ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ(ರಿ.)ಕಮತಗಿ ವತಿಯಿಂದ ಕೊಡಮಾಡುವ 2025ನೇ ಸಾಲಿನ ರಾಜ್ಯಮಟ್ಟದ “ಮೇಘರತ್ನ ಪ್ರಶಸ್ತಿ”ಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರಂಗಕರ್ಮಿ, ಹಿರಿಯ ಸಾಹಿತಿ, ನಟ ಹಾಗೂ ನಾಟಕಕಾರರಾದ ಶ್ರೀ ಮಹಾಂತೇಶ ಎಂ.ಗಜೇಂದ್ರಗಡ ಅವರು ಆಯ್ಕೆಯಾಗಿದ್ದಾರೆ.
ಈ ವಾರ್ಷಿಕ ಪ್ರಶಸ್ತಿಯನ್ನು ಉತ್ತರ ಕರ್ನಾಟಕದ ಜೀವಮಾನ ಸಾಧನೆ ಮಾಡಿದ ಒಬ್ಬ ಮಹನೀಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯು ರೂಪಾಯಿ 5 ಸಾವಿರ ನಗದು ಹಾಗೂ ನೆನಪಿನ ಕಾಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ ತಿಂಗಳ ಕೊನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆಯಲಿದೆ.