಸಹಯೋಗದಲ್ಲಿ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
    ಬಡಗುತಿಟ್ಟು ಯಕ್ಷಗಾನ ಪ್ರಪಂಚದಲ್ಲಿ ಬಣ್ಣದ ವೇಷಧಾರಿಯಾಗಿ ವಿಖ್ಯಾತರಾಗಿರುವ ಶ್ರೀ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯ ಇವರು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಎಲ್ಲಂಪಳ್ಳಿ ಎಂಬಲ್ಲಿ 1956ರಲ್ಲಿ ಜನಿಸಿದರು.  ಉಡುಪಿ ಬಸವ, ವಂಡ್ಸೆ ನಾರಾಯಣ ಗಾಣಿಗ, ಪೇತ್ರಿ ಮಾಧವ ನಾಯ್ಕ್ ಇವರಿಂದ ಪ್ರಾಥಮಿಕ ನೃತ್ಯಾಭ್ಯಾಸ ಮಾಡಿ ಬಾಲಗೋಪಾಲನಾಗಿ ಮಂದಾರ್ತಿ ಮೇಳದಲ್ಲಿ ಗೆಜ್ಜೆ ಕಟ್ಟಿದರು. ನಂತರ ಉಡುಪಿ ಯಕ್ಷಗಾನ ಕೇಂದ್ರ ಇಂದ್ರಾಳಿಯಲ್ಲಿ ಯಕ್ಷಗಾನ ವಿದ್ಯೆ ಕಲಿತು ಕೇಂದ್ರದ ಖಾಯಂ ಸದಸ್ಯರಾಗಿ ಗುರು ವೀರಭದ್ರ ನಾಯಕ್, ನೀಲಾವರ ರಾಮಕೃಷ್ಣಯ್ಯ, ಹಿರಿಯಡಕ ಗೋಪಾಲರಾವ್, ಮಹಾಬಲ ಕಾರಂತ ಹಾಗೂ ವೆಂಕಟರಮಣ ಗಾಣಿಗ ಮುಂತಾದವರಿಂದ ತಾಳ ಮತ್ತು ಹೆಜ್ಜೆಗಾರಿಕೆಯಲ್ಲಿ ಪರಿಪೂರ್ಣತೆ ಸಾಧಿಸಿದರು.  ಮಂದಾರ್ತಿ, ಪೆರ್ಡೂರು ಹಾಗೂ ಸಾಲಿಗ್ರಾಮ ವೃತ್ತಿ ಮೇಳದಲ್ಲಿ 35 ವರ್ಷಗಳ ಕಾಲ ತಿರುಗಾಟ ನಡೆಸಿದ ಆಚಾರ್ಯರು ಕೋಟ ಶಿವರಾಮ ಕಾರಂತರಲ್ಲಿ ಸಾಂಪ್ರದಾಯಿಕ ಶೈಲಿಯ ಬಣ್ಣದ ಮುಖವರ್ಣಿಕೆ, ಒಡ್ಡೋಲಗ ಕ್ರಮ, ವೇಷಭೂಷಣ ನಡೆಗಳ ಕುರಿತಾದ ಸಮಗ್ರ ಅಧ್ಯಯನ ನಡೆಸಿ ಕಾರಂತರೊಂದಿಗೆ ರಷ್ಯಾ, ದುಬೈ, ಅಬುಧಾಬಿ ಸಹಿತ ವಿವಿಧ ರಾಷ್ಟ್ರಗಳಲ್ಲಿ ತಿರುಗಾಟ ನಡೆಸಿದ್ದಾರೆ. ಶೂರ್ಪನಖಾ, ರಾವಣ, ಹಿಡಿಂಬಾ  ಮುಂತಾದ ಬಣ್ಣದ ವೇಷಗಳು ಆಚಾರ್ಯರಿಗೆ ಕೀರ್ತಿ ತಂದಿವೆ.  ಇವರ ಕಲಾಸಾಧನೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸೀತಾನದಿ ಗಣಪಯ್ಯ ಶೆಟ್ಟಿ ಪ್ರಶಸ್ತಿ, ಗೋರ್ಪಾಡಿ ವಿಠಲ ಪಾಟೀಲ ಪ್ರಶಸ್ತಿ ಸಹಿತ ಹಲವಾರು ಸಂಮಾನಗಳು ಸಂದಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ ಪ್ರದಾನ ಸಮಾರಂಭ | ಜುಲೈ 28
    Next Article ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಖುಷಿ ಕನ್ನರ್ಪಾಡಿ ಇವರ ನೃತ್ಯ ಪ್ರದರ್ಶನ | ಜುಲೈ 29
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿ ಆಯ್ಕೆ

    May 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.