Subscribe to Updates

    Get the latest creative news from FooBar about art, design and business.

    What's Hot

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ಲಿನ ಗೋವಿಂದದಾಸ ಕಾಲೇಜಿನಲ್ಲಿ ‘ಮೈಂಡ್ ಮ್ಯಾಜಿಕ್’
    Magic

    ಸುರತ್ಕಲ್ಲಿನ ಗೋವಿಂದದಾಸ ಕಾಲೇಜಿನಲ್ಲಿ ‘ಮೈಂಡ್ ಮ್ಯಾಜಿಕ್’

    April 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಸುರತ್ಕಲ್ಲಿನ ಗೋವಿಂದದಾಸ ಕಾಲೇಜಿನ ರೋಟರಾಕ್ಟ್ ಕ್ಲಬ್, ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ಶಾಸ್ತ್ರ ವಿಭಾಗ ಹಾಗೂ ರೋಟರಿ ಕ್ಲಬ್ ಸುರತ್ಕಲ್‌ ಇದರ ಆಶ್ರಯದಲ್ಲಿ ‘ಮೈಂಡ್ ಮ್ಯಾಜಿಕ್’ ವಿಶೇಷ ಕಾರ್ಯಕ್ರಮವು ದಿನಾಂಕ 17-04-2024ರಂದು ಸುರತ್ಕಲ್ಲಿನ ಗೋವಿಂದದಾಸ ಕಾಲೇಜಿನಲ್ಲಿರುವ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿಭಾಗವಹಿಸಿದ ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ಮಾತನಾಡಿ “ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಏಕಾಗ್ರತೆ ಅತ್ಯಗತ್ಯವಾಗಿದ್ದು ಸರಳ ತಂತ್ರಗಳ ಮೂಲಕ ಮನಸ್ಸಿನ ಏಕಾಗ್ರತೆ ಮತ್ತು ದೃಢತೆಯನ್ನು ಹೆಚ್ಚಿಸಿಕೊಳ್ಳಬಹುದು.” ಎಂದರು. ಮತ್ತು ವಿದ್ಯಾರ್ಥಿಗಳು ಏಕಾಗ್ರತೆಯನ್ನು ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ತಂತ್ರಗಳನ್ನು ಸರಳವಾದ ಜಾದೂಗಳ ಹಿನ್ನಲೆಯಲ್ಲಿ ಪ್ರಸ್ತುತ ಪಡಿಸಿದರು.

    ಸುರತ್ಕಲ್ ರೋಟರಿ ಕ್ಲಬ್ಬಿನ ಅಧ್ಯಕ್ಷ ರೋ. ಯೋಗೀಶ್ ಕುಳಾಯಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ “ಮನಸ್ಸಿನ ಏಕಾಗ್ರತೆಯ ವಿಧಾನಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಕಲಿಕೆಯಲ್ಲಿ ಸಾಕರಾತ್ಮಕ ಫಲಿತಾಂಶಗಳನ್ನು ಪಡೆಯಬಹುದು.” ಎಂದರು.

    ಕಾರ್ಯಕ್ರಮದಲ್ಲಿ ಉಪ ಪ್ರಾಚಾರ್ಯ ಪ್ರೊ. ನೀಲಪ್ಪ ವಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಪ್ರವೀಣ್ ಕೆ., ರೋಟರಾಕ್ಟ್ ಕ್ಲಬ್ ಸಂಯೋಜಕಿ ಶಿಲ್ಪಾರಾಣಿ ಕೆ., ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ಸಂಯೋಜಕಿ ಡಾ. ಭಾಗ್ಯಲಕ್ಷ್ಮೀ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ರೋಟರಾಕ್ಟ್ ಕ್ಲಬ್ಬಿನ ಅಧ್ಯಕ್ಷೆ ದಿಶಾ, ಸುರತ್ಕಲ್ ರೋಟರಿ ಕ್ಲಬ್ಬಿನ ಕಾರ್ಯದರ್ಶಿ ರಮೇಶ್ ರಾವ್ ಎಂ. ಮತ್ತು ನಿರ್ದೇಶಕ ಮೋಹನ್ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಪಲ್ಲವಿ ಅತಿಥಿಗಳನ್ನು ಸ್ವಾಗತಿಸಿ, ನಿರೂಪಿಸಿ, ಹಿತಾ ಉಮೇಶ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡುಬಿದಿರೆಯ ಆಳ್ವಾಸ್ ನಲ್ಲಿ  “ಕಲೋತ್ಸವಂ- 2024”
    Next Article ಬೆಂಗಳೂರಿನಲ್ಲಿ ಸಭಿಕರನ್ನು ರಂಜಿಸಿದ ‘ಸುದರ್ಶನ ಗರ್ವಭಂಗ’ ಯಕ್ಷಗಾನ
    roovari

    Add Comment Cancel Reply


    Related Posts

    ಉದ್ಘಾಟನೆಗೊಂಡ ಥಂಡರ್ ಗೈಸ್ ಬಳಗದ ಮಕ್ಕಳ ಬೇಸಿಗೆ ಶಿಬಿರ

    April 16, 2025

    ಸನಾತನ ನಾಟ್ಯಾಲಯ ವತಿಯಿಂದ ‘ಸನಾತನ ನೃತ್ಯ ಪ್ರೇರಣಾ’ ಮತ್ತು ‘ಭರತನಾಟ್ಯ’

    April 8, 2025

    ಕುದ್ರೋಳಿ ಗಣೇಶ್ ಇವರಿಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ

    March 15, 2025

    ವಿಶೇಷ ಲೇಖನ – ಗಂಧರ್ವಾಂಶ ಸಂಭೂತ ಆರ್. ಎಸ್. ಕೇಶವಮೂರ್ತಿ

    March 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.